ಆ್ಯಪ್ನಗರ

ದೆಹಲಿಯಲ್ಲಿ ಹೆಚ್ಚುತ್ತಿರುವ ಕೊರೊನಾ: ಅಮಿತ್ ಶಾ-ಅರವಿಂದ್ ಕೇಜ್ರಿವಾಲ್ ಸಭೆ!

ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಇಂದು ಸಭೆ ನಡೆದಿದ್ದು, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೊರೊನಾ ವೈರಸ್ ಹಾವಳಿಯನ್ನು ನಿಯಂತ್ರಿಸುವ ಕುರಿತು ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ.

Vijaya Karnataka Web 14 Jun 2020, 11:57 am
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ.
Vijaya Karnataka Web Meeting
ಅಮಿತ್ ಶಾ-ಅರವಿಂದ್ ಕೇಜ್ರಿವಾಲ್ ಸಭೆ


ದೆಹಲಿ ಆಸ್ಪತ್ರೆಗಳ ವ್ಯವಸ್ಥೆಯ ಕುರಿತು ಸುಪ್ರೀಂಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ ಅಮಿತ್ ಶಾ ಹಾಗೂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಕೊರೊನಾ ವೈರಸ್ ಹಾವಳಿ ತಡೆಗಟ್ಟುವ ಕ್ರಮಗಳ ಕುರಿತು ಚರ್ಚೆ ನಡೆಸಿದ್ದಾರೆ.

ಮಹಾರಾಷ್ಟ್ರ ಹಾಗೂ ತಮಿಳುನಾಡು ಬಳಿಕ ದೇಶದಲ್ಲಿ ಅತ್ಯಂತ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿರುವ ದೆಹಲಿಯಲ್ಲಿ, ದಿನೇ ದಿನೇ ವೈರಸ್ ಪ್ರಕರಣಗಳು ಹೆಚ್ಚುತ್ತಿವೆ.

ಕೊರೊನಾ: ನಿಯಂತ್ರಣ ತಪ್ಪಿದ ದಿಲ್ಲಿ, ಭಾನುವಾರ ಕೇಜ್ರಿವಾಲ್‌ ಜೊತೆ ಅಮಿತ್‌ ಶಾ ಸಭೆ



ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್, ದೆಹಲಿ ಲೆ.ಗವರ್ನರ್ ಅನಿಲ್ ಬೈಜ್, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಏಮ್ಸ್ ಡಾ. ರಣ್‌ದೀಪ್ ಗುಲೆರಿಯಾ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಸಭೆ ನಡೆಸಿ ಚರ್ಚೆ ನಡೆಸಿದರು.

ಕೊರೊನಾ ವೈರಸ್ ಹಾವಳಿಯನ್ನು ತಡೆಗಟ್ಟುವುದು ಹಾಗೂ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವೇಗವನ್ನು ಹೆಚ್ಚಿಸುವುದು ಸೇರಿದಂತೆ ದೆಹಲಿಯಲ್ಲಿ ಕೋವಿಡ್-19 ರೋಗಿಗಳಿಗಾಗಿಯೇ ವಿಶೇಷ ಆಸ್ಪತ್ರೆ ಕಟ್ಟುವ ಕುರಿತು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಇನ್ನು ಕೇವಲ ಒಂದು ವಾರದ ಅವಧಿಯಲ್ಲಿ ಅಮಿತ್ಶಾ ಹಾಗೂ ಅರವಿಂದ್ ಕೇಜ್ರಿವಾಲ್ ಎರಡನೇ ಬಾರಿ ಭೇಟಿ ಮಾಡುತ್ತಿರುವುದು ಕೂಡ ಕುತೂಹಲ ಕೆರಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ