ಆ್ಯಪ್ನಗರ

ಶ್ರೀಮಂತರಿಗೆ ತೆರಿಗೆ ಮನ್ನಾ, ಬಡವರ ಮೇಲೆ ಹೇರಿಕೆ: ಕೇಂದ್ರದ ವಿರುದ್ಧ ಕೇಜ್ರಿವಾಲ್ ಆರೋಪ

Arvind Kejriwal : ಕೇಂದ್ರ ಸರ್ಕಾರವು ಶ್ರೀಮಂತರ ತೆರಿಗೆಗಳನ್ನು ಮನ್ನಾ ಮಾಡುತ್ತಿದೆ. ಆದರೆ ಜನ ಸಾಮಾನ್ಯರ ಮೇಲೆ ತೆರಿಗೆಗಳನ್ನು ಹೇರುತ್ತಿದೆ ಎಂದು ದಿಲ್ಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

Edited byಅಮಿತ್ ಎಂ.ಎಸ್ | Vijaya Karnataka Web 11 Aug 2022, 6:15 pm

ಹೈಲೈಟ್ಸ್‌:

  • ಕೇಂದ್ರದ ವಿರುದ್ಧ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪ
  • ಶ್ರೀಮಂತರಿಗೆ ತೆರಿಗೆ ಮನ್ನಾ, ಬಡವರ ಮೇಲೆ ತೆರಿಗೆ ಹೇರಿಕೆ ಮಾಡಲಾಗುತ್ತಿದೆ
  • ಸೈನಿಕರಿಗೆ ಪಿಂಚಣಿ ನೀಡಲು ಹಣವಿಲ್ಲದಿರುವುದು ಇದು ಮೊದಲ ಸಲ

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Delhi chief minister Arvind Kejriwal.
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಜನಸಾಮಾನ್ಯರ ಮೇಲೆ ತೆರಿಗೆಗಳನ್ನು ಹೇರಿಕೆ ಮಾಡುತ್ತಿದೆ, ಆದರೆ ಶ್ರೀಮಂತರಿಗೆ ಅದರಿಂದ ವಿನಾಯಿತಿ ನೀಡುತ್ತಿದೆ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ಆರೋಪಿಸಿದ್ದಾರೆ.
'ರೇವ್ಡಿ ಸಂಸ್ಕೃತಿ' (ಒಂದು ಬಗೆಯ ಸಿಹಿ ತಿನಿಸು) ಅಥವಾ ಉಚಿತ ಕೊಡುಗೆಗಳ ಕುರಿತಾಗಿ ಬಿಜೆಪಿ ಮತ್ತು ಇತರೆ ಪಕ್ಷಗಳ ನಡುವಿನ ಕಿತ್ತಾಟದ ಮಧ್ಯೆ ಅವರು ಈ ಹೇಳಿಕೆ ನೀಡಿದ್ದಾರೆ. ಮತದಾರರನ್ನು ಖುಷಿಯಾಗಿಡಲು ದಿಲ್ಲಿ ಮುಖ್ಯಮಂತ್ರಿ ಈ ರೀತಿ ಉಚಿತಗಳ ಘೋಷಣೆ ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಪರೋಕ್ಷ ವಾಗ್ದಾಳಿ ನಡೆಸಿದ್ದರು.
ಪುಕ್ಕಟೆ 'ಸಿಹಿ' ಅಂದರೆ ಯಾವುದು ಎಂದು ನಾನು ಹೇಳುತ್ತೇನೆ: ಪ್ರಧಾನಿ ಮೋದಿಗೆ ಕೇಜ್ರಿವಾಲ್ ತಿರುಗೇಟು

"ಅವರು ಅಗ್ನಿಪಥ್ ಯೋಜನೆಯನ್ನು ಜಾರಿಗೆ ತಂದರು. ಪಿಂಚಣಿಗೆ ನೀಡಲು ಹಣವಿಲ್ಲ ಎಂದರು. ದೇಶವು ಸ್ವಾತಂತ್ರ್ಯ ಬಂದ ಬಳಿಕ ಸೈನಿಕರಿಗೆ ಪಿಂಚಣಿ ಪಾವತಿಸಲು ಎಂದಿಗೂ ಹಣದ ಕೊರತೆ ಎದುರಿಸಿರಲಿಲ್ಲ" ಎಂದು ಕೇಜ್ರಿವಾಲ್ ಹೇಳಿದ್ದಾರೆ.

"ಕೇಂದ್ರ ಸರ್ಕಾರದ ಹಣ ಎಲ್ಲಿಗೆ ಹೋಗಿದೆ? ಕೇಂದ್ರ ಸರ್ಕಾರ ತಾನು ಸಂಗ್ರಹಿಸಿದ ತೆರಿಗೆಯ ಒಂದು ಭಾಗವನ್ನು ರಾಜ್ಯಗಳ ಜತೆ ಹಂಚಿಕೊಳ್ಳುತ್ತದೆ. ಈ ಮುನ್ನ ಇದು ಶೇ 42ರಷ್ಟಿತ್ತು. ಈಗ ಅದು ಶೇ 29-30ಕ್ಕೆ ಇಳಿದಿದೆ. 2014ರಲ್ಲಿ ತಾನು ಸಂಗ್ರಹಿಸುತ್ತಿದ್ದ ತೆರಿಗೆಗಳ ಮೊತ್ತಕ್ಕಿಂತ ಎರಡು- ಮೂರು ಪಟ್ಟು ಹೆಚ್ಚು ತೆರಿಗೆ ಸಂಗ್ರಹಿಸುತ್ತಿದೆ. ಈ ಎಲ್ಲ ಹಣ ಎಲ್ಲಿ ಹೋಗುತ್ತಿದೆ?" ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
ಲೇಖಕರ ಬಗ್ಗೆ
ಅಮಿತ್ ಎಂ.ಎಸ್
ವಿಜಯ ಕರ್ನಾಟಕದ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತ. 2009ರಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದಾರೆ. ದಿನಪತ್ರಿಕೆಗಳು ಮತ್ತು ವೆಬ್‌ ಪೋರ್ಟಲ್‌ಗಳಲ್ಲಿ ವರದಿಗಾರಿಕೆ, ಸಿನಿಮಾ ವರದಿಗಾರಿಕೆ, ಡೆಸ್ಕ್ ಹಾಗೂ ಜಿಲ್ಲಾ ಕರೆಸ್ಪಾಂಡೆಂಟ್ ಆಗಿ ಕೆಲಸ ಮಾಡಿದ ಅನುಭವ ಇವರಿಗಿದೆ. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳು ಪ್ರಮುಖ ಆಸಕ್ತಿಯ ವಿಭಾಗಗಳು. ಮಾನವಾಸಕ್ತಿಯ ಹಾಗೂ ಸ್ಫೂರ್ತಿದಾಯಕ ಕಥನಗಳನ್ನು ನಿರೂಪಿಸುವುದು ವೃತ್ತಿಯಲ್ಲಿನ ನೆಚ್ಚಿನ ಸಂಗತಿ. ಪ್ರವಾಸ, ಕ್ರಿಕೆಟ್, ಓದು, ಕೃಷಿ ಇತರೆ ಇವರ ಆಸಕ್ತಿ ಮತ್ತು ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ