ಆ್ಯಪ್ನಗರ

ವಿಧಾನಪರಿಷತ್ ಚುನಾವಣೆ: ಅಮಿತ್‌ ಶಾ ಜೊತೆ ಬಸವರಾಜ ಬೊಮ್ಮಾಯಿ ಫೋನ್‌ ಮೂಲಕ ಮಾತುಕತೆ!

ವಿಧಾನಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಜೊತೆ ಫೋನ್‌ ಮೂಲಕ ಮಾತುಕತೆ ಮಾಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ದೆಹಲಿಗೆ ತೆರಳಿದ್ದರೂ ಶಾ ಭೇಟಿ ಮಾಡಲು ಸಿಎಂ ಬಸವರಾಜ ಬೊಮ್ಮಾಯಿಗೆ ಸಾಧ್ಯವಾಗಿಲ್ಲ.

Vijaya Karnataka Web 21 May 2022, 10:24 am

ಹೈಲೈಟ್ಸ್‌:

  • ವಿಧಾನಪರಿಷತ್ ಚುನಾವಣೆಯ ಹಿನ್ನೆಲೆ
  • ಅಮಿತ್ ಶಾ ಜೊತೆಗೆ ಸಿಎಂ ಮಾತುಕತೆ
  • ಫೋನ್ ಮೂಲಕ ಬೊಮ್ಮಾಯಿ ಮಾತುಕತೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Basavaraj Bommai
ಹೊಸ ದಿಲ್ಲಿ: ವಿಧಾನಸಭೆಯಲ್ಲಿ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಕುರಿತಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ಮಾತುಕತೆ ನಡೆಸಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ದೆಹಲಿಯಲ್ಲಿ ಶನಿವಾರ ಮಾತನಾಡಿದ ಅವರು, ತುರ್ತು ಕಾರ್ಯಕ್ರಮ ಇದ್ದಿದ್ದರಿಂದ ಶಾ ಅವರನ್ನು ಮುಖತಃ ಭೇಟಿ ಮಾಡಲು ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ ಫೋನ್‌ನಲ್ಲಿ ಮಾತುಕತೆ ನಡೆಸಿದ್ದೇನೆ, ಪಟ್ಟಿಯ ಬಗ್ಗೆ ವಿವರ ನೀಡಿದ್ದೇನೆ ಎಂದು ತಿಳಿಸಿದರು.


ಅಮಿತ್ ಶಾ ಜೊತೆ ಫೋನ್ ನಲ್ಲಿ ಮಾತುಕತೆ ಆಗಿದೆ. ಪಟ್ಟಿ ಬಗ್ಗೆ ವಿವರ ಕೊಟ್ಟಿದ್ದೇನೆ. ಅವರ ಸಲಹೆಯಂತೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಜೊತೆ ಚರ್ಚೆ ಮಾಡಿದ್ದೇನೆ. ನಾಲ್ಕು ಪರಿಷತ್‌ ಸ್ಥಾನಗಳಿಗೆ ತುರ್ತಾಗಿ ಅಭ್ಯರ್ಥಿ ಘೋಷಣೆ ಆಗಬೇಕಾಗಿರುವ ಹಿನ್ನೆಲೆಯಲ್ಲಿ ಎಲ್ಲ ವಿವರಗಳನ್ನು ಅರುಣ್ ಸಿಂಗ್ ಗೆ ನೀಡಿದ್ದೇನೆ. ಆದಷ್ಟು ಬೇಗ ಅರುಣ್ ಸಿಂಗ್ ತೀರ್ಮಾನ ಮಾಡುತ್ತೇನೆ ಎಂದು ಹೇಳಿದ್ದಾರೆ ಎಂದು ತಿಳಿಸಿದರು.
ರಾಜ್ಯಸಭೆ, ಪರಿಷತ್‌ ಟಿಕೆಟ್‌ ಕಸರತ್ತು: ಹೈಕಮಾಂಡ್‌ ಬುಲಾವ್‌, ದೆಹಲಿಗೆ ಡಿಕೆಶಿ, ಸಿದ್ದರಾಮಯ್ಯ

ಇದೇ ಸಂದರ್ಭದಲ್ಲಿ ಜಿಲ್ಲೆಗಳಲ್ಲಿ ಮಳೆಯಿಂದ ಪ್ರವಾಹ ಸೃಷ್ಟಿಯಾಗಿರುವ ವಿಚಾರವಾಗಿ ಮಾತನಾಡಿ, ಹಲವು ಜಿಲ್ಲೆಗಳಲ್ಲಿ ಮಳೆ ಅವಾಂತರ ಆಗಿದ್ದರಿಂದ ಡಿಸಿಗಳ ಜೊತೆಗೆ ವಿಡಿಯೋ ಸಂವಾದ ಆಗಬೆಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯಕ್ಕೆ ವಾಪಸ್ ತೆರಳುತ್ತಿದ್ದೇನೆ ಎಂದರು. ಈಗಾಗಲೇ ಕಂದಾಯ ಸಚಿವ ಆರ್‌. ಅಶೋಕ್ ಡಿಸಿಗಳ ಜೊತೆ ಸಭೆ ನಡೆಸಿದ್ದಾರೆ. ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚನೆ ನೀಡಿದ್ದೇನೆ ಎಲ್ಲ ನೆರವು ನೀಡಬೇಕು ಎಂದು. ಇನ್ನು ಮಳೆ ಹಾನಿಗೊಳಗಾದವರಿಗೆ ಎನ್‌ಡಿಆರ್‌ಎಫ್ ಅಡಿಯಲ್ಲಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

ಸಂಪುಟ ಚರ್ಚೆ ಆಗಿಲ್ಲ


ಅಮಿತ್ ಶಾ ಜೊತೆಗೆ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಚರ್ಚೆ ಆಗಿಲ್ಲ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದರು. ಈ ನಡುವೆ ಬಿಬಿಎಂಪಿ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. 23 ನೇ ತಾರೀಕು ಸ್ಥಳೀಯ ಸಂಸ್ಥೆಗಳ ಚುನಾವಣೆಯ ಬಗ್ಗೆ ತೀರ್ಪು ಬರುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಸಂಪುಟ ವಿಸ್ತರಣೆಯ ಬಗ್ಗೆ ಚರ್ಚೆ ಆಗಿಲ್ಲ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ