ಆ್ಯಪ್ನಗರ

CBI Raids Manish Sisodia: ಎಎಪಿ ಸರ್ಕಾರಕ್ಕೆ ಆಘಾತ: ಡಿಸಿಎಂ ಮನೀಶ್ ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ

CBI Raids Manish Sisodia: ದಿಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸ ಹಾಗೂ ದಿಲ್ಲಿ ಸುತ್ತಮುತ್ತಲಿನ 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿದೆ. ದಿಲ್ಲಿ ಸರ್ಕಾರದ ಅಬಕಾರಿ ನೀತಿಯಲ್ಲಿನ ಅಕ್ರಮ ಆರೋಪದಲ್ಲಿ ಈ ದಾಳಿ ನಡೆದಿದೆ.

Edited byಅಮಿತ್ ಎಂ.ಎಸ್ | Vijaya Karnataka Web 19 Aug 2022, 9:32 am

ಹೈಲೈಟ್ಸ್‌:

  • ದಿಲ್ಲಿ ಡಿಸಿಎಂ ಮನೀಶ್ ಸಿಸೋಡಿಯಾ ನಿವಾಸದ ಮೇಲೆ ದಾಳಿ
  • ದಿಲ್ಲಿ ಸುತ್ತಮುತ್ತಲಿನ 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಸಿಬಿಐ ತಪಾಸಣೆ
  • ನೂತನ ಅಬಕಾರಿ ನೀತಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ದಾಳಿ

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web manish sisodia
ಹೊಸದಿಲ್ಲಿ: ದಿಲ್ಲಿಯ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರಕ್ಕೆ ಕೇಂದ್ರ ಸಂಸ್ಥೆಗಳಿಂದ ಮತ್ತೊಂದು ಆಘಾತ ಎದುರಾಗಿದೆ. ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸ ಸೇರಿದಂತೆ, ದಿಲ್ಲಿ ಮತ್ತು ಸುತ್ತಮುತ್ತಲಿನ 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಸಿಬಿಐ ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದೆ.
ದಿಲ್ಲಿ ಅಬಕಾರಿ ನೀತಿಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಈ ದಾಳಿಗಳನ್ನು ನಡೆಸಲಾಗಿದೆ ಎಂದು ವರದಿಯಾಗಿದೆ. ತಮ್ಮ ವಿರುದ್ಧದ ಎಲ್ಲ ಆರೋಪಗಳನ್ನು ನಿರಾಕರಿಸಿರುವ ಮನೀಶ್ ಸಿಸೋಡಿಯಾ, ತನಿಖೆಗೆ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.
ಆಪ್‌-ಕೇಂದ್ರದ ನಡುವೆ 'ಲಿಕ್ಕರ್‌' ವಾರ್‌, ಡಿಸಿಎಂ ವಿರುದ್ಧ ಸಿಬಿಐ ತನಿಖೆಗೆ ಎಲ್‌ಜಿ ಸಕ್ಸೇನಾ ಶಿಫಾರಸು

"ಸಿಬಿಐ ನನ್ನ ಮನೆಗೆ ಬಂದಿದೆ. ನಾವು ತನಿಖೆಗೆ ಸಂಪೂರ್ಣ ಸಹಕಾರ ನೀಡಲಿದ್ದೇವೆ. ಇದರಿಂದ ಸತ್ಯ ಶೀಘ್ರವೇ ಹೊರಬೀಳಲಿದೆ. ಇದುವರೆಗೂ ನನ್ನ ವಿರುದ್ಧ ಅನೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಆದರೆ ಏನೂ ಹೊರಬಂದಿಲ್ಲ. ಅವುಗಳಿಂದ ಯಾವ ಪ್ರಯೋಜನ ಕೂಡ ಆಗಿಲ್ಲ. ದೇಶಕ್ಕೆ ಉತ್ತದಿಲ್ಮಲಿ ಶಿಕ್ಷಣ ನೀಡುವ ನನ್ನ ಕೆಲಸವನ್ನು ತಡೆಯುವುದು ಸಾಧ್ಯವಿಲ್ಲ" ಎಂದು ಮನೀಶ್ ಟ್ವೀಟ್ ಮಾಡಿದ್ದಾರೆ.

ದೇಶದಲ್ಲಿ ಒಳ್ಳೆಯ ಕೆಲಸ ಮಾಡಿದವರಿಗೆ ಈ ರೀತಿ ಕಿರುಕುಳ ನೀಡುತ್ತಿರುವುದು ದುರದೃಷ್ಟಕರ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ದಿಲ್ಲಿ ಸರ್ಕಾರ ಅದ್ಭುತ ಕೆಲಸ ಮಾಡಿರುವ ಕಾರಣಕ್ಕಾಗಿ ತೊಂದರೆ ನೀಡಲಾಗುತ್ತಿದೆ. ಈ ಕಾರಣಕ್ಕಾಗಿಯೇ ಎರಡೂ ಇಲಾಖೆಗಳ ಸಚಿವರನ್ನು ಗುರಿ ಮಾಡಲಾಗುತ್ತಿದೆ. ಕೋರ್ಟ್‌ನಲ್ಲಿ ಸತ್ಯ ಹೊರಬರಲಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ.
ದೇಶಾದ್ಯಂತ ಉಚಿತ ವಿದ್ಯುತ್, ಶಿಕ್ಷಣ, ಆರೋಗ್ಯ ಸೇವೆ, ನಿರುದ್ಯೋಗ ಭತ್ಯೆ ನೀಡಿ: ಮೋದಿ ಸರ್ಕಾರಕ್ಕೆ ಕೇಜ್ರಿವಾಲ್ ಆಗ್ರಹ

"ಅಮೆರಿಕದ ಅತಿ ದೊಡ್ಡ ಪತ್ರಿಕೆ ನ್ಯೂಯಾರ್ಕ್ ಟೈಮ್ಸ್‌ನ ಮೊದಲ ಪುಟದಲ್ಲಿ ದಿಲ್ಲಿಯ ಶಿಕ್ಷಣ ಮಾದರಿಯನ್ನು ಹೊಗಳಿದ ಮತ್ತು ಮನೀಶ್ ಸಿಸೋಡಿಯಾ ಅವರ ಚಿತ್ರ ಪ್ರಕಟಗೊಂಡ ದಿನವೇ, ಕೇಂದ್ರ ಸರ್ಕಾರವು ಮನೀಶ್ ಅವರ ಮನೆಗೆ ಸಿಬಿಐ ಅನ್ನು ಕಳುಹಿಸಿತ್ತು. ಸಿಬಿಐಗೆ ಸ್ವಾಗತ. ನಾವು ಸಂಪೂರ್ಣ ಸಹಕರಿಸುತ್ತೇವೆ. ಈ ಹಿಂದೆ ಕೂಡ ಅನೇಕ ದಾಳಿಗಳು ನಡೆದಿದ್ದರೂ, ಏನೂ ಸಿಕ್ಕಿರಲಿಲ್ಲ. ಈಗಲೂ ಏನೂ ಸಿಗುವುದಿಲ್ಲ" ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.


"ದಿಲ್ಲಿಯ ಶಿಕ್ಷಣ ಮತ್ತು ಆರೋಗ್ಯ ಮಾದರಿಯನ್ನು ಇಡೀ ಜಗತ್ತು ಚರ್ಚಿಸುತ್ತಿದೆ. ಅವರು ಅದನ್ನು ತಡೆಯಲು ಬಯಸಿದ್ದಾರೆ. ಈ ಕಾರಣಕ್ಕಾಗಿ ದಿಲ್ಲಿಯ ಆರೋಗ್ಯ ಮತ್ತು ಶಿಕ್ಷಣ ಸಚಿವರ ಮೇಲೆ ದಾಳಿಗಳು ಮತ್ತು ಬಂಧನಗಳು ನಡೆಯುತ್ತಿವೆ. 75 ವರ್ಷಗಳಲ್ಲಿ ಉತ್ತಮ ಕೆಲಸ ಮಾಡಲು ಪ್ರಯತ್ನಿಸಿದವರನ್ನೆಲ್ಲ ತಡೆಯಲಾಗಿತ್ತು. ಇದರಿಂದಾಗಿ ಭಾರತ ಹಿಂದೆ ಉಳಿದಿದೆ. ದಿಲ್ಲಿ ಸರ್ಕಾರ ಒಳ್ಳೆಯ ಕೆಲಸ ಮಾಡುವುದನ್ನು ತಡೆಯಲು ಬಿಡುವುದಿಲ್ಲ" ಎಂದು ಟ್ವೀಟ್ ಮಾಡಿದ್ದಾರೆ.

ದಿಲ್ಲಿ ಸರ್ಕಾರ ಸೆಪ್ಟೆಂಬರ್ 1ರಂದು ತನ್ನ ಹಳೆಯ ಅಬಕಾರಿ ನೀತಿಗೆ ಮರಳಿ ಹೋಗಲಿದೆ. ನೂತನ ಅಬಕಾರಿ ಕಾನೂನಿನ ವಿಚಾರವಾಗಿ ಭಾರಿ ವಿವಾದ ಸೃಷ್ಟಿಯಾಗಿದೆ. ಹಳೆಯ ಅಬಕಾರಿ ನೀತಿ ಅಡಿ ಯಾವುದೇ ಖಾಸಗಿ ವ್ಯಕ್ತಿಗಳು ಭಾಗಿಯಾಗಲು ಸಾಧ್ಯವಾಗುವುದಿಲ್ಲ. ಸೆಪ್ಟೆಂಬರ್ 1ರಿಂದ ದಿಲ್ಲಿ ಸರ್ಕಾರದ ಸಂಸ್ಥೆಗಳಿಗೆ ಮಾತ್ರ ಚಿಲ್ಲರೆ ಲಿಕ್ಕರ್ ಅಂಗಡಿಗಳನ್ನು ನಡೆಸಲು ಅವಕಾಶ ನೀಡಲಾಗುತ್ತದೆ.
ನಮ್ಮೆಲ್ಲರನ್ನೂ ಒಟ್ಟಿಗೆ ಜೈಲಿಗೆ ಹಾಕಿ: ಮೋದಿಗೆ ಅರವಿಂದ್ ಕೇಜ್ರಿವಾಲ್ ವಿಡಂಬನಾತ್ಮಕ ಮನವಿ!

ನೂತನ ಅಬಕಾರಿ ನೀತಿಯಲ್ಲಿ, ದಿಲ್ಲಿ ಸರ್ಕಾರವು ರಾಜಧಾನಿಯಲ್ಲಿ ಲಿಕ್ಕರ್ ವ್ಯವಹಾರದಿಂದ ಹಿಂದಕ್ಕೆ ಸರಿದು, ಖಾಸಗಿ ವ್ಯಕ್ತಿಗಳು ಮಾರಾಟದಲ್ಲಿ ತೊಡಗಲು ಅವಕಾಶ ನೀಡಿತ್ತು. ಮದ್ಯ ಮಾರಾಟದ ವೇಳೆ ರಿಯಾಯಿತಿ, ಒನ್ ಪ್ಲಸ್ ಒನ್ ಆಫರ್‌ನಂತಹ ಕೊಡುಗೆಗಳನ್ನು ಪರಿಚಯಿಸಿತ್ತು.
ಲೇಖಕರ ಬಗ್ಗೆ
ಅಮಿತ್ ಎಂ.ಎಸ್
ವಿಜಯ ಕರ್ನಾಟಕದ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತ. 2009ರಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದಾರೆ. ದಿನಪತ್ರಿಕೆಗಳು ಮತ್ತು ವೆಬ್‌ ಪೋರ್ಟಲ್‌ಗಳಲ್ಲಿ ವರದಿಗಾರಿಕೆ, ಸಿನಿಮಾ ವರದಿಗಾರಿಕೆ, ಡೆಸ್ಕ್ ಹಾಗೂ ಜಿಲ್ಲಾ ಕರೆಸ್ಪಾಂಡೆಂಟ್ ಆಗಿ ಕೆಲಸ ಮಾಡಿದ ಅನುಭವ ಇವರಿಗಿದೆ. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳು ಪ್ರಮುಖ ಆಸಕ್ತಿಯ ವಿಭಾಗಗಳು. ಮಾನವಾಸಕ್ತಿಯ ಹಾಗೂ ಸ್ಫೂರ್ತಿದಾಯಕ ಕಥನಗಳನ್ನು ನಿರೂಪಿಸುವುದು ವೃತ್ತಿಯಲ್ಲಿನ ನೆಚ್ಚಿನ ಸಂಗತಿ. ಪ್ರವಾಸ, ಕ್ರಿಕೆಟ್, ಓದು, ಕೃಷಿ ಇತರೆ ಇವರ ಆಸಕ್ತಿ ಮತ್ತು ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ