ಆ್ಯಪ್ನಗರ

ಸಂಪುಟ ಸರ್ಕಸ್‌: ಅಮಿತ್ ಶಾ ಭೇಟಿಗೆ ಕಾಯುತ್ತಿದ್ದಾರೆ ಬಿಎಸ್‌ವೈ

ಸಂಪುಟ ವಿಸ್ತರಣೆ ಮಾಡುವ ನಿಟ್ಟಿನಲ್ಲಿ ವರಿಷ್ಠರ ಭೇಟಿಗೆ ದಿಲ್ಲಿಯಲ್ಲಿರುವ ಸಿಎಂ ಬಿಎಸ್‌ ಯಡಿಯೂರಪ್ಪ ಅವರಿಗೆ ಇದುವರೆಗೂ ಅಮಿತ್ ಶಾ ಜೊತೆಗೆ ಸಂಪುಟ ವಿಸ್ತರಣೆ ಕುರಿತಾಗಿ ಮಾತುಕತೆ ನಡೆಸಲು ಸಾಧ್ಯವಾಗಿಲ್ಲ. ಶುಕ್ರವಾರ ಶಾ ಭೇಟಿಯಾಗುವ ನಿರೀಕ್ಷೆಯಲ್ಲಿ ಸಿಎಂ ಬಿಎಸ್‌ವೈ ಇದ್ದರೂ ಸಾಧ್ಯವಾಗುತ್ತಾ ಎಂಬ ಕುತೂಹಲ ಸೃಷ್ಟಿಸಿದೆ.

Vijaya Karnataka Web 31 Jan 2020, 10:49 am
ಹೊಸದೆಹಲಿ: ಸಂಪುಟ ವಿಸ್ತರಣೆ ಕುರಿತಾಗಿ ವರಿಷ್ಠರ ಜೊತೆಗೆ ಮಾತುಕತೆ ನಡೆಸಲು ಸಿಎಂ ಬಿ.ಎಸ್‌ ಯಡಿಯೂರಪ್ಪ ದೆಹಲಿಯಲ್ಲಿ ಬೀಡುಬಿಟ್ಟಿದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗಾಗಿ ಕಾಯುತ್ತಿದ್ದಾರೆ. ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಜೊತೆಗೆ ಮಾತುಕತೆ ನಡೆಸಿದ್ದರು. ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆಗೆ ಭೇಟಿ ಕೇವಲ ಹೂಗುಚ್ಚ ನೀಡುವುದಕ್ಕಾಗಿ ಮಾತ್ರವೇ ಸೀಮಿತವಾಗಿತ್ತು.
Vijaya Karnataka Web chief minister bs yeddyurappa not yet meet amit shah in delhi
ಸಂಪುಟ ಸರ್ಕಸ್‌: ಅಮಿತ್ ಶಾ ಭೇಟಿಗೆ ಕಾಯುತ್ತಿದ್ದಾರೆ ಬಿಎಸ್‌ವೈ


ಶುಕ್ರವಾರ ಅಮಿತ್ ಶಾ ಜೊತೆಗೆ ಭೇಟಿ ನಿಗದಿಯಾದರೂ ಪದೇ ಪದೇ ಮುಂದೂಡಲಾಗುತ್ತಿದೆ. ಶುಕ್ರವಾರ ಬೆಳಗ್ಗೆ 10 ಗಂಟೆಗೆ ಶಾ ಜೊತೆಗೆ ಮಾತುಕತೆ ನಡೆಸುತ್ತಾರೆ ಎಂದು ಹೇಳಲಾಗುತ್ತಿತ್ತು. ಆದರೆ ಅದು ಮುಂದೂಡಲ್ಪಟ್ಟಿದೆ. 11 ಗಂಟೆಗೆ ಸಂಸತ್ ಜಂಟಿ ಅಧಿವೇಶನದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ.

'ಡಿಸಿಎಂ ಹುದ್ದೆ ನೀಡಿ' ಶ್ರೀರಾಮುಲು ಪರ ಕಾಂಗ್ರೆಸ್‌ ಶಾಸಕರ ಬ್ಯಾಟಿಂಗ್‌ !

ಇದಾದ ಬಳಿಕ ಶನಿವಾರ ಕೇಂದ್ರ ಬಜೆಟ್‌ ಮಂಡನೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕಾರಣಿ ಸಮಿತಿ ಸಭೆ ನಡೆಯಲಿದ್ದು ಶಾ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಸಂಜೆ 4 ಗಂಟೆಗೆ ದೆಹಲಿ ಚುನಾವಣಾ ಸಮಾವೇಶಕ್ಕೂ ಶಾ ತೆರಳಬೇಕಿದೆ.

ಅಮಿತ್ ಶಾ ಕಾರ್ಯಕ್ರಮಗಳು ಬಹುತೇಕ ನಿಗದಿಯಾಗಿದ್ದು ಈ ನಡುವೆ ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಂಪುಟ ವಿಸ್ತರಣೆ ಕುರಿತಾಗಿ ಮಾತುಕತೆ ನಡೆಸುವುದು ಯಾವಾಗ ಎಂಬುವುದು ಕುತೂಹಲ ಕೆರಳಿಸಿದೆ.

ವರಿಷ್ಠರ ಭೇಟಿಗಾಗಿ ಸಿಎಂ ಬಿಎಸ್‌ ಯಡಿಯೂರಪ್ಪ ದೆಹಲಿ ಕನ್ನಡ ಭವನದಲ್ಲಿ ಕಾಯುತ್ತಿದ್ದಾರೆ. ಕೆಲವು ಸಚಿವಾಕಾಂಕ್ಷಿಗಳೂ ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ. ವರಿಷ್ಠರ ಜೊತೆಗಿನ ಮಾತುಕತೆಯ ಬಳಿಕ ಶುಕ್ರವಾರ ಬೆಳಗ್ಗೆ ಸಿಎಂ ರಾಜ್ಯಕ್ಕೆ ಹಿಂತಿರುಗುವವರಿದ್ದರು. ಆದರೆ ಸದ್ಯದ ಬೆಳವಣಿಗೆಯಲ್ಲಿ ಇದು ಸಾಧ್ಯವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ.

ಒಂದು ವೇಳೆ ಅಮಿತ್ ಶಾ ಹಾಗೂ ಜೆಪಿ ನಡ್ಡ ಜೊತೆಗೆ ಸುದೀರ್ಘ ಮಾತುಕತೆ ನಡೆಯದೆ ಇದ್ದಲ್ಲಿ ಸಂಪುಟ ವಿಸ್ತರಣೆ ಸಂಕಟ ಮತ್ತಷ್ಟು ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ದಟ್ಟವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ