ಆ್ಯಪ್ನಗರ

ದೆಹಲಿಯ ಕರ್ನಾಟಕ ಭವನಕ್ಕೆ ಶಿಲಾನ್ಯಾಸ, ಕಾಮಗಾರಿಗೆ ಬಿಎಸ್‌ವೈ ಚಾಲನೆ

ದೆಹಲಿಯ ಕರ್ನಾಟಕ ಭವನದ ನೂತನ ಕಟ್ಟಡ ಕಾಮಗಾರಿಗೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಶಿಲಾನ್ಯಾಸ ನೆರವೇರಿಸಿದರು. ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಸಂಸದರು ಹಾಗೂ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Vijaya Karnataka Web 18 Sep 2020, 9:18 am
ಹೊಸದಿಲ್ಲಿ: ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ವತಿಯಿಂದ ದೆಹಲಿಯ ಕರ್ನಾಟಕ ಭವನ -1 ಕಾವೇರಿ ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಗೆ ‌ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶುಕ್ರವಾರ ಚಾಲನೆ ನೀಡಿದರು.
Vijaya Karnataka Web bsy


ಸಂಪುಟ ವಿಸ್ತರಣೆ ಹಾಗೂ ಪ್ರವಾಹ ಪರಿಹಾರ ವಿಚಾರವಾಗಿ ದೆಹಲಿ ಪ್ರವಾಸದಲ್ಲಿರುವ ಬಿಎಸ್‌ವೈ ಶುಕ್ರವಾರ ಬೆಳಗ್ಗೆ ಕರ್ನಾಟಕ ಭವನದ ನೂತನ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದರು.

ಪಿತೃ ಪಕ್ಷದ ಬಳಿಕ ಸಂಪುಟ ವಿಸ್ತರಣೆ? ಎಂಟಿಬಿ, ಕತ್ತಿ ಸೇರಿದಂತೆ ನಾಲ್ವರಿಗೆ ಮಂತ್ರಿ ಭಾಗ್ಯ!

ಅಂದಹಾಗೆ ಸಿಎಂ ಬಿಎಸ್‌ವೈ ಅವರು ಇದು ಎರಡನೇ ಬಾರಿ ಕಟ್ಟಡಕ್ಕೆ ಶಿಲಾನ್ಯಾಸ ಮಾಡಿರುವುದಾಗಿದೆ. ಈ ಹಿಂದೆಯೂ ಯಡಿಯೂರಪ್ಪ ಈ ಕಟ್ಟಡದ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದರು.

ಮಾಜಿ ಲೋಕೋಪಯೋಗಿ ಸಚಿವ ಎಚ್‌ಡಿ ರೇವಣ್ಣ ಅವಧಿಯಲ್ಲಿ ದೆಹಲಿಯಲ್ಲಿ ಕರ್ನಾಟಕ ಭವನದಲ್ಲಿ ಉಳಿದುಕೊಂಡಿದ್ದ ಬಿಎಸ್‌ವೈ ರೇವಣ್ಣ ಅವರ ಒತ್ತಾಯಕ್ಕೆ ಮಣಿದು ಅಡಿಗಲ್ಲು ಹಾಕಿದ್ದರು.

ಕರ್ನಾಟಕ ಭವನ ಕಟ್ಟಡ ನಿರ್ಮಾಣಕ್ಕೆ 82 ಕೋಟಿ ಈ ಹಿಂದೆ ಬಿಡುಗಡೆಗೊಂಡಿತ್ತು. ಇದೀಗ ಬಿಜೆಪಿ ಸರ್ಕಾರ ಹೊಸ ವಿನ್ಯಾಸದೊಂದಿಗೆ 120 ಕೋಟಿ ವೆಚ್ಚದಲ್ಲಿ ಕಟ್ಟಡವನ್ನು ನಿರ್ಮಾಣ ಮಾಡಲಿದೆ. ಮಂಗಳವಾರ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಅನುದಾನ ಬಿಡುಗಡೆಗೆ ಆಡಳಿತಾತ್ಮಕ ಒಪ್ಪಿಗೆ ನೀಡಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ