ಆ್ಯಪ್ನಗರ

ಜೈಲಲ್ಲಿದ್ದಾಗ ನೈತಿಕ ಬೆಂಬಲ ! ದೆಹಲಿಯಲ್ಲಿ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾದ ಡಿಕೆಶಿ

ಐಟಿ ದಾಳಿಗೊಳಲಾಗಿ ದೆಹಲಿ ಪೊಲೀಸರ ವಶದಲ್ಲಿದ್ದ ಸಂದರ್ಭದಲ್ಲಿ ಸಹಕಾರ ಹಾಗೂ ನೈತಿಕ ಬೆಂಬಲ ನೀಡಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಭೇಟಿಯಾಗಿ ಧನ್ಯವಾದ ಸಲ್ಲಿಸಿದ್ದಾರೆ. ದೆಹಲಿಯಲ್ಲಿ ಭಾನುವಾರ ಅವರು ಭೇಟಿಯಾಗಿದ್ದು ಈ ವಿಚಾರವನ್ನು ಹಂಚಿಕೊಂಡಿದ್ದಾರೆ.

Vijaya Karnataka Web 26 Jan 2020, 2:57 pm
ಹೊಸದೆಹಲಿ: ಐಟಿ ವಿಚಾರಣೆಯ ವೇಳೆ ಪೊಲೀಸ್‌ ಕಸ್ಟಡಿಯಲ್ಲಿದ್ದ ಸಂದರ್ಭದಲ್ಲಿ ನೈತಿಕ ಬೆಂಬಲ ನೀಡಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಮಾಜಿ ಸಚಿವ ಡಿ.ಕೆ ಶಿವಕುಮಾರ್ ದೆಹಲಿಯಲ್ಲಿ ಭಾನುವಾರ ಭೇಟಿಯಾಗಿ ಧನ್ಯವಾದ ಸಲ್ಲಿಸಿದ್ದಾರೆ.
Vijaya Karnataka Web congress leader dk shivakumar thanked two delhi police officers
ಜೈಲಲ್ಲಿದ್ದಾಗ ನೈತಿಕ ಬೆಂಬಲ ! ದೆಹಲಿಯಲ್ಲಿ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾದ ಡಿಕೆಶಿ


ಆದಾಯಕ್ಕೂ ಮೀರಿದ ಆಸ್ತಿ ಪ್ರಕರಣ ಹಾಗೂ ತೆರಿಗೆ ವಂಚನೆ ಸಂಬಧಿಸಿದಂತೆ ಡಿ.ಕೆ ಶಿವಕುಮಾರ್ ನಿವಾಸದ ಮೇಲೆ ಐಟಿ ದಾಳಿಯಾಗಿತ್ತು. ಬಳಿಕ ದೆಹಲಿಯಲ್ಲಿ ಐಟಿ ಅಧಿಕಾರಿಗಳು ವಿಚಾರಣೆಗಾಗಿ ಡಿಕೆಶಿಯವರನ್ನು ವಶಕ್ಕೆ ಪಡೆದುಕೊಂಡಿದ್ದರು.

‘ಹಸಿರು ಶಾಲು ಹೊದ್ದು ಹಲ್ಲು‌ ಕಿರಿದರೆ ಸಾಲದು’ ! ಬಿಎಸ್‌ವೈ ವಿರುದ್ಧ ಎಚ್‌ಡಿಕೆ ಟ್ವೀಟ್ದಾಳಿ

ಈ ವೇಳೆ 13 ದಿನಗಳ ಕಾಲ ಡಿಕೆಶಿ ದೆಹಲಿಯ ತುಘಲಕ್‌ ಪೊಲೀಸ್‌ ಠಾಣೆ ಹಾಗು ಖಾನ್‌ ಮಾರ್ಕೆಟ್‌ ಪೊಲೀಸ್‌ ಠಾಣೆಯ ಕಸ್ಟಡಿಯಲ್ಲಿದ್ದರು. ಬಂಧನದಲ್ಲಿದ್ದ ಸಂದರ್ಭದಲ್ಲಿ ಠಾಣೆಯ ಇಬ್ಬರು ಅಧಿಕಾರಿಗಳಾದ ಗೋವಿಂದ್‌ ಚೌಹಾಣ್ ಹಾಗೂ ಸುನೀಲ್ ಕುಮಾರ್‌ ನೈತಿಕ ಬೆಂಬಲ ಹಾಗೂ ಸಹಕಾರ ನೀಡಿದ್ದರಂತೆ. ಈ ಕಾರಣಕ್ಕಾಗಿ ಭಾನುವಾರ ದೆಹಲಿಯಲ್ಲಿ ಇಬ್ಬರು ಪೊಲೀಸ್ ಆಧಿಕಾರಿಗಳನ್ನು ಭೇಟಿ ಮಾಡಿದ ಡಿಕೆಶಿ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಡಿಕೆಶಿ ಬಂಧನ ಬಿಜೆಪಿಯ ದ್ವೇಷದ ರಾಜಕಾರಣ: ಎಂ.ಬಿ ಪಾಟೀಲ್‌ ವಾಗ್ದಾಳಿ

ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಹಾಗೂ ತೆರಿಗೆ ವಂಚನೆ ಆರೋಪದಡಿಯಲ್ಲಿ ಡಿಕೆಶಿ ವಿರುದ್ಧ ಐಟಿ ದಾಳಿ ನಡೆದಿತ್ತು. ಬಳಿಕ ಅಕ್ರಮ ಹಣಕಾಸುವ ವರ್ಗಾವಣೆ ಆರೋಪದಡಿಯಲ್ಲಿ ಡಿಕೆಶಿ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿ ಬಂಧಿನಕ್ಕೆ ಒಳಪಡಿಸಿತ್ತು.
49 ದಿನಗಳ ಕಾಲ ಡಿಕೆಶಿ ದೆಹಲಿಯ ತಿಹಾರ್‌ ಜೈಲಿನಲ್ಲಿ ಬಂಧನಲ್ಲಿದ್ದರು. ಬಳಿಕ ದೆಹಲಿ ಹೈ ಕೋರ್ಟ್ ಜಾಮೀನು ನೀಡಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ