ಆ್ಯಪ್ನಗರ

ಸಂಸತ್‌ ಅಧಿವೇಶನ : ಲೋಕಸಭೆಯಲ್ಲಿ ಕೇಂದ್ರದ ವೈಫಲ್ಯಗಳ ಬಗ್ಗೆ ಧ್ವನಿ ಎತ್ತಿದ ಡಿ.ಕೆ ಸುರೇಶ್

ಲೋಕಸಭೆಯಲ್ಲಿ ಕೇಂದ್ರದ ವೈಫಲ್ಯಗಳ ಬಗ್ಗೆ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ ಸುರೇಶ್ ಧ್ವನಿ ಎತ್ತಿದ್ದಾರೆ. ರೈತ ವಿರೋಧಿ ಕಾಯ್ದೆಗಳು, ಕೊರೋನಾ ನಿರ್ವಹಣೆ ವೈಫಲ್ಯಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

Vijaya Karnataka Web 20 Sep 2020, 11:58 am
ಹೊಸದಿಲ್ಲಿ: ರೈತ ವಿರೋಧಿ ಕಾಯ್ದೆಗಳು, ಕೊರೋನಾ ನಿರ್ವಹಣೆ ವೈಫಲ್ಯ, ರಾಜ್ಯದ ಆರ್ಥಿಕ ದುಸ್ಥಿತಿ, ಸಾಲದ ಹೊರೆ, ರಸಗೊಬ್ಬರ ಕೊರತೆ, ಜಿಡಿಪಿ ಕುಸಿತ, ನಿರುದ್ಯೋಗ, ಖಾಸಗೀಕರಣ ಸೇರಿದಂತೆ ರಾಜ್ಯದ ಸಮಸ್ಯೆಗಳು ಹಾಗೂ ಕೇಂದ್ರ ಸರ್ಕಾರದ ವೈಫಲ್ಯಗಳ ಬಗ್ಗೆ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ ಸುರೇಶ್ ಲೋಕಸಭೆಯಲ್ಲಿ ಧ್ವನಿ ಎತ್ತಿದ್ದಾರೆ.
Vijaya Karnataka Web DK suresh
ಸಂಸದ ಡಿ.ಕೆ.ಸುರೇಶ್‌


2020-21ನೇ ಸಾಲಿನ ಬಜೆಟ್ ಅನುದಾನದ ಮೇಲಿನ ಚರ್ಚೆ ವೇಳೆ ಮಾತನಾಡಿದ ಸಂಸದ ಸುರೇಶ್ ಅವರು ‘ಕೇಂದ್ರ ಸರ್ಕಾರ ದೇಶದ ಆರ್ಥಿಕತೆ ನಿರ್ವಹಣೆ ಮಾಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ. ರಾಜ್ಯದ ಸಾಲದ ಹೊರೆ ಮತ್ತಷ್ಟು ಹೆಚ್ಚಿಸುವಂತಹ ನಿರ್ದೇಶನಗಳನ್ನು ನೀಡುತ್ತಿರುವುದನ್ನು ನಾವು ಗಮನಿಸಿದ್ದೇವೆ. ಅವೈಜ್ಞಾನಿಕ ಆರ್ಥಿಕ ನೀತಿ, ಕೋವಿಡ್, ನೆರೆ ನಿರ್ವಹಣೆ ವೈಫಲ್ಯ, ಜಿಡಿಪಿ ಶೇ. -23ಕ್ಕೆ ಕುಸಿದಿದೆ ಎಂದರು.

ರಾಜ್ಯಾದ್ಯಂತ ಆಸ್ಪತ್ರೆಗಳಲ್ಲಿ'ಆಕ್ಸಿಜನ್‌' ಕೊರತೆ: ಉಸಿರುಗಟ್ಟಿ ಪ್ರಾಣ ಬಿಡುತ್ತಿದ್ದಾರೆ ರೋಗಿಗಳು!

ವರ್ಷದ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಶೇ.3ಕ್ಕೆ ಕುಸಿದಿದ್ದು, ಬಿಜೆಪಿ ಹೊಗಳುವಂತಹ ಸಾಧನೆ ಏನೂ ಮಾಡಿಲ್ಲ. ಇಂತಹ ಪರಿಸ್ಥಿತಿ ನಡುವೆ ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆ ತರಲು ಮುಂದಾಗಿದೆ. ನಿನ್ನೆಯಷ್ಟೇ ಎರಡು ರೈತ ವಿರೋಧಿ ಮಸೂದೆ ಮಂಡಿಸಲಾಗಿದೆ.

ಕೃಷಿ ಪ್ರಧಾನ ದೇಶಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ ಮೂಲಕ ಸಾಲ ನೀಡಲು ಆತ್ಮನಿರ್ಭರ ಯೋಜನೆಯಲ್ಲಿ 5 ಲಕ್ಷ ಕೋಟಿ ಕೃಷಿ ಕ್ಷೇತ್ರಕ್ಕೆ ತೊಡಗಿಸುವುದಾಗಿ ತಿಳಿಸಿದ್ದಾರೆ. ಈಗಾಗಲೇ ನೀಡಿರುವ ಸಾಲವನ್ನು ಸೇರಿಸಿ ರೈತರಿಗೆ 5 ಲಕ್ಷ ಕೋಟಿ ಸಾಲ ನೀಡುವುದಾಗಿ ಹೇಳಿಕೆ ನೀಡಿ ಕೇಂದ್ರ ಸರ್ಕಾರ ಜನರ ದಾರಿ ತಪ್ಪಿಸುತ್ತಿದೆ.

ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಚಿನ್ನಾಭರಣದ ಸಾಲದ ಮೇಲಿನ ಸಬ್ಸಿಡಿಯನ್ನು ನರೇಂದ್ರ ಮೋದಿ ಸರ್ಕಾರ ತೆಗೆದುಹಾಕಿರುವುದು ರೈತ ವಿರೋಧಿ ಕ್ರಮವಲ್ಲವೇ? ಇದಕ್ಕೆ ಪ್ರಧಾನಮಂತ್ರಿಗಳು ಹಾಗೂ ವಿತ್ತ ಸಚಿವರು ಉತ್ತರಿಸಬೇಕಾಗುತ್ತದೆ. ಕೇಂದ್ರ ಸರ್ಕಾರ ಸಹಕಾರಿ ಬ್ಯಾಂಕ್ ಗಳ ವ್ಯವಸ್ಥೆ ಹಾಳು ಮಾಡಲು ಪ್ರಯತ್ನಿಸಿದೆ ಎಂದರು.

ರಾಜ್ಯದಲ್ಲಿ ರಸಗೊಬ್ಬರದ ಕೊರತೆ ಹೆಚ್ಚಾಗುತ್ತಿದೆ. ಇನ್ನು ಇಂಧನ ತೈಲಗಳ ಬೆಲೆ ಏರಿಕೆ ಮಾಡಿದೆ. ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಸಾರ್ವಜನಿಕ ವಲಯ ಕ್ಷೇತ್ರಗಳಾದ ವಿಮೆ, ವಿಮಾನಯಾನ, ರೈಲ್ವೆ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಮುಂದಾಗಿದೆ. ಇದು ಉದ್ಯೋಗ ಸೃಷ್ಟಿಗೆ ಭಾರಿ ಹೊಡೆತ ನೀಡಿಲಿದೆ ಎಂದು ಕೇಂದ್ರ ಸರ್ಕಾರ ವಿರುದ್ಧ ಧ್ವನಿ ಎತ್ತಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ