ಆ್ಯಪ್ನಗರ

ದಿಲ್ಲಿಯಲ್ಲಿ 7-10 ದಿನದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರಲಿದೆ - ಕೇಜ್ರಿವಾಲ್‌

ದಿಲ್ಲಿಯಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳಕ್ಕೆ ದೊಡ್ಡ ಕಾರಣ ಮಾಲಿನ್ಯ. ಕೊರೊನಾ ಪ್ರಕರಣಗಳನ್ನು ನಿಯಂತ್ರಿಸಲಾಗಿತ್ತು. ಆದರೆ ಮಾಲಿನ್ಯ ಹೆಚ್ಚಾದ ನಂತರ, ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗಿದೆ ಎಂದು ಕೇಜ್ರಿವಾಲ್‌ ವಿವರಿಸಿದ್ದಾರೆ.

Agencies 13 Nov 2020, 2:31 pm
ಹೊಸದಿಲ್ಲಿ: ಕೊರೊನಾದ ಮೂರನೇ ಅಲೆ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಮೊದಲೆರಡು ಅಲೆಗಿಂತ ಪ್ರಬಲವಾಗಿದ್ದು, ಪ್ರತಿ ದಿನ 7-8 ಸಾವಿರ ಹೊಸ ಕೇಸುಗಳು ವರದಿಯಾಗುತ್ತಿವೆ. ಇದಕ್ಕೆ ಮಾಲಿನ್ಯವೇ ಪ್ರಮುಖ ಕಾರಣವಾಗಿದ್ದು, ಮುಂದಿನ 7-10 ದಿನಗಳಲ್ಲಿ ನಿಯಂತ್ರಣಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Vijaya Karnataka Web Arvind Kejriwal
ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌


“ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವುದು ನನಗೂ ಆತಂಕ ಮೂಡಿಸಿದೆ. ನಾವು ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. 7 - 10 ದಿನಗಳಲ್ಲಿ ಪ್ರಕರಣಗಳು ಇಳಿಕೆಯಾಗುವ ವಿಶ್ವಾಸವಿದೆ ಮತ್ತು ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿದೆ,” ಎಂದು ಕೇಂಜ್ರಿವಾಲ್‌ ಸಾರ್ವಜನಿಕರಿಗೆ ಸಂದೇಶ ನೀಡಿದ್ದಾರೆ.

ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾದಿಂದ ಗರಿಷ್ಠ ಸಾವುಗಳು ಸಂಭವಿಸಿದ್ದು 104 ಜನರು ಸಾವನ್ನಪ್ಪಿದ್ದರು. ಇದೇ ವೇಳೆ 7,053 ಹೊಸ ಪ್ರಕರಣಗಳೂ ವರದಿಯಾಗಿವೆ. ಹಲವು ಆಸ್ಪತ್ರೆಗಳಲ್ಲಿ ತೀವ್ರ ನಿಗಾ ಘಟಕಗಳು ಭರ್ತಿಯಾಗಿದ್ದು, ಸಾಮಾನ್ಯ ಬೆಡ್‌ಗಳೂ ಭರ್ತಿಯಾಗುತ್ತಿವೆ.

ನವರಾತ್ರಿ ಖರೀದಿ ಭರಾಟೆಯಲ್ಲಿ ಕೊರೊನಾ ಮರೆತ ಜನ..! ಮಾಸ್ಕ್, ಸಾಮಾಜಿಕ ಅಂತರ ಲೆಕ್ಕಕ್ಕೇ ಇಲ್ಲ..!
"ಪ್ರಕರಣಗಳ ಹೆಚ್ಚಳಕ್ಕೆ ದೊಡ್ಡ ಕಾರಣ ಮಾಲಿನ್ಯ. ದೆಹಲಿಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ನಿಯಂತ್ರಿಸಲಾಗಿತ್ತು. ಆದರೆ ಮಾಲಿನ್ಯ ಹೆಚ್ಚಾದ ನಂತರ, ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗಿದೆ," ಎಂದು ಕೇಜ್ರಿವಾಲ್‌ ವಿವರಿಸಿದ್ದಾರೆ.

ಪ್ರತಿ ದಿನ 15,000 ಪ್ರಕರಣಗಳು ವರದಿಯಾದರೂ ಅವುಗಳನ್ನು ಎದುರಿಸಲು ಸಿದ್ಧವಾಗಿರುವಂತೆ ದಿಲ್ಲಿ ಸರಕಾರಕ್ಕೆ ಕೇಂದ್ರ ಸರಕಾರ ಸೂಚನೆಯನ್ನೂ ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ