ಆ್ಯಪ್ನಗರ

ಅರವಿಂದ್ ಕೇಜ್ರಿವಾಲ್ ಕೊರೊನಾ ಪರೀಕ್ಷೆ: ವರದಿಗಾಗಿ ಕಾಯುತ್ತಿದೆ ದೆಹಲಿ!

ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೊರೊನಾ ಪರೀಕ್ಷೆಗೆ ಗುರಿಪಡಿಸಲಾಗಿದೆ. ಸಂಜೆಯೊಳಗೆ ಪರೀಕ್ಷಾ ವರದಿ ಹೊರಬೀಳುವ ಸಾಧ್ಯತೆ ಇದೆ.

Vijaya Karnataka Web 9 Jun 2020, 1:16 pm
ನವದೆಹಲಿ: ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೊರೊನಾ ಪರೀಕ್ಷೆಗೆ ಗುರಿಪಡಿಸಲಾಗಿದೆ.
Vijaya Karnataka Web Arvind Kejriwal ANI photo
ಸಂಗ್ರಹ ಚಿತ್ರ


ಕೊರೊನಾ ರೋಗಿಗಳಲ್ಲಿ ಕಂಡುಬರುವ ಸಾಮಾನ್ಯ ಲಕ್ಷಣಗಳು ಗೋಚರಿಸಿದ ಪರಿಣಾಮ ಅರವಿಂದ್ ಕೇಜ್ರಿವಾಲ್ ಸ್ವಯಂ ಗೃಹಬಂಧನಕ್ಕೆ ಗುರಿಯಾಗಿದ್ದಾರೆ. ಅದರಂತೆ ಇಂದು ಕೇಜ್ರಿವಾಲ್ ಅವರನ್ನು ಕೊರೊನಾ ಪರೀಕ್ಷೆಗೆ ಗುರಿಪಡಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ವೈದ್ಯರು, ಕೊರೊನಾ ಲಕ್ಷಣ ಕಂಡುಬಂದ ಪರಿಣಾಮ ಕೇಜ್ರಿವಾಲ್ ಅವರನ್ನು ಪರೀಕ್ಷೆಗೆ ಗುರಿಪಡಿಸಲಾಗಿದ್ದು, ಶೀಘ್ರದಲ್ಲೇ ವರದಿ ಬರಲಿದೆ ಎಂದು ಹೇಳಿದ್ದಾರೆ.


ಸದ್ಯ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯ ಸ್ಥಿರವಾಗಿದ್ದು, ಸಂಜೆಯೊಳಗೆ ಕೊರೊನಾ ಪರೀಕ್ಷೆ ಹೊರಬೀಳಲಿದೆ ಎಂದು ನಿರೀಕ್ಷಿಸಲಾಗಿದೆ.

ಕೇಜ್ರಿವಾಲ್‌ಗೆ ಕೊರೊನಾ ಕ್ವಾರಂಟೈನ್: ಆತಂಕ ಮೂಡಿಸಿದೆ ಸೋಂಕಿನ ಲಕ್ಷಣ..!

ನಿನ್ನೆ(ಜೂನ್ 8) ಕೇಜ್ರಿವಾಲ್‌ ಅವರಿಗೆ ಸ್ವಲ್ಪ ಜ್ವರ ಕಾಣಿಸಿಕೊಂಡಿದ್ದು, ಗಂಟಲಿನಲ್ಲಿ ಕೆರೆತವೂ ಉಂಟಾಗಿದೆ. ಮಧು­ಮೇಹ ರೋಗಿಯಾಗಿರುವ ಅವ­ರನ್ನು ತಕ್ಷಣದಲ್ಲೇ ಕ್ವಾರಂಟೈನ್‌ಗೆ ತೆರಳಿ, ಪರೀಕ್ಷೆ ನಡೆಸಿಕೊಳ್ಳುವಂತೆ ವೈದ್ಯರು ಸೂಚನೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ