ಆ್ಯಪ್ನಗರ

ದಿಲ್ಲಿಯಲ್ಲಿ 24 ಗಂಟೆ ದಿನಸಿ ಅಂಗಡಿ ಓಪನ್‌, ಇ-ಕಂಪನಿಗಳು ಲಾಕ್‌ಡೌನ್‌ನಿಂದ ಮುಕ್ತ!

ದಿಲ್ಲಿಯಲ್ಲಿ ಜನಸಾಮಾನ್ಯರ ದೈನಂದಿನ ಬದುಕಿಗೆ ಯಾವುದೇ ತೊಂದರೆ ಉಂಟಾಗದಂತೆ ಕ್ರಮಗಳನ್ನು ಕೈಗೊಂಡಿರುವ ಸಿಎಂ ಆರವಿಂದ ಕೇಜ್ರಿವಾಲ್‌, ದಿನದ 24 ಗಂಟೆ ದಿನಸಿ ಅಂಗಡಿಗಳನ್ನು ತೆರೆದು ಸಹಕರಿಸುವಂತೆ ಕೋರಿದ್ದಾರೆ.

Vijaya Karnataka Web 26 Mar 2020, 1:14 pm
ಹೊಸದಿಲ್ಲಿ: ರಾಷ್ಟ್ರರಾಜಧಾನಿ ದಿಲ್ಲಿಯಲ್ಲಿ ಕೊರೊನಾ ವೈರಸ್‌ನಿಂದ ಕಳೆದ 24 ಗಂಟೆಯಲ್ಲಿ ಮತ್ತೊಂದು ಪ್ರಕರಣ ದೃಢಪಟ್ಟಿದ್ದು ಒಟ್ಟು ಸಂಖ್ಯೆ 36ಕ್ಕೆ ಏರಿಕೆಯಾಗಿದೆ ಎಂದು ಲೆಫ್ಟಿನೆಂಟ್‌ ಗವರ್ನರ್‌ ಅನಿಲ್‌ ಬೈಜಾಲ್‌ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಅರವಿಂದ ಕೇಜ್ರಿವಾಲ್‌ ತಿಳಿಸಿದರು.
Vijaya Karnataka Web Arvind Kejriwal


ಲಾಕ್‌ಡೌನ್‌ ಹಿನ್ನೆಲೆ ರಾಜ್ಯದ ಜನತೆಗೆ ದಿನನಿತ್ಯದ ವಸ್ತುಗಳ ಮೇಲೆ ಸಮಸ್ಯೆಯಾಗದಿರಲು 24 ಗಂಟೆ ದಿನಸಿ ಮತ್ತು ದಿನಬಳಕೆ ವಸ್ತುಗಳು ಸಿಗುವ ಅಂಗಡಿಗಳು ತೆರೆದಿಡುವಂತೆ ಸಿಎಂ ಕೇಜ್ರಿವಾಲ್‌ ಮನವಿ ಮಾಡಿದರು. ಅಂಗಡಿಗಳ ಭೇಟಿ ನೀಡುವಾಗ ಜನಸಂದಣಿ ಏರ್ಪಡಂತೆ ಎಚ್ಚರಿಕೆ ವಹಿಸುವಂತೆಯೂ ತಾಕೀತು ಮಾಡಿದರು.

ಇ-ವ್ಯಾಪಾರ ಕಂಪನಿಗಳಿಗೆ ಲಾಕ್‌ಡೌನ್‌ ನಿರ್ಬಂಧಗಳನ್ನು ತೆರವುಗೊಳಿಸಿ ಕೇಜ್ರಿವಾಲ್‌ ಆದೇಶಿಸಿದ್ದಾರೆ. ಜೊತೆಗೆ ಈ ಕುರಿತು ಸ್ಪಷ್ಟಪಡಿಸುವಂತೆ ಆಡಳಿತ ಮಂಡಳಿ ಅಧಿಕಾರಿಗಳಿಗೆ ಮತ್ತು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಲಾಕ್‌ಡೌನ್‌ ಇದ್ದರೂ ಜನರ ದೈನಂದಿನ ಬದುಕಿಗೆ ಯಾವುದೇ ತೊಡಕು ಉಂಟಾಗದಿರಲು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಈ ಕ್ರಮ ಕೈಗೊಂಡಿದ್ದಾರೆ.

ಲಾಕ್‌ಡೌನ್‌ ನಡುವೆ 'ವರ್ಷದ ತೊಡಕು' ಆಚರಣೆಗೆ ಮುಗಿಬಿದ್ದವರಿಂದ ಸಮಾಜಕ್ಕೇ ತೊಡಕು!

ರಾಷ್ಟ್ರದಲ್ಲಿ ಕೊರೊನಾ ವೈರಸ್‌ ದೃಢಪಟ್ಟವರ ಸಂಖ್ಯೆ 600ರ ಗಡಿ ದಾಟಿದೆ. ಕೋವಿಡ್‌-19 ಸೋಂಕಿನಿಂದ ಸತ್ತವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಪ್ರಸ್ತುತ ರಾಷ್ಟ್ರಾದ್ಯಂತ 21 ದಿನಗಳ ಲಾಕ್‌ಡೌನ್‌ ಅವಧಿ 2ನೇ ದಿನಕ್ಕೆ ಕಾಲಿಟ್ಟಿದೆ. ಆದರೂ ಕೆಲವು ಕಡೆಗಳಲ್ಲಿ ಜನ ರಾಷ್ಟ್ರದ ತುರ್ತು ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣನೆಗೆ ತೆಗೆದುಕೊಳ್ಳದಿರುವುದು ಕಂಡು ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ