ಆ್ಯಪ್ನಗರ

ದೆಹಲಿ ವಿಧಾನಸಭೆಯಲ್ಲಿ ಕೃಷಿ ಕಾನೂನು ಪ್ರತಿ ಹರಿದು ಹಾಕಿದ ಸಿಎಂ ಅರವಿಂದ್ ಕೇಜ್ರಿವಾಲ್!

ಕೇಂದ್ರದ ಕೃಷಿ ಕಾನೂನುಗಳ ಜಾರಿಯನ್ನು ತೀವ್ರವಾಗಿ ವಿರೋಧಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹಲಿ ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ಪ್ರತಿಯನ್ನು ಹರಿದು ಹಾಕಿದ್ದಾರೆ.

Vijaya Karnataka Web 17 Dec 2020, 4:52 pm
ಹೊಸದಿಲ್ಲಿ: ಕೇಂದ್ರದ ಕೃಷಿ ಕಾನೂನುಗಳ ಜಾರಿಯನ್ನು ತೀವ್ರವಾಗಿ ವಿರೋಧಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹಲಿ ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ಪ್ರತಿಯನ್ನು ಹರಿದು ಹಾಕಿದ್ದಾರೆ.
Vijaya Karnataka Web Arvind Kejriwal
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕೃಷಿ ಕಾನೂನು ಪ್ರತಿ ಹರಿದು ಹಾಕಿದ ಕೇಜ್ರಿವಾಲ್


ಕೃಷಿ ಕಾನೂನುಗಳ ಜಾರಿ ವಿರೋಧಿಸಿ ದೆಹಲಿ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮಾತನಾಡುತ್ತಿದ್ದ ಅರವಿಂದ್ ಕೇಜ್ರಿವಾಲ್, ಆಕ್ರೋಶಭರಿತರಾಗಿ ಕೃಷಿ ಕಾನೂನುಗಳ ಪ್ರತಿಯನ್ನು ಹರಿದು ಹಾಕಿದರು.

ಈ ಕಾನೂನುಗಳನ್ನು ಬ್ರಿಟಿಷರ ಕಾನೂನುಗಳಿಗೆ ಹೋಲಿಸಿರುವ ಅರವಿಂದ್ ಕೇಜ್ರಿವಾಲ್, ರೈತರ ಪಾಲಿಗೆ ಈ ಕಾನೂನುಗಳು ಬ್ರಿಟಿಷರ ಕಾನೂನುಗಳಷ್ಟೇ ಘೋರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಿಲ್ಲಿ ರೈತ ಪ್ರತಿಭಟನೆಗೆ 'ಆಮ್‌ ಆದ್ಮಿ' ಬಲ: ಮಂಗಳವಾರದ ಭಾರತ್‌ ಬಂದ್‌ಗೆ ಕೇಜ್ರಿವಾಲ್ ಬೆಂಬಲ

ಇದೇ ವೇಳೆ ಕೊರೊನಾ ವೈರಸ್ ಹಾವಳಿಯ ಕಾಲದಲ್ಲಿ ಕೃಷಿ ಕಾನೂನುಗಳಿಗೆ ಅಂಕಿತ ಪಡೆಯಲು ಆತುರವೇಕೆ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿರುವ ಅರವಿಂದ್ ಕೇಜ್ರಿವಾಲ್, ಸಂಸತ್ತಿನಲ್ಲಿ ಈ ಮಸೂದೆಯನ್ನು ಮತ್ತೊಮ್ಮೆ ಮಂಡಿಸಿ ಸೂಕ್ತ ಚರ್ಚೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.


ದೇಶದ ಪ್ರತಿಯೊಬ್ಬ ರೈತ ಕೂಡ ಈಗ ಭಗತ್ ಸಿಂಗ್ ಆಗಿದ್ದಾನೆ. ತನ್ನ ಹಕ್ಕುಗಳಿಗಾಗಿ ಆತ ನ್ಯಾಯುತವಾದ ಹೋರಾಟವನ್ನು ಮಾಡುತ್ತಿದ್ದಾನೆ. ಆದರೆ ಕೇಂದ್ರ ಸರ್ಕಾರ ಮಾತ್ರ ಕಾರ್ಪೋರೇಟ್ ಶಕ್ತಿಗಳ ಮುಂದೆ ಮಂಡಿಯೂರಿ ಕುಳಿತಿದೆ ಎಂದು ಅರವಿಂದ್ ಕೇಜ್ರಿವಾಲ್ ಕಿಡಕಾರಿದರು.

ಕೃಷಿ ಕಾನೂನುಗಳ ಜಾರಿ ವಿರೋಧಿಸಿ ನಿನ್ನೆ(ಡಿ.16-ಬುಧವಾರ) ಸಂತರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕಾನೂನುಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರಕ್ಕೆ ಇನ್ನೆಷ್ಟು ಬಲಿಗಳು ಬೇಕು ಎಂದು ದೆಹಲಿ ಸಿಎಂ ಪ್ರಶ್ನಿಸಿದ್ದಾರೆ.

ದೆಹಲಿ ಸಿಎಂ ಕೇಜ್ರಿವಾಲ್ ಗೃಹಬಂಧನ: ಆಪ್ ಆರೋಪ!

ಇದಕ್ಕೂ ಮೊದಲು ದೆಹಲಿ ವಿಧಾನಸಭೆಯಲ್ಲಿ ಆಪ್ ಶಾಸಕರಾದ ಮಹೇಂದ್ರ ಗೋಯಲ್ ಹಾಗೂ ಸೋಮನಾಥ್ ಭಾರ್ತಿ ಕೂಡ ಕೃಷಿ ಕಾನೂನುಗಳ ಪ್ರತಿಯನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ