ಆ್ಯಪ್ನಗರ

ನಿರ್ಭಯಾ ಹಂತಕರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾಯಾಲಯ; ಗಲ್ಲು ಶಿಕ್ಷೆ ಮುಂದೂಡುವ ತಂತ್ರ ವಿಫಲ

ರಾಷ್ಟ್ರ ರಾಜಧಾನಿ ಹೊಸದಿಲ್ಲಿ ಮಹಿಳೆಯರಿಗೆ ಸೇಫ್‌ ಅಲ್ಲ ಎಂಬುದು ಸಾಬೀತಾಗಿರುವ ಹಲವಾರು ಪ್ರಕರಣಗಳು ನಡೆದಿವೆ. ಇದರಲ್ಲಿ ಪ್ರಮುಖವಾದುದು ನಿರ್ಭಯಾ ಅತ್ಯಾಚಾರ ಕೊಲೆ ಪ್ರಕರಣ. ಈ ಪ್ರಕರಣಕ್ಕೆ ಕೆಲವೇ ದಿನಗಳಲ್ಲಿ ತಾರ್ಕಿಕ ಅಂತ್ಯ ಸಿಗುವ ನಿರೀಕ್ಷೆ ಇದೆ.

Vijaya Karnataka Web 25 Jan 2020, 4:19 pm
ಹೊಸದಿಲ್ಲಿ: ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವವರು ಶಿಕ್ಷೆಯನ್ನು ಮುಂದೂಡಲು ಮಾಡುತ್ತಿರುವ ಪ್ರಯತ್ನಗಳೆಲ್ಲವೂ ವಿಫಲವಾಗುತ್ತಿವೆ.
Vijaya Karnataka Web ನಿರ್ಭಯಾ ಹಂತಕರು
ನಿರ್ಭಯಾ ಹಂತಕರು


ನಾಲ್ವರ ಪೈಕಿ ಇಬ್ಬರು ಶುಕ್ರವಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

ತಿಹಾರ್‌ ಜೈಲಧಿಕಾರಿಗಳು ಕೆಲವು ದಾಖಲೆಗಳನ್ನು ನೀಡಲು ವಿಳಂಬ ಧೋರಣೆ ತೋರುತ್ತಿದ್ದಾರೆ ಎಂದು ಆರೋಪಿಸಿ ಅಕ್ಷಯ್‌ ಕುಮಾರ್‌ ಸಿಂಗ್‌ (31), ಪವನ್‌ ಸಿಂಗ್‌ (25) ದಿಲ್ಲಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಪೀಠ ಅರ್ಜಿಯನ್ನು ತಿರಸ್ಕರಿಸಿದೆ.

ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಅಜಯ್‌ ಕುಮಾರ್‌ ಜೈನ್‌, ತಿಹಾರ್‌ ಜೈಲಧಿಕಾರಿಗಳಿಂದ ದಾಖಲೆ ಪಡೆಯಬಹುದು ಎಂದು ತಿಳಿಸಿದ್ದರು.

ಈ ಸಂದರ್ಭದಲ್ಲಿ ವಾದ ಮಂಡಿಸಿದ ಪ್ರಾಸಿಕ್ಯೂಟರ್‌, ಅಧಿಕಾರಿಗಳು ಈಗಾಗಲೇ ಬಹುತೇಕ ಎಲ್ಲ ದಾಖಲೆಗಳನ್ನು ನೀಡಿದ್ದಾರೆ ಎಂದು ಅಫಿಡವಿಟ್‌ ಸಲ್ಲಿಸಿದ್ದಾರೆ ಎಂದು ತಿಳಿಸಿದರು.

ಗಲ್ಲು ಶಿಕ್ಷೆಯನ್ನು ಮುಂದೂಡಲು ಅಪರಾಧಿಗಳು ಎಲ್ಲ ತಂತ್ರಗಳನ್ನು ಉಪಯೋಗಿಸುತ್ತಿದ್ದಾರೆ ಎಂದು ಪಬ್ಲಿಕ್‌ ಪ್ರಾಸಿಕ್ಯೂಟರ್‌ ವಾದಿಸಿದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ಅರ್ಜಿ ವಜಾಗೊಳಿಸಿದರು.

ಇತ್ತೀಚೆಗೆ ವಿನಯ್‌ ಕುಮಾರ್‌ ಶರ್ಮ (26) ಮತ್ತು ಮುಕೇಶ್ ಸಿಂಗ್‌ (32) ಕಳೆದವಾರ ಸಲ್ಲಿಸಿದ್ದ ಕ್ಯುರೇಟಿವ್‌ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿತ್ತು.

ಇದರ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಕೇಂದ್ರ ಸರಕಾರ, ಡೆತ್‌ ವಾರಂಟ್‌ ನಂತರ ಏಳು ದಿನಗಳ ಕಾಲ ಮಾತ್ರ ಅವಕಾಶ ನೀಡಬೇಕೆಂದು ಮನವಿ ಮಾಡಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ