ಆ್ಯಪ್ನಗರ

ರಾಜ್ಯದ ಅಭಿವೃದ್ಧಿಗಾಗಿ ಚರ್ಚಿಸಲು ಪ್ರಧಾನಿ, ಕೇಂದ್ರ ಸಚಿವರನ್ನು ಭೇಟಿಯಾಗುತ್ತಿದ್ದೇನೆ ; ಬಿಎಸ್‌ವೈ

ಹೆಚ್ ಡಿ ಕುಮಾರಸ್ವಾಮಿ ಹಾಗೂ ತಮ್ಮ ನಡುವಿನ ಇತ್ತೀಚಿನ ಭೇಟಿ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕುಮಾರಸ್ವಾಮಿ ಅವರು ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚಿಸಲು ಆಗಮಿಸಿದ್ದರು. ಇಂತಹ ವಿಷಯಗಳಲ್ಲಿ ಅನಗತ್ಯ ಊಹಾಪೋಹ ಬೇಡ ಎಂದು ಉತ್ತರಿಸಿದರು.

Vijaya Karnataka Web 18 Sep 2020, 11:18 am
ಹೊಸದಿಲ್ಲಿ: ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಕುರಿತು ಚರ್ಚಿಸಲು ತಾವು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ಹಲವು ಸಚಿವರನ್ನು ಭೇಟಿ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.
Vijaya Karnataka Web bsy


ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ 120 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಾಜ್ಯದ ರಾಯಭಾರಿ ಕಚೇರಿ ಎಂದೇ ಬಣ್ಣಿಸಲಾಗುವ ಕರ್ನಾಟಕ ಭವನ-1 ‘ಕಾವೇರಿ’ ಕಟ್ಟಡದ ಪುನರ್‌ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಅವರು, ಎರಡು ತಳ ಮಹಡಿಗಳು, ನೆಲ ಮಹಡಿ ಹಾಗೂ ಆರು ಮಹಡಿ ಒಳಗೊಂಡಂತೆ ಒಟ್ಟು ಒಂಭತ್ತು ಮಹಡಿಗಳ ಈ ಕಟ್ಟಡದ ನಿರ್ಮಾಣದ ಜವಾಬ್ದಾರಿಯನ್ನು ಮೆ: ಬಾಲಾಜಿ ಕೃಪಾ ಪ್ರಾಜೆಕ್ಸ್ ಪ್ರೈವೇಟ್ ಲಿಮಿಟೆಡ್ ಅವರಿಗೆ ವಹಿಸಿದ್ದು, ಮುಂದಿನ 24 ತಿಂಗಳಲ್ಲಿ ಕಟ್ಟಡದ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದರು.

ತಳಮಟ್ಟದ ಬಿಜೆಪಿ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದ ಅಶೋಕ್ ಗಸ್ತಿ,

ಪ್ರತಿಪಕ್ಷ ನಾಯಕರ ಆರೋಪ ತಳ್ಳಿಹಾಕಿದ ಮುಖ್ಯಮಂತ್ರಿ

ತಮ್ಮ ಪುತ್ರ ಬಿ ವೈ ವಿಜಯೇಂದ್ರ ಅವರನ್ನು ಸೂಪರ್ ಸಿಎಂ ಎಂದು ಬಣ್ಣಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆರೋಪವನ್ನು ತಳ್ಳಿ ಹಾಕಿದ ಮುಖ್ಯಮಂತ್ರಿ ಯಡಿಯೂರಪ್ಪ, ವಿಜಯೇಂದ್ರ ಅವರು ಭಾರತೀಯ ಜನತಾ ಪಕ್ಷದ ರಾಜ್ಯ ಘಟಕದಲ್ಲಿ ಉಪಾಧ್ಯಕ್ಷರಾಗಿ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆಯೇ ಹೊರತು, ರಾಜ್ಯ ಸರ್ಕಾರದ ಯಾವುದೇ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡುತಿಲ್ಲ ಎಂದು ಸ್ಪಷ್ಟಪಡಿಸಿದರು.

‘ನಿಮ್ಮ ನಾಯಕರ ಎದೆಯಳತೆಯ ಮುಂದೆ ಮಣಿಯದೆ ಧೈರ್ಯದಿಂದ ರಾಜ್ಯದ ಪಾಲು ಕೇಳಿ’; ಸಿಎಂಗೆ ಸಿದ್ದರಾಮಯ್ಯ ಆಗ್ರಹ

ಇನ್ನು ಜಾತ್ಯಾತೀತ ಜನತಾ ದಳದ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ತಮ್ಮ ನಡುವಿನ ಇತ್ತೀಚಿನ ಭೇಟಿ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕುಮಾರಸ್ವಾಮಿ ಅವರು ಪ್ರತಿಪಕ್ಷದ ನಾಯಕರಲ್ಲೊಬ್ಬರು. ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚಿಸಲು ಆಗಮಿಸಿದ್ದರು. ಇಂತಹ ವಿಷಯಗಳಲ್ಲಿ ಅನಗತ್ಯ ಊಹಾಪೋಹ ಬೇಡ ಎಂದು ಉತ್ತರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ