ಆ್ಯಪ್ನಗರ

Delhi Fire: ದಿಲ್ಲಿಯಲ್ಲಿ ಭೀಕರ ಅಗ್ನಿ ದುರಂತ; 27 ಮಂದಿ ಸಾವು, 30 ಜನರಿಗೆ ಗಾಯ

ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 27 ಮಂದಿ ಮೃತಪಟ್ಟಿದ್ದಾರೆ. 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಇನ್ನೊಂದು ಮಹಡಿಯಲ್ಲಿ ರಕ್ಷಣಾ ಕಾರ್ಯಾಚರಣೆ ಬಾಕಿಯಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ.

Authored byಅವಿನಾಶ ವಗರನಾಳ | Vijaya Karnataka Web 14 May 2022, 12:13 am

ಹೈಲೈಟ್ಸ್‌:


  • ದಿಲ್ಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿ ಭೀಕರ ಅಗ್ನಿ ದುರಂತ
  • 27 ಮಂದಿ ಸಾವು, 30 ಜನರಿಗೆ ಗಾಯ, ಮುಂದುವರಿದ ರಕ್ಷಣಾ ಕಾರ್ಯ
  • ದುರಂತದಲ್ಲಿ ಮೃತಪಟ್ಟವರಿಗೆ 2 ಲಕ್ಷ ರೂ. ಘೋಷಿಸಿದ ಪ್ರಧಾನಿ ಕಾರ್ಯಾಲಯ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Delhi Fire
ಹೊಸದಿಲ್ಲಿ: ನಗರದ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯ ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿ ದುರಂತದಲ್ಲಿ ಇದುವರೆಗೂ 27 ಜನ ಮೃತಪಟ್ಟಿರುವುದು ಖಚಿತವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಕಟ್ಟಡದಾದ್ಯಂತ ಅಗ್ನಿಯ ಕೆನ್ನಾಲಗೆ ಚಾಚಿದೆ. ಇದುವರೆಗೂ ಕಟ್ಟಡದಿಂದ ಸುಮಾರು 70 ಜನರನ್ನು ರಕ್ಷಿಸಲಾಗಿದೆ. ಆದಾಗ್ಯೂ, ಇನ್ನೊಂದು ಮಹಡಿಯಲ್ಲಿ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಬೇಕಿದ್ದು, ಮೃತರ ಹಾಗೂ ಗಾಯಾಳುಗಳ ಸಂಖ್ಯೆ ಜಾಸ್ತಿಯಾಗುವ ಸಾಧ್ಯತೆ ಇದೆ. 30 ಅಗ್ನಿಶಾಮಕ ವಾಹನಗಳು ಮತ್ತು ಆಂಬುಲೆನ್ಸ್‌ಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ಪಶ್ಚಿಮ ದಿಲ್ಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿ ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗುವ ಕಟ್ಟಡ ಇದಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಕಚೇರಿಗಳನ್ನು ಹೊಂದಿತ್ತು. ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳ ಪ್ರಕಾರ, ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಸಂಜೆ 4.40ಕ್ಕೆ ಮಾಹಿತಿ ಬಂದಿದ್ದು, ತಕ್ಷಣವೇ 20 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ ಎಂದು ದಿಲ್ಲಿ ಅಗ್ನಿಶಾಮಕದ ದಳದ ನಿರ್ದೇಶಕ ಅತುಲ್‌ ಗರ್ಗ್‌ ತಿಳಿಸಿದ್ದಾರೆ.

ಅಗ್ನಿ ಅವಘಡಕ್ಕೆ ಇದುವರೆಗೂ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಸಿಸಿಟಿವಿ ಕ್ಯಾಮೆರಾ ಮತ್ತು ರೂಟರ್ ತಯಾರಿಕಾ ಕಂಪನಿಯ ಕಚೇರಿಯನ್ನು ಹೊಂದಿರುವ ಕಟ್ಟಡದ ಮೊದಲ ಮಹಡಿಯಿಂದ ಬೆಂಕಿ ಕಾಣಿಸಿಕೊಂಡಿದೆ. ಮೊದಲ ಮಹಡಿಯಲ್ಲಿ ಕಂಪನಿಗೆ ಸಂಬಂಧಿಸಿದ ಹಲವು ಉತ್ಪನ್ನಗಳು ದೊರೆತಿವೆ ಘಟನೆ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಕಟ್ಟಡದ ಮಾಲೀಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ ಸಮೀರ್ ಶರ್ಮಾ ತಿಳಿಸಿದ್ದಾರೆ.

ಪ್ರೀತಿ ನಿರಾಕರಿಸಿದ್ದಕ್ಕೆ ಇಡೀ ಕಟ್ಟಡಕ್ಕೆ ಬೆಂಕಿ: ಭೀಕರ ಘಟನೆಯಲ್ಲಿ ಏಳು ಮಂದಿ ಸಜೀವ ದಹನ
ಪ್ರಧಾನಿ ಮೋದಿ ಸಂತಾಪ!
ಅಗ್ನಿ ಅವಘಡಕ್ಕೆ ಪ್ರಧಾನಿ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ದಿಲ್ಲಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸಂಭವಿಸಿದ ಸಾವು-ನೋವುಗಳಿಂದ ಅತೀವ ದುಃಖವಾಗಿದೆ. ಸಂತ್ರಸ್ತರ ದುಃಖತಪ್ತ ಕುಟುಂಬದೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ. ಅದಲ್ಲದೇ, ಅವಘಡದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ 2 ಲಕ್ಷ ರೂ., ಗಾಯಗೊಂಡವರಿಗೆ 50,000 ರೂ. ನೀಡಲಾಗುವುದು ಎಂದು ಪ್ರಧಾನಿ ಕಚೇರಿ ಟ್ವೀಟ್‌ ಮಾಡಿದೆ.

ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಕರ್ನಾಟಕದ ಒಬ್ಬರು ಸೇರಿ ಐವರು ಸಾವು
ಕೇಜ್ರಿವಾಲ್‌, ರಾಷ್ಟ್ರಪತಿ, ರಾಹುಲ್‌ ಟ್ವೀಟ್‌!
ಇನ್ನು, ಅಗ್ನಿ ಅವಘಡದ ಬಗ್ಗೆ ದಿಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಕೂಡ ಟ್ವೀಟ್‌ ಮಾಡಿದ್ದು, ಭೀಕರ ದುರಂತದ ಬಗ್ಗೆ ತಿಳಿದು ತೀವ್ರ ಆಘಾತ ಮತ್ತು ನೋವಾಗಿದೆ. ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ನಮ್ಮ ಕೆಚ್ಚೆದೆಯ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಲು ಮತ್ತು ಜೀವಗಳನ್ನು ಉಳಿಸಲು ಪ್ರಯತ್ನಿಸುತ್ತಿದ್ದಾರೆ. ದೇವರು ಎಲ್ಲರನ್ನು ಕಾಪಾಡಲಿ ಎಂದು ಹೇಳಿದ್ದಾರೆ.

ಶ್ರೀಲಂಕಾದಲ್ಲಿ ಭುಗಿಲೆದ್ದ ಹಿಂಸಾಚಾರ: ನಿರ್ಗಮಿತ ಪ್ರಧಾನಿ ಮಹಿಂದಾ ರಾಜಪಕ್ಸೆ ನಿವಾಸಕ್ಕೆ ಬೆಂಕಿ ಹಚ್ಚಿದ ಉದ್ರಿಕ್ತರು
ದಿಲ್ಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಿಂದ ತೀವ್ರ ದುಃಖವಾಗಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಆಸಿಸುತ್ತೇನೆ ಎಂದು ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಅವರ ಕಚೇರಿ ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಟ್ವೀಟ್‌ ಮಾಡಿದ್ದಾರೆ.
ಲೇಖಕರ ಬಗ್ಗೆ
ಅವಿನಾಶ ವಗರನಾಳ
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಕಳೆದ 6 ವರ್ಷಗಳಿಂದ ವಿವಿಧ ಪತ್ರಿಕೆ, ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸದ್ಯ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಒಂದಿಷ್ಟು ದಿನ ಕೆಲ ಸಂಸ್ಥೆಗಳಲ್ಲಿ ಸಾರ್ವಜನಿಕ ಸಂಪರ್ಕವನ್ನು ನಿಭಾಯಿಸಿದ್ದಾರೆ. ಇವರು ಹುಟ್ಟಿ ಬೆಳೆದಿದ್ದು ಭತ್ತದ ನಾಡು, ಹನುಮ ಹುಟ್ಟಿದ ನಾಡು ಗಂಗಾವತಿಯಲ್ಲಿ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ರಾಜಕೀಯ ವಿಷಯಗಳು, ಪ್ರಚಲಿತ ವಿದ್ಯಮಾನಗಳ ಮೇಲೆ ಆಸಕ್ತಿ. ತಂತ್ರಜ್ಞಾನದ ವಿಷಯಗಳು ಇವರಿಗೆ ಹೆಚ್ಚು ಆಪ್ತ. ಇವರಿಗೆ ಊರೂರು ಸುತ್ತೋದು.. ಕ್ರಿಕೆಟ್‌ ಆಡೋದು.. ಅದಿದು ಹುಡುಕೋದು ಇಷ್ಟ. ಅಂತೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ