ಆ್ಯಪ್ನಗರ

ಸಿ.ಟಿ ರವಿ ಕಚೇರಿ ಪೂಜೆ ನೆಪ, ದೆಹಲಿಯಲ್ಲಿ ಬಿ.ಎಲ್‌ ಸಂತೋಷ್‌ ಜೊತೆಗೆ ರಾಜ್ಯ ಬಿಜೆಪಿ ಮುಖಂಡರ ಮಾತುಕತೆ!

ರಾಜ್ಯ ಸಚಿವ ಸಂಪುಟ ಸಭೆಗೆ ಗೈರಾದ ಡಿಸಿಎಂ ಲಕ್ಷ್ಮಣ ಸವದಿ, ಆರ್‌. ಅಶೋಕ್ ಶುಕ್ರವಾರ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರ ಕಚೇರಿ ಪೂಜೆಯಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಬಿಎಲ್ ಸಂತೋಷ್ ಉಪಸ್ಥಿತರಿದ್ದರು.

Vijaya Karnataka 27 Nov 2020, 4:13 pm
ಹೊಸದಿಲ್ಲಿ: ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿದ್ದು ದೆಹಲಿಯಲ್ಲಿ ಬೀಡುಬಿಟ್ಟಿರುವ ಬಿಜೆಪಿಯ ಕೆಲವು ಪ್ರಮುಖರು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್‌ ಸಂತೋಷ್ ಜೊತೆಗೆ ನಡೆಸಿರುವ ಮಾತುಕತೆ ಕುತೂಹಲ ಕೆರಳಿಸಿದೆ.
Vijaya Karnataka Web ct ravi


ಶುಕ್ರವಾರ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕಚೇರಿ ಪೂಜೆ ನೆರವೇರಿತು. ಈ ಕಾರ್ಯಕ್ರಮದಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಆರ್‌. ಅಶೋಕ್‌, ರಮೇಶ್ ಜಾರಕಿಹೊಳಿ ಭಾಗಿಯಾಗಿದ್ದರು. ಅದರಲ್ಲೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಕೂಡಾ ಭಾಗಿಯಾಗಿದ್ದರು.

ವೀರಶೈವ - ಲಿಂಗಾಯತ ಒಬಿಸಿ ಅಸ್ತ್ರ, ಫಲಿಸುತ್ತಾ ಬಿಎಸ್‌ವೈ ಒತ್ತಡ ತಂತ್ರ!

ಶುಕ್ರವಾರ ಸಚಿವ ಸಂಪುಟ ಸಭೆ ಇದ್ದರೂ ಈ ಸಭೆಗೆ ಗೈರಾಗಿ ಪ್ರಮುಖ ಸಚಿವರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಸಹಜವಾಗಿ ಸಚಿವರ ನಡೆ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು. ಸಿ.ಟಿ ರವಿ ಕಚೇರಿ ಪೂಜೆಯ ನೆಪದಲ್ಲಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡುವುದು ಇದರ ಹಿಂದಿನ ಉದ್ದೇಶ ಎಂದು ಹೇಳಲಾಗುತ್ತಿತ್ತು.

ಅದರಂತೆ ಶುಕ್ರವಾರದ ಪೂಜಾ ಕಾರ್ಯಕ್ರಮದ ಬಳಿಕ ಡಿಸಿಎಂ ಲಕ್ಷ್ಮಣ ಸವದಿ, ಆರ್‌ ಅಶೋಕ್, ಸಿ.ಟಿ ರವಿ ಬಿಎಲ್‌ ಸಂತೋಷ್‌ ಜೊತೆಗೆ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಇದೆ. ಸಂಪುಟ ವಿಸ್ತರಣೆ ಗೊಂದಲ, ನಾಯಕತ್ವ ಬದಲಾವಣೆ ವಿಚಾರಗಳ ಕುರಿತಾಗಿ ಚರ್ಚೆ ನಡೆದಿದೆ ಎನ್ನಲಾಗಿದೆ. ಸದ್ಯದ ರಾಜ್ಯ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಭೇಟಿ ಹಾಗೂ ಮಾತುಕತೆ ಮಹತ್ವ ಪಡೆದುಕೊಂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ