ಆ್ಯಪ್ನಗರ

ನಿರ್ಭಯಾ ಹಂತಕರಿಗೆ ಗಲ್ಲು ಶಿಕ್ಷೆಗೆ ಮುಹೂರ್ತ ಫಿಕ್ಸ್‌; ಫೆ.1, ಬೆಳಗ್ಗೆ 6 ಗಂಟೆಗೆ ನೇಣುಗಂಬಕ್ಕೆ

ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದಾರೆ. ಈ ಮೂಲಕ ನಾಲ್ವರು ಆರೋಪಿಗಳಿಗೆ ಗಲ್ಲು ಶಿಕ್ಷೆ ಫಿಕ್ಸಾಗಿದೆ . ಫೆ.1ರಂದು ನಾಲ್ವರನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಲಾಗುತ್ತದೆ.

Vijaya Karnataka Web 17 Jan 2020, 5:47 pm
ಹೊಸದಿಲ್ಲಿ: ನಿರ್ಭಯಾ ಅತ್ಯಾಚಾರಿಗಳನ್ನು ನೇಣುಗಂಬಕ್ಕೆ ಏರಿಸಲು ಮತ್ತೊಮ್ಮೆ ಮುಹೂರ್ತ ನಿಗದಿಯಾಗಿದೆ.

ಈ ಮೊದಲು 22ರಂದು ಬೆಳಗ್ಗೆ 7 ಗಂಟೆಗೆ ತಿಹಾರ್‌ ಜೈಲಿನಲ್ಲಿಗಲ್ಲಿಗೇರಿಸುವಂತೆ ದಿಲ್ಲಿ ನ್ಯಾಯಾಲಯ ಆದೇಶಿಸಿತ್ತು.

ಅಪರಾಧಿಗಳಾದ ಮುಖೇಶ್‌ (32), ಪವನ್‌ ಗುಪ್ತಾ (25), ವಿನಯ್‌ ಶರ್ಮಾ (26) ಮತ್ತು ಅಕ್ಷಯ್‌ಕುಮಾರ್‌ ಸಿಂಗ್‌ಗೆ (31) ಹೆಚ್ಚುವರಿ ಸೆಷೆನ್ಸ್‌ ನ್ಯಾಯಾಧೀಶ ಸತೀಶ್‌ಕುಮಾರ್‌ ಅರೋರಾ ಡೆತ್‌ ವಾರಂಟ್‌ ಜಾರಿಗೊಳಿಸಿದರು.

ಅಪರಾಧಿಗಳ ಪೈಕಿ ಮುಖೇಶ್‌ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದರಿಂದ ಜ.22ರಂದು ಗಲ್ಲಿಗೇರಿಸುವುದನ್ನು ಮುಂದೂಡಲಾಗಿತ್ತು. ಅಲ್ಲದೇ ಮತ್ತೊಮ್ಮೆ ಡೆತ್‌ ವಾರಂಟ್‌ ನೀಡುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು.

ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ ನಂತರ ದಿಲ್ಲಿ ನ್ಯಾಯಾಲಯ ಹೊಸ ಆದೇಶ ಹೊರಡಿಸಿದೆ.

ಫೆಬ್ರವರಿ 1ರಂದು ಬೆಳಗ್ಗೆ 6 ಗಂಟೆಗೆ ನಿರ್ಭಯಾ ಹಂತಕರನ್ನು ಗಲ್ಲಿಗೇರಿಸಬೇಕೆಂದು ಡೆತ್‌ ವಾರಂಟ್‌ ಜಾರಿ ಮಾಡಿದೆ.

ಉತ್ತರ ಪ್ರದೇಶದ ಮೀರತ್‌ನಿಂದ ಹ್ಯಾಂಗಮನ್‌ ಕಳಸಿಕೊಡುವಂತೆ ತಿಹಾರ ಜೈಲಿನ ಅಧಿಕಾರಿಗಳು ಈಗಾಗಲೇ ಉತ್ತರ ಪ್ರದೇಶ ಸರಕಾರಕ್ಕೆ ಮನವಿ ಮಾಡಿದ್ದಾರೆ.

ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳನ್ನೂ ಒಟ್ಟಿಗೇ ಗಲ್ಲಿಗೇರಿಸಲಾಗುತ್ತದೆ. ನಿರ್ಭಯಾ ಅಪರಾಧಿಗಳಿಗೆ ನೇಣು ಕುಣಿಕೆ ಬಿಗಿಯುವ ಮುನ್ನ ಯಾವುದೇ ತೊಂದರೆ ಎದುರಾಗದಂತೆ ನೋಡಿಕೊಳ್ಳಲು ಗಲ್ಲಿಗೇರಿಸುವ ‘ಡಮ್ಮಿ ಪ್ರಕ್ರಿಯೆ’ ನಡೆಯಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ