ಆ್ಯಪ್ನಗರ

ನಿರ್ಭಯಾ ಹಂತಕರಿಂದ ಮತ್ತೊಂದು ಅರ್ಜಿ ಸಲ್ಲಿಕೆ; ಗಲ್ಲು ಶಿಕ್ಷೆ ಮುಂದೂಡಲು ತಂತ್ರ

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳಿಗೆ ಕೊನೆಗೂ ತಕ್ಕ ಶಿಕ್ಷೆಯಾಗಿದೆ. ಅಮಾನುಷ ರೀತಿಯಲ್ಲಿ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳನ್ನು ನೇಣುಗಂಬಕ್ಕೇರಿಸಲು ಕೋರ್ಟ್‌ ಆದೇಶಸಿದೆ.

Vijaya Karnataka Web 24 Jan 2020, 5:04 pm
ಹೊಸದಿಲ್ಲಿ: ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಅಪರಾಧಿಗಆಳಗಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಪೈಕಿ ಇಬ್ಬರು ಈಗ ಮತ್ತೊಮ್ಮೆ ಕೋರ್ಟ್‌ ಮೆಟ್ಟಿಲೇರಿದ್ದಾರೆ.
Vijaya Karnataka Web ನಿರ್ಭಯಾ
ನಿರ್ಭಯಾ


ತಿಹಾರ್‌ ಜೈಲಧಿಕಾರಿಗಳು ಕೆಲವು ದಾಖಲೆಗಳನ್ನು ನೀಡಲು ವಿಳಂಬ ಧೋರಣೆ ತೋರುತ್ತಿದ್ದಾರೆ ಎಂದು ಆರೋಪಿಸಿ ಅಕ್ಷಯ್‌ ಕುಮಾರ್‌ ಸಿಂಗ್‌ (31), ಪವನ್‌ ಸಿಂಗ್‌ (25) ದಿಲ್ಲಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಈ ಇಬ್ಬರ ಪರವಾಗಿ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಗಲ್ಲು ಶಿಕ್ಷೆಯನ್ನು ಇನ್ನಷ್ಟು ದಿನ ಮುಂದೂಡಲು ಈ ತಂತ್ರ ಬಳಸಲಾಗುತ್ತಿದೆ ಎಂದು ಆರೋಪ ಕೇಳಿಬಂದಿದೆ.
ಈ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಶನಿವಾರ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.

ವಿನಯ್‌ ಕುಮಾರ್‌ ಶರ್ಮ (26) ಮತ್ತು ಮುಕೇಶ್ ಸಿಂಗ್‌ (32) ಕಳೆದವಾರ ಸಲ್ಲಿಸಿದ್ದ ಕ್ಯುರೇಟಿವ್‌ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿತ್ತು.

ಇದರ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಕೇಂದ್ರ ಸರಕಾರ, ಡೆತ್‌ ವಾರಂಟ್‌ ನಂತರ ಏಳು ದಿನಗಳ ಕಾಲ ಮಾತ್ರ ಅವಕಾಶ ನೀಡಬೇಕೆಂದು ಮನವಿ ಮಾಡಿತ್ತು.

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳಿಗೆ ಕೊನೆಗೂ ತಕ್ಕ ಶಿಕ್ಷೆಯಾಗಿದೆ. ಅಮಾನುಷ ರೀತಿಯಲ್ಲಿ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳನ್ನು ನೇಣುಗಂಬಕ್ಕೇರಿಸಲು ಕೋರ್ಟ್‌ ಆದೇಶಸಿದೆ. ಏಳು ವರ್ಷಗಳ ಹಿಂದೆ ನಡೆದ ಅತ್ಯಂತ ಭಯಾನಕ, ರಾಕ್ಷಸೀ ಪ್ರವೃತ್ತಿಯ, ಅಮಾನುಷ ಕೃತ್ಯ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಇಡೀ ಸಮಾಜ ಇದರ ವಿರುದ್ಧ ತಿರುಗಿ ಬಿದ್ದಿತು. ಅತ್ಯಂತ ಘೋರ ಕೃತ್ಯ ಎಸಗಿರುವ ಆರೋಪಿಗಳಿಗೆ ಘೋರಾತಿಘೋರ ಶಿಕ್ಷೆಯನ್ನೇ ವಿಧಿಸಬೇಕು ಎಂಬ ಒಕ್ಕೊರಲ ಅಭಿಪ್ರಾಯ ಕೇಳಿಬಂದಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ