ಆ್ಯಪ್ನಗರ

Gali Janardhan Reddy - ಮಗಳ ಹೆರಿಗೆಗಾಗಿ ಬಳ್ಳಾರಿ ಎಂಟ್ರಿಗೆ ಅನುಮತಿ ಕೋರಿದ ಗಾಲಿ ಜನಾರ್ದನ ರೆಡ್ಡಿ

ಮಗಳ ಹೆರಿಗೆ ಹಿನ್ನೆಲೆಯಲ್ಲಿ ಕಡೇಪಕ್ಷ 1 ತಿಂಗಳಾದರೂ ಬಳ್ಳಾರಿ ಪ್ರವೇಶಕ್ಕೆ ಅನುಮತಿ ಕೊಡಿ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಸುಪ್ರೀಂ ಕೋರ್ಟಿಗೆ ಮನವಿ ಮಾಡಿಕೊಂಡಿದ್ದಾರೆ. ಶುಕ್ರವಾರ ಈ ಅರ್ಜಿಯ ವಿಚಾರಣ ನಡೆಯಲಿದೆ.

Vijaya Karnataka Web 29 Sep 2022, 6:01 pm
ಹೊಸದಿಲ್ಲಿ: ಅಕ್ರಮ ಗಣಿ ಹಗರಣ ಪ್ರಕರಣವನ್ನೆದುರಿಸುತ್ತಿರುವ ಗಣಿಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಇದೀಗ ಬಳ್ಳಾರಿ ಪ್ರವೇಶಕ್ಕೆ ಅನುಮತಿ ಕೋರಿ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಕದ ತಟ್ಟಿದ್ದಾರೆ. ಈ ಬಾರಿ ಅವರು ತಮ್ಮ ಮಗಳ ಹೆರಿಗೆ ಹಿನ್ನೆಲೆಯಲ್ಲಿ ಬಳ್ಳಾರಿಗೆ ಹೋಗಲು ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ.
Vijaya Karnataka Web gali-janardhan-reddy.
ಗಾಲಿ ಜನಾರ್ದನ ರೆಡ್ಡಿ(ಸಂಗ್ರಹ ಚಿತ್ರ)

ನ್ಯಾ. ಎಂಆರ್.ಶಾ ನೇತೃತ್ವದ ದ್ವಿಸದಸ್ಯ ಪೀಠವು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದು ಶುಕ್ರವಾರ ವಿಚಾರಣೆ ನಡೆಸಲಿದೆ.
ಬಹುಕೋಟಿ ಗಣಿ ಹಗರಣಕ್ಕೆ ಸಂಬಂಧಿಸಿದಂತೆ ಗಾಲಿ ಜನಾರ್ದನ ರೆಡ್ಡಿಗೆ 2009ರಲ್ಲಿ ಜಾಮೀನು ನೀಡಿದ್ದ ಸುಪ್ರೀಂ ಕೋರ್ಟ್ ಕರ್ನಾಟಕದ ಬಳ್ಳಾರಿ, ಆಂಧ್ರಪ್ರದೇಶದ ಕಡಪಾ ಮತ್ತು ಅನಂತಪುರ ಜಿಲ್ಲೆಗಳಿಗೆ ಪ್ರವೇಶಿಸದಂತೆ ನಿರ್ಬಂಧ ಹೇರಿತ್ತು. ಆ ಬಳಿಕ ಜನಾರ್ದನ ರೆಡ್ಡಿ ಕೆಲವೊಂದು ಸಂದರ್ಭಗಳಲ್ಲಿ ನ್ಯಾಯಾಲಯದ ಅನುಮತಿ ಕೇಳಿ ಬಳ್ಳಾರಿಗೆ ಪ್ರವೇಶಿಸಿದ್ದರು.
ಇದೀಗ ಗಣಿ ಹಗರಣ ಪ್ರಕರಣದ ವಿಚಾರಣೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಜನಾರ್ದನ ರೆಡ್ಡಿಗೆ ಬಳ್ಳಾರಿ ಪ್ರವೇಶಕ್ಕೆ ಪ್ರಕರಣದ ತನಿಖೇೆ ನಡೆಸುತ್ತಿರುವ ಸಿಬಿಐ ಆಕ್ಷೇಪ ವ್ಯಕ್ತಪಡಿಸಿತ್ತು. ಒಂದು ವೇಳೆ ಅನುಮತಿ ನೀಡಿದರೆ ಸಾಕ್ಷಿನಾಶ ಮಾಡುವ ಸಾಧ್ಯತೆ ಇದೆ ಎಂದು ಸಿಬಿಐ ವಾದಿಸಿದ್ದರಿಂದ ನ್ಯಾಯಾಲಯ ಎರಡು ತಿಂಗಳು ಬಳ್ಳಾರಿಗೆ ಪ್ರವೇಶಿಸಿದಂತೆ ಜನಾರ್ದನ ರೆಡ್ಡಿಗೆ ಆದೇಶಿಸಿತ್ತು.
ಇದೀಗ ಅವರು ಮಗಳ ಹೆರಿಗೆ ಹತ್ತಿರ ಬಂದಿರುವುದರಿಂದ ಕನಿಷ್ಠ ಒಂದು ತಿಂಗಳಾದರೂ ಬಳ್ಳಾರಿ ಪ್ರವೇಶಕ್ಕೆ ಅನುಮತಿ ಕೊಡಿ ಎಂದು ಜನಾರ್ದನ ರೆಡ್ಡಿ ಅವರು ತಮ್ಮ ವಕೀಲರ ಮೂಲಕ ಸುಪ್ರೀಂ ಕೋರ್ಟಿಗೆ ಮನವಿ ಮಾಡಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ