ಆ್ಯಪ್ನಗರ

ದೆಹಲಿ ಓಪನ್ ಮಾಡಲು ಸಜ್ಜಾದ ಕೇಜ್ರಿ: ವೈರಸ್‌ನೊಂದಿಗೆ ಬದುಕಲು ಸಿದ್ಧ ಎಂದ ಸಿಎಂ!

ಮೂರನೇ ಹಂತದ ಲಾಕ್‌ಡೌನ್ ಜಾರಿಯಲ್ಲಿರುವಾಗಲೇ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ಆರಂಭಿಸಲು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿರ್ಧರಿಸಿದ್ದಾರೆ. 'ಕೊರೊನಾ ವೈರಸ್‌ನೊಂದಿಗೆ ಬದುಕಲು ನಾವು ಸಜ್ಜಾಗಿದ್ದೇವೆ..'ಎಂದು ಕೇಜ್ರಿವಾಲ್ ಮಾರ್ಮಿಕವಾಗಿ ಹೇಳಿದ್ದಾರೆ.

Vijaya Karnataka Web 3 May 2020, 7:22 pm
ನವದೆಹಲಿ: ಮೂರನೇ ಹಂತದ ಲಾಕ್‌ಡೌನ್ ಜಾರಿಯಲ್ಲಿರುವಾಗಲೇ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ಆರಂಭಿಸಲು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿರ್ಧರಿಸಿದ್ದಾರೆ.
Vijaya Karnataka Web Arvind Kejriwal
ಅರವಿಂದ್ ಕೇಜ್ರಿವಾಲ್


ಈ ಕುರಿತು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, ಕೇಂದ್ರ ಸರ್ಕಾರ ಸೂಚಿಸಿದ ಮಾರ್ಗಸೂಚಿಗಳನ್ವಯ ಕೆಲವು ವಲಯಗಳಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

ದಿಲ್ಲಿಯಲ್ಲಿ ಒಂದೇ ಕಟ್ಟಡದ 41 ಮಂದಿಗೆ ಕೋವಿಡ್ ಸೋಂಕು!

'ಕೊರೊನಾ ವೈರಸ್‌ನೊಂದಿಗೆ ಬದುಕಲು ನಾವು ಸಜ್ಜಾಗಿದ್ದೇವೆ..'ಎಂದು ಮಾರ್ಮಿಕವಾಗಿ ಹೇಳಿರುವ ಅರವಿಂದ್ ಕೇಜ್ರಿವಾಲ್, ಈ ಮೂಲಕ ಲಾಕ್‌ಡೌನ್ ಸಡಿಲಿಕೆಯ ಮುನ್ಸೂಚನೆ ನೀಡಿದರು.

ದೆಹಲಿಯನ್ನು ಮತ್ತೆ ಆರಂಭಿಸುವ ಕಾಲ ಬಂದಿದೆ ಎಂದು ಹೇಳಿರುವ ಅರವಿಂದ್ ಕೇಜ್ರಿವಾಲ್, ಕೊರೊನಾ ವೈರಸ್ ಜೊತೆ ಬದುಕುವುದನ್ನು ಕಲಿಯಬೇಕಿದೆ ಎಂದು ಹೇಳಿದ್ದಾರೆ.


ಕಂಟೈನ್‌ಮೆಂಟ್ ಝೋನ್ ಹೊರತುಪಡಿಸಿ ಉಳಿದ ಕಡೆ ವಾಣಿಜ್ಯ ಚಟುವಟಿಕೆಗಳೂ ಸೇರಿದಂತೆ ದೈನಂದಿನ ಚಟುವಟಿಕೆಗಳನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅನ್ವಯ ಪುನರ್ ಆರಂಭಿಸಲು ಸರ್ಕಾರ ನಿರ್ಧರಿಸಿದೆ ಎಂದು ಕೇಜ್ರಿವಾಲ್ ಸ್ಪಷ್ಟಪಡಿಸಿದರು.

ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು: ಸಿಆರ್‌ಪಿಎಫ್ ಪ್ರಧಾನ ಕಚೇರಿ ಬಂದ್!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಟ್ಟು 4,122 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆಮರಕ ವೈರಾಣುವಿಗೆ ಇದುವರೆಗೂ ಒಟ್ಟು 64 ಜನ ಅಸುನೀಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ