ಆ್ಯಪ್ನಗರ

ಕರೆಯುತಿದೆ ತವರು: ಬಸ್ ನಿಲ್ದಾಣಗಳಿಗೆ ಪ್ರವಾಹದಂತೆ ಹರಿದು ಬಂದ ವಲಸೆ ಕಾರ್ಮಿಕರು!

ಲಾಕ್‌ಡೌನ್ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿರುವ ಲಕ್ಷಾಂತರ ವಲಸೆ ಕಾರ್ಮಿಕರು ಸ್ವಂತ ರಾಜ್ಯಗಳಿಗೆ ತಲುಪಲು ನವದೆಹಲಿಯಲ್ಲಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ಬಸ್ ನಿಲ್ದಾಣಗಳಿಗೆ ಏಕಾಏಕಿ ಸಾವಿರಾರು ವಲಸೆ ಕಾರಮಿಕರು ಲಗ್ಗೆ ಇಟ್ಟಿದ್ದಾರೆ. ಭಾರೀ ಸಂಖ್ಯೆಯಲ್ಲಿರುವ ವಲಸೆ ಕಾರ್ಮಿಕರನ್ನು ನಿಭಾಯಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ.

Vijaya Karnataka Web 29 Mar 2020, 5:04 pm
ನವದೆಹಲಿ: ವಲಸೆ ಕಾರ್ಮಿಕರ ಅನುಕೂಲಕ್ಕಾಗಿ ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ಕೇಂದ್ರ ಸರ್ಕಾರ ವಿಶೇಷಬಸ್ ವ್ಯವಸ್ಥೆ ಮಾಡಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಿಂದ ಈ ವಿಶೇಷ ಬಸ್‌ಗಳು ಸಂಚಾರ ನಡೆಸಿವೆ.
Vijaya Karnataka Web Migrate Workers
ವಲಸೆ ಕಾರ್ಮಿಕರಿಗೆ ವಿಶೇಷ ಬಸ್ ವ್ಯವಸ್ಥೆ ಮಾಡಿರುವ ಹಿನ್ನೆಲೆಯಲ್ಲಿ, ಸಾವಿರಾರು ಕಾರ್ಮಿಕರು ದೆಹಲಿಯ ಆನಂದ್ ವಿಹಾರ್ ಬಸ್ ನಿಲ್ದಾಣಕ್ಕೆ ಲಗ್ಗೆ ಇಟ್ಟಿದ್ದಾರೆ.


ಲಾಕ್‌ಡೌನ್ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿರುವ ವಲಸೆ ಕಾರ್ಮಿಕರು, ಅನ್ಯ ಮಾರ್ಗವಿಲ್ಲದೇ ನಡೆದುಕೊಂಡೇ ತಮ್ಮ ತಮ್ಮ ಸ್ವಂತ ರಾಜ್ಯಗಳಿಗೆ ತಲುಪುತ್ತಿದ್ದು, ಈ ಹಿನ್ನೆಲೆಯಲ್ಲಿ ಅವರ ಅನುಕೂಲಕ್ಕಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.


ಈ ಹಿನ್ನೆಲೆಯಲ್ಲಿ ದೆಹಲಿಯ ವಿವಿಧ ಬಸ್ ನಿಲ್ದಾಣಗಳಲ್ಲಿ ಸಾವಿರಾರು ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ಹೋಗಲು ಲಗ್ಗೆ ಇಟ್ಟಿದ್ದಾರೆ. ಪ್ರವಾಹದಂತೆ ಹರಿದು ಬಂದಿರುವ ವಲಸೆ ಕಾರ್ಮಿಕರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ.


ಕೊರೊನಾ ಲಾಕ್‌ಡೌನ್: ವಲಸೆ ಕಾರ್ಮಿಕರ ಪ್ರಯಾಣಕ್ಕೆ 1000 ಬಸ್‌ ನೀಡಿದ ಉತ್ತರ ಪ್ರದೇಶ!

ದೆಹಲಿಯ ಆನಂದ್ ವಿಹಾರ್ ಬಸ್ ನಿಲ್ದಾಣಕ್ಕೆ ನಿನ್ನೆ(ಮಾ.28) ರಾತ್ರಿಯೇ ಸಾವಿರಾರು ವಲಸೆ ಕಾರ್ಮಿಕರು ಕುಟುಂಬ ಸಮೇತರಾಗಿ ಲಗ್ಗೆ ಇಟ್ಟಿದ್ದು, ಬಸ್ ಮೂಲಕ ತಮ್ಮ ತಮ್ಮ ಊರುಗಳಿಗೆ ತೆರಳಲು ಮುಗಿ ಬಿದ್ದಿದ್ದಾರೆ.


ಇಷ್ಟೊಂದು ಭಾರೀ ಸಂಖ್ಯೆಯಲ್ಲಿ ಜನಮಾವಣೆಗೊಂಡಿರುವ ವಲಸೆ ಕಾರ್ಮಿಕರನ್ನು ಬಸ್‌ಗಳ ಮೂಲಕ ರವಾನಿಸುವುದು ಪೊಲೀಸರಿಗೂ ತಲೆನೋವಾಗಿ ಪರಿಣಮಿಸಿದ್ದು, ವೈರಾಣು ಹರಡುವ ಭೀತಿಯೂ ಎದುರಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ