ಆ್ಯಪ್ನಗರ

ದೆಹಲಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು, ಪೊಲೀಸ್ ಎನ್‌ಕೌಂಟರ್ ನಲ್ಲಿ ಇಬ್ಬರ ಹತ್ಯೆ

ದೆಹಲಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಸಿದೆ. ಇಬ್ಬರು ರೌಡಿಗಳನ್ನು ಪೊಲೀಸರು ಎನ್‌ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ.

Vijaya Karnataka Web 17 Feb 2020, 9:42 am
ಹೊಸ ದಿಲ್ಲಿ: ದೆಹಲಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಸಿದೆ. ಇಬ್ಬರು ರೌಡಿಗಳನ್ನು ಪೊಲೀಸರು ಎನ್‌ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ.
Vijaya Karnataka Web encounter in delhi


ಹಲವು ಪ್ರಕರಣಗಳಲ್ಲಿ ಕ್ರಿಮಿನಲ್ ಗಳಾಗಿದ್ದ ರಮೇಶ್ ಬಹದ್ದೂರ್ ಮತ್ತು ರಾಜಾ ಖರೇಶಿ ಎಂಬವರನ್ನು ದೆಹಲಿಯ ವಿಶೇಷ ಪೊಲೀಸ್ ಪಡೆ ಎನ್ ಕೌಂಟರ್ ನಡೆಸಿ ಕೊಂದುಹಾಕಿದೆ. ಇತ್ತೀಚೆಗೆ ನಡೆದ ಕರವಾಲ್ ನಗರ್ ಕೊಲೆ ಕೇಸಿನಲ್ಲಿ ಇವರಿಬ್ಬರು ಪೊಲೀಸರಿಗೆ ಬೇಕಾಗಿದ್ದರು.



ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ದೆಹಲಿಯ ಪುಲ್ ಪ್ರಹ್ಲಾದ್ ಪುರ್ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ದೆಹಲಿ ಪೊಲೀಸ್ ವಿಶೇಷ ಘಟಕ ಮತ್ತು ಕ್ರಿಮಿನಲ್ ಗಳ ನಡುವೆ 30 ಸುತ್ತು ಗುಂಡು ಹಾರಾಟ ನಡೆಯಿತು. ರೌಡಿಗಳು ನಡೆಸಿದ ಗುಂಡಿನ ದಾಳಿಗೆ ಪೊಲೀಸರು ಪ್ರತ್ಯುತ್ತರ ನೀಡಿ ಕೊಂದು ಹಾಕಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ