ಆ್ಯಪ್ನಗರ

ಗಂಡನ ಕೊಂದು ಫೇಸ್‌ಬುಕ್‌ನಲ್ಲಿ ಮಾಹಿತಿ: ಆತ್ಮಹತ್ಯೆಗೆ ಯತ್ನಿಸಿದ ಪತ್ನಿ ಇದೀಗ ಪೊಲೀಸರ ಅತಿಥಿ!

ಹರಿತವಾದ ಚಾಕುವಿನಿಂದ ಪತಿಯನ್ನು ಕೊಂದ ಪತ್ನಿ ತಾನು ಗಂಡನನ್ನು ಕೊಂದಿರುವ ಬಗ್ಗೆ ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಲ್ಲದೇ, ಆತ್ಮಹತ್ಯೆಗೂ ಯತ್ನಿಸಿದ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

Vijaya Karnataka Web 4 Jan 2021, 3:34 pm
ಹೊಸದಿಲ್ಲಿ: ಹರಿತವಾದ ಚಾಕುವಿನಿಂದ ಪತಿಯನ್ನು ಕೊಂದ ಪತ್ನಿ ತಾನು ಗಂಡನನ್ನು ಕೊಂದಿರುವ ಬಗ್ಗೆ ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಲ್ಲದೇ, ಆತ್ಮಹತ್ಯೆಗೂ ಯತ್ನಿಸಿದ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.
Vijaya Karnataka Web Delhi police
ಸಾಂದರ್ಭಿಕ ಚಿತ್ರ


ಇಲ್ಲಿನ ಚತರ್‌ಪುರ್ ಪ್ರದೇಶದ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಿದ್ದ ದಂಪತಿ ನಡುವೆ ಸಾಂಸಾರಿಕ ಬಿರುಕು ಮೂಡಿತ್ತು ಎನ್ನಲಾಗಿದ್ದು, ದಂಪತಿ ನಡುವೆ ನಡೆದ ವಾಗ್ವಾದದ ವೇಳೆ ಪತ್ನಿ ತನ್ನ ಪತಿಯನ್ನು ಹರಿತವಾದ ಚಾಕುವಿನಿಂದ ಇರಿದು ಕೊಂದಿದ್ದಾಳೆ.

ಕೊಲೆ ಮಾಡಿದ ಬಳಿಕ ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ ಪತ್ನಿ, ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆದರೆ ಈಕೆಯ ಫೇಸ್‌ಬುಕ್ ಪೋಸ್ಟ್ ನೋಡಿದ ಅಪಾರ್ಟ್‌ಮೆಂಟ್ ಮಾಲೀಕ, ಕೂಡಲೇ ಪೊಲೀಸರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾನೆ.

ಹಾಸನ: ಅನೈತಿಕ ಸಂಬಂಧಕ್ಕೆ ಸಮ್ಮತಿಸದ ಗೃಹಿಣಿ ಹತ್ಯೆ, ಆರೋಪಿ ಸೆರೆ

ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಮನೆಯ ಬಾಗಿಲು ಮುರಿದು ಒಳಗೆ ಬಂದಾಗ ಪತಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ನೋಡಿದ್ದಾರೆ. ಅಲ್ಲದೇ ಪತಿಯ ಶವದ ಪಕ್ಕದಲ್ಲೇ ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದ ಪತ್ನಿಯನ್ನು ರಕ್ಷಿಸಿರುವ ಪೊಲೀಸರು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ದಂಪತಿಯ ಸಾಂಸಾರಿಕ ಜೀವನ ಅಷ್ಟೊಂದು ಚೆನ್ನಾಗಿರಲಿಲ್ಲ ಎಂದು ಹೇಳಿರುವ ನೆರೆಹೊರೆಯವರು, ಇಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಹಿಳೆಯ ಆಕಸ್ಮಿಕ ಸಾವಿನ ಕೇಸ್‌ಗೆ ಟ್ವಿಸ್ಟ್‌ ಕೊಟ್ಟ ಫೋನ್ ಕಾಲ್..! ಗಂಡನೇ ಕೊಲೆಗಾರ..!

ಸದ್ಯ ಆತ್ಮಹತ್ಯೆಗೆ ಯತ್ನಿಸಿದ ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿರುವ ಪೊಲೀಸರು, ಆಕೆಯ ಆರೋಗ್ಯದಲ್ಲಿ ಚೇತರಿಕೆ ಕಂಡ ಬಳಿಕ ಆಕೆಯ ಹೇಳಿಕೆಯನ್ನು ಪಡೆಯಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ