ಆ್ಯಪ್ನಗರ

ಶಾರ್ಜಾದಲ್ಲಿ ಕನ್ನಡ ಕಲರವದ ಝೇಂಕಾರ

ನವೆಂಬರ್ ತಿಂಗಳು ಬಂತೆಂದರೆ ಸಾಕು ತಿಂಗಳಿಡೀ ಯು.ಏ.ಈ ಯಲ್ಲಿ ನೆಲೆಸಿರುವ ಕನ್ನಡಿಗರಿಗೆ ಹಬ್ಬ. ಕನ್ನಡದ ಹಬ್ಬ. ತಾಯಿ ಭುವನೇಶ್ವರಿಯ ನೆನೆಯುವ ಹಬ್ಬ. ಕನ್ನಡ ಕಲರವದ ಝೇಂಕಾರ.

Vijaya Karnataka Web 20 Nov 2017, 3:36 pm
ಶಾರ್ಜಾ: ನವೆಂಬರ್ ತಿಂಗಳು ಬಂತೆಂದರೆ ಸಾಕು ತಿಂಗಳಿಡೀ ಯು.ಏ.ಈ ಯಲ್ಲಿ ನೆಲೆಸಿರುವ ಕನ್ನಡಿಗರಿಗೆ ಹಬ್ಬ. ಕನ್ನಡದ ಹಬ್ಬ. ತಾಯಿ ಭುವನೇಶ್ವರಿಯ ನೆನೆಯುವ ಹಬ್ಬ. ಕನ್ನಡ ಕಲರವದ ಝೇಂಕಾರ. ಹೌದು ಇದಕ್ಕೆ ಸಾಕ್ಷಿಯಾದದ್ದು ಶುಕ್ರವಾರ 17 ನವಂಬರ್ 2017 ರಂದು ನಡೆದ ಶಾರ್ಜಾ ಕರ್ನಾಟಕ ಸಂಘದ 62 ನೆಯ ರಾಜ್ಯೋತ್ಸವ ಕಾರ್ಯಕ್ರಮ ಹಾಗು 15ನೆಯ ವಾರ್ಷಿಕೋತ್ಸವ ಸಮಾರಂಭ.
Vijaya Karnataka Web kannada rajyotsava sharja
ಶಾರ್ಜಾದಲ್ಲಿ ಕನ್ನಡ ಕಲರವದ ಝೇಂಕಾರ


ಶುಕ್ರವಾರ ಸಂಜೆ 4:00 ರಿಂದ ಶಾರ್ಜಾ ಇಂಡಿಯನ್ ಅಸೋಸಿಯೇಷನ್ ಭವ್ಯ ಸಭಾಂಗ
ಣದಲ್ಲಿ ಕನ್ನಡಿಗರ ಚಿಲಿಪಿಲಿಯೊಂದಿಗೆ ಕರ್ನಾಟಕ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಹಾಗು ಸದಸ್ಯರೊಂದಿಗೆ ಮಹಾ ಪೋಷಕರಾದ ಮಾರ್ಕ್ ಡೆನಿಸ್ ಡಿಸೋಜಾ ಇವರು ಕನ್ನಡ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನೃತ್ಯ ಹಾಗೂ ಕನ್ನಡ ಹಾಡುಗಳು ನೆರೆದವರನ್ನು ರಂಜಿಸಿತು.


ಯು ಏ.ಈ ಯಲ್ಲಿ ಕನ್ನಡ ಭಾಷೆಗೆ ಗಣನೀಯ ಸೇವೆ ಸಲ್ಲಿಸುತ್ತಿರುವವರಿಗೆ “ಮಯೂರ ಪ್ರಶಸ್ತಿ” ನೀಡಿ ಗೌರವಿಸಲಾಯಿತು.
ಸಭಾಕಾರ್ಯಕ್ರಮದಲ್ಲಿ ಪೂರ್ವ ಮಯೂರ ಪ್ರಶಸ್ತಿ ಪುರಸ್ಕೃತರನ್ನು ವೇದಿಕೆಗೆ ಬರಮಾಡಿಕೊಳ್ಳಲಾಯಿತು ಹಾಗು ಅವರ ಸೇವೆಯನ್ನು ನೆನೆಯಲಾಯಿತು.

ಖ್ಯಾತ ಯಕ್ಷಗಾನ ಕಲಾವಿದರಾದ ಶೇಖರ್ ಡಿ. ಶೆಟ್ಟಿಗಾರ್ ಕಿನ್ನಿಗೋಳಿ ಇವರಿಗೆ "ಯಕ್ಷ ಮಯೂರ" ಬಿರುದನ್ನಿತ್ತು ಸನ್ಮಾನಿಸಲಾಯಿತು. ಈ ತಿಂಗಳು ಇವರಿಗೆ ಲಭಿಸುವ ಎರಡನೆಯ ಪ್ರಶಸ್ತಿಯು ಇದಾಗಿದೆ. ಈ ಮೊದಲು ನವೆಂಬರ್ 3ರಂದು ಅಬುಧಾಬಿ ಕರ್ನಾಟಕ ಸಂಘ ನೀಡುವ ಪ್ರತಿಷ್ಠಿತ "ದ.ರಾ,ಬೆಂದ್ರೆ " ಪ್ರಶಸ್ತಿ ಇತ್ತು ಗೌರವಿಸಿತ್ತು. ಮಳಲುಗಾಡಿನಲ್ಲಿ ಇವರು ಯಕ್ಷಗಾನ ಸೇವೆಗೆ ಸಲ್ಲಿಸುವ ನಿಸ್ವಾರ್ಥ ಸೇವೆಗೆ ಲಭಿಸಿದ ಪ್ರಶಸ್ತಿಗಳಿವು.



ಕಾರ್ಯಕ್ರಮದುದ್ದಕ್ಕೂ ದುಬೈಯಲ್ಲಿ ನೆಲೆಸಿರುವ ಕವಿ ಇರ್ಷಾದ್ ಮೂಡಬಿದಿರೆ ಇವರ ಚುಟುಕುಗಳನ್ನು ಓದಿ ವಾಚಿಸಿ ಗಣೇಶ್ ರೈ ಇವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟರು.

ಶೇಖರ್ ಡಿ. ಶೆಟ್ಟಿಗಾರ್ ಕಿನ್ನಿಗೋಳಿ ಇವರ ನಿರ್ದೇಶನದಲ್ಲಿ ಯಕ್ಷಮಿತ್ರರು ದುಬಾಯಿ ಇದರ ಬಾಲ ಕಲಾವಿದರು ನಡೆಸಿಕೊಟ್ಟ ದಾಶರಥಿ
ದರ್ಶನ ಯಕ್ಷಗಾನ ಅತ್ಯದ್ಭುತವಾಗಿ ಪ್ರದರ್ಶಿಸಲ್ಪಟ್ಟಿತು.

ಕರ್ನಾಟಕ ಆಹಾರ ಸಚಿವ ಯು ಟಿ ಖಾದರ್ ಹಾಗೂ ಖ್ಯಾತ ಉದ್ಯಮಿ ಡಾ. ಬಿ. ಆರ್ ಶೆಟ್ಟಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ : ರಜನಿ ಭಟ್, ಅಬುಧಾಬಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ