ಆ್ಯಪ್ನಗರ

ಕತಾರ್‌ನಲ್ಲಿ ವೀರ ಯೋಧರಿಗೆ ಶ್ರದ್ಧಾಂಜಲಿ

ಫಎ.14ರಂದು ಪಾಕಿಸ್ತಾನಿ ಉಗ್ರರ ಆತ್ಮಾಹುತಿ ದಾಳಿಯಲ್ಲಿ ಪ್ರಾಣ ಸಮರ್ಪಣೆಗೈದ ಭಾರತೀಯ ಸೈನಿಕರಿಗೆ ಕತಾರ್ ಕನ್ನಡಿಗರು ಶ್ರದ್ಧಾಂಜಲಿ ಸಮರ್ಪಿಸಿದರು.

Vijaya Karnataka Web 23 Feb 2019, 4:50 pm
ದೋಹಾ, ಕತಾರ್: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019 ಫೆ.14ರಂದು ಪಾಕಿಸ್ತಾನಿ ಉಗ್ರಗಾಮಿಗಳ ರಣಹೇಡಿ ಕೃತ್ಯಕ್ಕೆ ಹುತಾತ್ಮರಾದ ಭಾರತೀಯ ಸೈನಿಕರಿಗೆ ದೋಹಾ ಕತಾರ್‌ನಲ್ಲಿ ನೆಲೆಸಿರುವ ಕನ್ನಡಿಗರು ಶ್ರದ್ಧಾಂಜಲಿ ಸಲ್ಲಿಸಿದರು.
Vijaya Karnataka Web Qatar


ಟಿ.ಸಿ.ಎ (ಸೃಜನ ಕಲೆ) ಆವರಣದಲ್ಲಿ ಸುಮಾರು 50 ಮಂದಿ ಫೆ.18ರಂದು ನಡೆದ ಈ ಕಾರ್ಯಕ್ರಮದಲ್ಲಿ ಕತಾರ್‌ನ ಕನ್ನಡಿಗರು ಹುತಾತ್ಮ ಸೈನಿಕರಿಗೆ ಶ್ರದ್ದಾಂಜಲಿ ಸಮರ್ಪಿಸಿದರು.

40 ಸಿ.ಆರ್.ಪಿ.ಎಫ್. ಸೈನಿಕರ ಭಾವಚಿತ್ರದ ಎದುರು ನೆರೆದವರೆಲ್ಲರೂ ಒಬ್ಬೊಬ್ಬರಾಗಿ ಬಂದು ದೀಪ ಬೆಳಗಿ, ವೀರ ಸೈನಿಕರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದರು. 'ಗಂಧದ ಗುಡಿ' ಕನ್ನಡಿಗರ ಬಳಗದ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸೂರ್ಯದೇವರಿಂದ ಕರ್ಣನಿಗೆ ದೊರೆತ ಕವಚದಂತೆ ಸೈನಿಕರು ನಮ್ಮ ಭಾರತ ದೇಶಕ್ಕೆ ರಕ್ಷಾ ಕವಚವಿದ್ದಂತೆ. ಉಗ್ರಗಾಮಿಗಳ ಇಂತಹಾ ದುಷ್ಕೃತ್ಯವು ದೇಶದ ಕವಚಕ್ಕೆ ಆಘಾತವಾದಂತೆ. ಸೈನಿಕರು ನಮ್ಮ ದೇಶವನ್ನು ಕಾಪಾಡುತ್ತಿರುವರು ಎಂಬ ನಂಬಿಕೆಯಿಂದ ಎಲ್ಲರೂ ಸಕುಟುಂಬ ಸಮೇತ ಶಾಂತಿ-ನೆಮ್ಮದಿಯಿಂದ ಮಲಗಲು ಸಾಧ್ಯ ಎಂದು ಹಲವರು ಅನಿಸಿಕೆ ವ್ಯಕ್ತಪಡಿಸಿದರು ಹಾಗೂ ಹುತಾತ್ಮರಾದ ಸೈನಿಕರಿಗೆ ಚಿರ ಶಾಂತಿಗಾಗಿ ಪ್ರಾರ್ಥಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ