ಆ್ಯಪ್ನಗರ

ವೈದ್ಯರೂ ಇಲ್ಲ, ಚಿಕಿತ್ಸೆಯೂ ಇಲ್ಲ

ಗ್ರಾಮೀಣ ಜನರಿಗೆ ಸಕಾಲಕ್ಕೆ ಆರೋಗ್ಯದ ತುರ್ತು ಸೇವೆ ದೊರೆಯಲಿ ಎಂದು ನಿರ್ಮಿಸಿರುವ ಗೌಡನಬಾವಿ ಆರೋಗ್ಯ ಇಲಾಖೆಯ ಉಪಕೇಂದ್ರ ಕಟ್ಟಡ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ದಾದಿಯರಿಲ್ಲದೇ ನಿರುಪಯುಕ್ತವಾಗಿದೆ.

ವಿಕ ಸುದ್ದಿಲೋಕ 15 Apr 2016, 5:19 am
ಮಸ್ಕಿ; ಗ್ರಾಮೀಣ ಜನರಿಗೆ ಸಕಾಲಕ್ಕೆ ಆರೋಗ್ಯದ ತುರ್ತು ಸೇವೆ ದೊರೆಯಲಿ ಎಂದು ನಿರ್ಮಿಸಿರುವ ಗೌಡನಬಾವಿ ಆರೋಗ್ಯ ಇಲಾಖೆಯ ಉಪಕೇಂದ್ರ ಕಟ್ಟಡ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ದಾದಿಯರಿಲ್ಲದೇ ನಿರುಪಯುಕ್ತವಾಗಿದೆ.
Vijaya Karnataka Web
ವೈದ್ಯರೂ ಇಲ್ಲ, ಚಿಕಿತ್ಸೆಯೂ ಇಲ್ಲ


ಆಸ್ತತ್ರೆಯಲ್ಲಿ ಮೂಲ ಸೌಲಭ್ಯಗಳ ಕೊರತೆಯಿದ್ದು, ರೋಗಿಗಳು ಪರದಾಡುವಂತಾಗಿದೆ. ಸ್ಥಳೀಯ ಗ್ರಾಮಸ್ಥರು ಚಿಕಿತ್ಸೆಗಾಗಿ ಬಳಗಾನೂರು, ಮಸ್ಕಿ, ಸಿಂಧನೂರು ಪಟ್ಟಣವನ್ನು ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಚಿಕಿತ್ಸೆ ನೀಡಲು ಸೂಕ್ತ ಕಟ್ಟಡ ಇಲ್ಲದ ಕಾರಣ ನೇಮಕವಾಗಿರುವ ದಾದಿ, ಆಗಾಗ್ಗೆ ಗ್ರಾಮಕ್ಕೆ ಬಂದು ರೋಗಿಗಳಿಗೆ ಚಿಕಿತ್ಸೆ ನೀಡಿ ಹೋಗುತ್ತಾರೆ. ಸ್ಥಳೀಯ ಆರೋಗ್ಯಾಧಿಕಾರಿಗಳು ಆರೋಗ್ಯ ಕೇಂದ್ರಕ್ಕೆ ಬರುವುದೇ ಇಲ್ಲ. ಇದರಿಂದ ರೋಗಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಇಲಾಖೆ ಅಧಿಕಾರಿಗಳು ಬೇಜವಾಬ್ದಾರಿತನದಿಂದ ಆರೋಗ್ಯ ಇಲಾಖೆಯ ಉಪ ಕಟ್ಟಡ ನಿರುಪಯುಕ್ತವಾಗಿ ಪಾಳು ಬಿದ್ದಿದೆ. ಸುತ್ತಲಿನ ಹಳ್ಳಿಯ ಜನರು ಇಲ್ಲಿಗೆ ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ವಾಪಸ್ ಹೋಗುವಂತಾಗಿದೆ. ಹೀಗಾಗಿ ಸರಕಾರಿ ಆಸ್ಪತ್ರೆ ಇದ್ದೂ ಇಲ್ಲದಂತಾಗಿದೆ ಎಂಬುದು ಸಾರ್ವಜನಿಕರು ದೂರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ