ಆ್ಯಪ್ನಗರ

ಕುಡಿವ ನೀರು, ವಿದ್ಯುತ್ ಸಮಸ್ಯೆಗೆ ಪರಿಹಾರ: ಸಿಎಂ

ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ವಿದ್ಯುತ್ ಕೊರತೆಯಾಗದಂತೆ ರಾಜ್ಯ ಸರಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಕ ಸುದ್ದಿಲೋಕ 13 Jan 2017, 8:18 am
ರಾಯಚೂರು: ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ವಿದ್ಯುತ್ ಕೊರತೆಯಾಗದಂತೆ ರಾಜ್ಯ ಸರಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
Vijaya Karnataka Web
ಕುಡಿವ ನೀರು, ವಿದ್ಯುತ್ ಸಮಸ್ಯೆಗೆ ಪರಿಹಾರ: ಸಿಎಂ


ದೇವದುರ್ಗ ತಾಲೂಕಿನ ವೀರಗೋಟದ ಕನಕಗುರುಪೀಠದಲ್ಲಿ ಗುರುವಾರ, ಸುದ್ದಿಗಾರರೊಂದಿಗೆ ಮಾತನಾಡಿ, ‘‘ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರಿನ ಸಂಗ್ರಹ ಗಣನೀಯ ಕುಸಿದಿದೆ. ಆದರೂ ವಿದ್ಯುತ್ ಅಭಾವದ ಬಿಸಿ ತಟ್ಟದಂತೆ ಸರಕಾರ ಕಾಳಜಿ ತೋರಲಿದೆ. ಹಿಂದೆ ನೀಡಿದ ಭರವಸೆಯಂತೆ ನಿತ್ಯವೂ 7 ಗಂಟೆ 3 ಫೇಸ್ ವಿದ್ಯುತ್ ಪೂರೈಸಲಾಗುತ್ತಿದೆ’’ ಎಂದು ತಿಳಿಸಿದರು.

ಅಗತ್ಯ ಹಣ ಬಿಡುಗಡೆ: ‘‘ರಾತ್ರಿ ವೇಳೆ 4 ಹಾಗೂ ದಿನದಲ್ಲಿ 3 ತಾಸು, ತ್ರೀಫೇಸ್ ವಿದ್ಯುತ್ ಪೂರೈಸಲಾಗುತ್ತದೆ. ಅದೇ ರೀತಿ 24 ತಾಸು ಸಿಂಗಲ್ ಫೇಸ್ ವಿದ್ಯುತ್ ಒದಗಿಸಲಾಗುತ್ತದೆ. ಕುಡಿಯುವ ನೀರಿನ ಅಭಾವ ಉಂಟಾಗದಂತೆ ಕ್ರಮ ಕೈಗೊಳ್ಳಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿ ಹಣ ಬಿಡುಗಡೆಗೊಳಿಸಲಾಗಿದೆ’’ ಎಂದು ಹೇಳಿದರು.

‘‘371ನೇ ಕಲಂ (ಜೆ)ಅಡಿ ಹೈ.ಕ. ಭಾಗದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಯಲ್ಲಿ ಕೆಲ ತಾಂತ್ರಿಕ ಸಮಸ್ಯೆಗಳಿಂದಾಗಿ ಸಂಪೂರ್ಣ ಭರ್ತಿಯಾಗಿಲ್ಲ. ಶೀಘ್ರವೇ ಸರಕಾರ ತಾಂತ್ರಿಕ ತೊಡಕು ನಿವಾರಿಸಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಿದೆ’’ ಎಂದ ಅವರು, ‘‘ತೊಗರಿ ಖರೀದಿ ಕೇಂದ್ರಗಳಿಗೆ ಸರಕಾರ ಈ ಮೊದಲು ಭರವಸೆ ನೀಡಿದಂತೆಯೇ ಶೀಘ್ರ ಪ್ರೋತ್ಸಾಹ ಧನ ಮಂಜೂರು ಮಾಡುತ್ತದೆ’’ ಎಂದು ತಿಳಿಸಿದರು.

ಮತ್ತೊಮ್ಮೆ ಕೇಂದ್ರಕ್ಕೆ ಮನವಿ: ‘‘ರಾಜ್ಯದಲ್ಲಿ ಬರ ಪರಿಹಾರ ಕಾರ್ಯಗಳಿಗೆ ಕೇಂದ್ರದಿಂದ 4700ಕೋಟಿ ರೂ.ಗೆ ಬೇಡಿಕೆ ಇಡಲಾಗಿತ್ತು. ಆದರೆ, ಕೇಂದ್ರವು 1775ಕೋಟಿ ರೂ. ನೀಡಲು ಸಮ್ಮತಿಸಿದೆ. ಹೆಚ್ಚಿನ ಮೊತ್ತದ ನೆರವಿಗೆ ಕೇಂದ್ರಕ್ಕೆ ಪುನಾ ಮನವಿ ಸಲ್ಲಿಸಲಾಗುತ್ತದೆ’’ ಎಂದು ಸಿಎಂ ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಎಚ್.ಎಂ.ರೇವಣ್ಣ ಸೇರಿ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ