ಆ್ಯಪ್ನಗರ

ಗ್ರಾಮಲೆಕ್ಕಿಗನ ವರ್ಗಾವಣೆಗೆ ಒತ್ತಾಯ

ಗ್ರಾಮದ ಗ್ರಾಮಲೆಕ್ಕಿಗ ಒಂದು ವರ್ಷದಿಂದ ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಇದರಿಂದ ರೈತರಿಗೆ ಹಾಗೂ ಗ್ರಾಮದ ಸಾರ್ವಜನಿಕರಿಗೆ ತೊಂದರೆಯಾಗಿದ್ದು, ಇವರನ್ನು ಬೇರೆಡೆಗೆ ವರ್ಗಾವಣೆ ಮಾಡಬೇಕೆಂದು ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಕಾರ್ಯಕರ್ತರು ಮಂಗಳವಾರ ಲಿಂಗಸಗೂರಿನಲ್ಲಿ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.

ವಿಕ ಸುದ್ದಿಲೋಕ 2 Feb 2017, 7:34 am
ಹಟ್ಟಿಚಿನ್ನದಗಣಿ: ಗ್ರಾಮದ ಗ್ರಾಮಲೆಕ್ಕಿಗ ಒಂದು ವರ್ಷದಿಂದ ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಇದರಿಂದ ರೈತರಿಗೆ ಹಾಗೂ ಗ್ರಾಮದ ಸಾರ್ವಜನಿಕರಿಗೆ ತೊಂದರೆಯಾಗಿದ್ದು, ಇವರನ್ನು ಬೇರೆಡೆಗೆ ವರ್ಗಾವಣೆ ಮಾಡಬೇಕೆಂದು ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಕಾರ್ಯಕರ್ತರು ಮಂಗಳವಾರ ಲಿಂಗಸಗೂರಿನಲ್ಲಿ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.
Vijaya Karnataka Web
ಗ್ರಾಮಲೆಕ್ಕಿಗನ ವರ್ಗಾವಣೆಗೆ ಒತ್ತಾಯ


ತಮ್ಮ ನಿತ್ಯದ ಕೆಲಸ ಕಾರ್ಯಗಳಿಗಾಗಿ ರೈತರು, ಜನರು ಗ್ರಾಮ ಲೆಕ್ಕಾಧಿಕಾರಿಯನ್ನು ಸಂಪರ್ಕಿಸಿದರೂ ಸಿಗದಂತಾಗಿದ್ದಾರೆ. ದೂರದ ಹಳ್ಳಿಗಳಿಂದ ಬರುವ ಬಡರೈತರು ಹಾಗೂ ಸಾರ್ವಜನಿಕರು ನೂರಾರು ಬಾರಿ ಕಚೇರಿಗೆ ಅಲೆದಾಡಿದರೂ ಸಿಗದೇ ಇರುವುದರಿಂದ ಪರದಾಡುವ ಪರಿಸ್ಥಿತಿ ಉಂಟಾಗಿದೆ. ಹಾಗಾಗಿ ಗ್ರಾಮಲೆಕ್ಕಾಧಿಕಾರಿಯನ್ನು ಬೇರೆ ಕಡೆಗೆ ವರ್ಗಾವಣೆ ಮಾಡಬೇಕೆಂದು ಕರವೇ ಸಂಘಟನೆ ಮುಖಂಡರಾದ ಮೌನೇಶ ಕಾಕಾನಗರ, ಬುಜ್ಜ ನಾಯಕ, ಗ್ರಾಮದ ಮುಖಂಡ ನಾರಾಯಣ ಇತರರು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ