ಆ್ಯಪ್ನಗರ

ಸಾಲಬಾಧೆ: ರೈತ ಆತ್ಮಹತ್ಯೆ

ಪಾಮನಕಲ್ಲೂರು ಗ್ರಾ.ಪಂ. ವ್ಯಾಪ್ತಿಯ ಗುಡಿಹಾಳ ಗ್ರಾಮದಲ್ಲಿ ಸಾಲಬಾಧೆ ತಾಳದ ರೈತರೊಬ್ಬರು ಭಾನುವಾರ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಕ ಸುದ್ದಿಲೋಕ 15 May 2017, 7:26 am
ಕವಿತಾಳ (ರಾಯಚೂರು) : ಪಾಮನಕಲ್ಲೂರು ಗ್ರಾ.ಪಂ. ವ್ಯಾಪ್ತಿಯ ಗುಡಿಹಾಳ ಗ್ರಾಮದಲ್ಲಿ ಸಾಲಬಾಧೆ ತಾಳದ ರೈತರೊಬ್ಬರು ಭಾನುವಾರ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web
ಸಾಲಬಾಧೆ: ರೈತ ಆತ್ಮಹತ್ಯೆ


ಅಮರೇಶ ವಂದ್ಲಿ (45) ಮೃತರು. ಅವರ ಹೆಸರಲ್ಲಿರುವ ಸ್ವಂತ 3 ಎಕರೆ, ಬೆಂಚಮರಡಿಯಲ್ಲಿ 6 ಹಾಗೂ ಗೆಜ್ಜಲಗಟ್ಟಾದಲ್ಲಿ 12 ಎಕರೆ ಲೀಸ್ ಜಮೀನು ಪಡೆದು ಕೃಷಿ ಚಟುವಟಿಕೆ ಕೈಗೊಂಡಿದ್ದರು. ಕವಿತಾಳ ಎಸ್‌ಬಿಎಚ್‌ನಲ್ಲಿ 1ಲಕ್ಷ ರೂ. ಹಾಗೂ ಖಾಸಗಿಯಾಗಿ 10ಲಕ್ಷ ರೂ. ಸಾಲ ಮಾಡಿದ್ದರು. ಹತ್ತಿ ಬೆಳೆ ನಷ್ಟದಿಂದ ಸಾಲತೀರಿಸಲಾಗದ ಚಿಂತೆಯಲ್ಲಿ ಆತ್ಮಹತ್ಯೆಮಾಡಿಕೊಂಡಿದ್ದಾರೆ. ಅವರಿಗೆ ತಾಯಿ, ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿ ಇದ್ದಾರೆ. ಪತ್ನಿ ರತ್ನಮ್ಮ ನೀಡಿದ ದೂರು ಆಧರಿಸಿ, ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ