ಗಬ್ಬೂರು; ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಂಯೋಜಕ ಯಂಕೋಬ ಸರ್ಜಾಪುರ ಮಾತನಾಡಿ, ತಂಬಾಕು ಸೇವನೆಯಿಂದ ಕ್ಯಾನ್ಸರ್, ಹೃದಯ ಸಂಬಂಧಿ, ಶ್ವಾಸಕೋಶ ಹಾಗೂ ಮಾರಣಾಂತಿಕ ಕಾಯಿಲೆಗೊಳಗಾಗಿ ಮೃತಪಟ್ಟಿದ್ದಾರೆ. ಧೂಮಸಹಿತ ತಂಬಾಕು ವಸ್ತುಗಳಲ್ಲಿ 7 ಸಾವಿರ ರಾಸಾಯನಿಕ ವಸ್ತುಗಳಿದ್ದು, ಅದರಲ್ಲಿ ಶೇ.69 ರಷ್ಟು ಕ್ಯಾನ್ಸರ್ಕಾರಕ ವಸ್ತುಗಳಾಗಿವೆ. ಧೂಮರಹಿತ (ಜಗಿಯುವ ತಂಬಾಕುಗಳು) ಉತ್ಪನ್ನಗಳಲ್ಲಿ 3095 ರಾಸಾಯನಿಕಗಳಿದ್ದು, ಅದರಲ್ಲಿ ಶೇ.28ರಷ್ಟು ಕ್ಯಾನ್ಸರ್ಕಾರಕ ವಸ್ತುಗಳಾಗಿವೆ. ಆದ್ದರಿಂದ ಪ್ರತಿ ವರ್ಷ ವಿಶ್ವಾದ್ಯಂತ 60 ಲಕ್ಷ ಕ್ಕಿಂತ ಹೆಚ್ಚು ಜನರು ತಂಬಾಕು ಸೇವನೆಯಿಂದ ಉಂಟಾಗುವ ಕಾಯಿಲೆಗಳಿಂದ ಮೃತಪಡುತ್ತಿದ್ದಾರೆ ಎಂದು ಹೇಳಿದರು.
ರಾಜ್ಯ ಸರಕಾರ, ಸರಕಾರಿ ಶಾಲೆ, ಕಾಲೇಜು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿದೆ. ವಿದ್ಯಾರ್ಥಿಗಳು ಮನೆಯಲ್ಲಿ ತಂದೆ, ತಾಯಿ, ಸಂಬಂಧಿಕರಿಗೆ ತಂಬಾಕು ಸೇವನೆಯಿಂದಾಗುವ ದುಷ್ಪ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು. ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮನಶಾಸ್ತ್ರಜ್ಞ ಮಲ್ಲಿಕಾರ್ಜುನ ಕ್ಯಾದಿಗೇರಾ, ಪ.ಪೂರ್ವ ಕಾಲೇಜು ಪ್ರಾಚಾರ್ಯೆ ಮಲ್ಲಮ್ಮ ಮೇಟಿ, ಸರಕಾರಿ ಪ್ರೌಢ ಶಾಲೆ ಮುಖ್ಯಗುರು ಸುಭಾಷ್ಸಿಂಗ್ ಹಾಗೂ ಶಿಕ್ಷ ಕ ವೃಂದದವರು ಮತ್ತು ವಿದ್ಯಾರ್ಥಿಗಳು ಇದ್ದರು.
ಗಬ್ಬೂರಿನ ಸರಕಾರಿ ಪ್ರೌಢ ಶಾಲೆ ಆವರಣದಲ್ಲಿ ಶನಿವಾರ ನಾನಾ ಇಲಾಖೆಗಳ ಸಹಯೋಗದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ವಿದ್ಯಾರ್ಥಿಗಳಿಗೆ ತಂಬಾಕು ಸೇವನೆಯ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.