ಆ್ಯಪ್ನಗರ

ಅಂಗನವಾಡಿ ಕಾರ್ಯಕರ್ತೆಯ ಆಕ್ರೋಶ

ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಹಾಜರಾತಿಗೆ ಅನುಗುಣವಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಮಕ್ಕಳ ಮಾಸಿಕ ಹಾಜರಾತಿಗೆ ಅನುಗುಣವಾಗಿ ಗೌರವಧನ ನಿಗದಿಪಡಿಸಿರುವ ಜಿಲ್ಲಾಡಳಿತದ ಕ್ರಮ ವಿರೋಧಿಸಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಸಂಘದಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.

ವಿಕ ಸುದ್ದಿಲೋಕ 11 Aug 2017, 7:25 am
ಸಿಂಧನೂರು: ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಹಾಜರಾತಿಗೆ ಅನುಗುಣವಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಮಕ್ಕಳ ಮಾಸಿಕ ಹಾಜರಾತಿಗೆ ಅನುಗುಣವಾಗಿ ಗೌರವಧನ ನಿಗದಿಪಡಿಸಿರುವ ಜಿಲ್ಲಾಡಳಿತದ ಕ್ರಮ ವಿರೋಧಿಸಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಸಂಘದಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
Vijaya Karnataka Web
ಅಂಗನವಾಡಿ ಕಾರ್ಯಕರ್ತೆಯ ಆಕ್ರೋಶ


ನಗರದ ಪ್ರವಾಸಿ ಮಂದಿರದಿಂದ ಪ್ರಾರಂಭಗೊಂಡ ಪ್ರತಿಭಟನೆಯು ತಹಸಿಲ್ ಕಚೇರಿ ತಲುಪಿತು. ನಂತರ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು. ಸಹ ನೌಕರರಿಗೆ ನೀಡುವ ಗೌರವ ಧನ ಗೌರವಯುತ ಜೀವನಕ್ಕೆ ಸಾಕಾಗುತ್ತಿಲ್ಲ. ಜಿಲ್ಲಾಡಳಿತ ಮಕ್ಕಳ ಶೇಕಡವಾರು ಹಾಜರಾತಿ ವೇತನ ಪಾವತಿ ಕ್ರಮವನ್ನು ರದ್ದುಗೊಳಿಸಬೇಕು. ಗರ್ಭಿಣಿ ಹಾಗೂ ಬಾಣಂತಿಯರಿಗೆ ಬಿಸಿಯೂಟ ಮಾಡುವುದಕ್ಕೆ ಪಾತ್ರೆಗಳು ಹಾಗೂ ಆಹಾರ ಸಾಮಗ್ರಿಗಳನ್ನು ಒದಗಿಸಬೇಕು. ತಿಂಗಳಿಗೊಮ್ಮೆ ಗೌರವಧನ ಕೊಡಬೇಕು. ಕೇಂದ್ರ ಬಾಡಿಗೆ ಕೊಡಬೇಕು. ಅಡುಗೆ ಅನಿಲಗಳನ್ನು ವಿತರಿಸಬೇಕು ಎಂದು ಆಗ್ರಹಿಸಿದರು.

ಸಂಘದ ಜಿಲ್ಲಾಧ್ಯಕ್ಷ ಡಿ.ಎಚ್.ಕಂಬಳಿ, ತಾಲೂಕಾಧ್ಯಕ್ಷೆ ಅಧ್ಯಕ್ಷೆ ಕೆ.ಪ್ರಭಾವತಿ, ಕಾರ್ಯದರ್ಶಿ ಆದಿಲಕ್ಷ್ಮಿ, ರಾಜ್ಯ ಸಮಿತಿ ಸದಸ್ಯ ಎಂ.ತಿಪ್ಪಯ್ಯಶೆಟ್ಟಿ, ತ್ರಿವೇಣಿ, ಎಸ್.ಶಾಂತಾ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ