ಆ್ಯಪ್ನಗರ

ರಾಯಚೂರಲ್ಲಿ ಪ್ರೇಮ ವಿವಾಹದ ದ್ವೇಷಕ್ಕೆ ಒಂದೇ ಕುಟುಂಬದ ನಾಲ್ವರು ಕೊಲೆ!

ಜಿಲ್ಲೆಯ ಸಿಂಧನೂರು ನಗರದ ಸುಕಾಲಪೇಟೆಯಲ್ಲಿ ಪ್ರೇಮ ವಿವಾಹದ ದ್ವೇಷಕ್ಕೆ ಯುವತಿಯ ಕಡೆಯವರು ಯುವಕನ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಶನಿವಾರ ನಡೆದಿದೆ. ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ‌.

Vijaya Karnataka Web 11 Jul 2020, 7:13 pm
ರಾಯಚೂರು: ಜಿಲ್ಲೆಯ ಸಿಂಧನೂರು ನಗರದ ಸುಕಾಲಪೇಟೆಯಲ್ಲಿ ಪ್ರೇಮ ವಿವಾಹದ ದ್ವೇಷಕ್ಕೆ ಯುವತಿಯ ಕಡೆಯವರು ಯುವಕನ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಶನಿವಾರ ನಡೆದಿದೆ.
Vijaya Karnataka Web kill


ಕೊಲೆಯಾದ ದುರ್ದೈವಿಗಳನ್ನು ಸುಮಿತ್ರಾ (55), ಶ್ರೀದೇವಿ(36), ಹನುಮೇಶ(35), ನಾಗರಾಜ (38) ಎಂದು ಗುರುತಿಸಲಾಗಿದೆ.

ಮೌನೇಶ ಮತ್ತು ಮಂಜುಳಾ ಪ್ರೀತಿಸಿ ವಿವಾಹವಾಗಿದ್ದರು. ಇದೀಗ ಮಂಜುಳಾ ಕಡೆಯವರು ಮೌನೇಶನ ಕುಟುಂಬ ದವರ ಮೇಲೆ ದಾಳಿ ಮಾಡಿ ಕೊಲೆ ಮಾಡಿದ್ದಾರೆ. ಯುವಕನ ತಾಯಿ ಮತ್ತು ಇಬ್ಬರು ಸಹೋದರರು ಹಾಗೂ ಒಬ್ಬ ಸಹೋದರಿ ಕೊಲೆಯಾಗಿದ್ದಾರೆ.

ಇವರೆಲ್ಲರೂ ಒಂದೇ ಕುಟುಂಬದವರು. ಕಳೆದ ವರ್ಷ ತಮ್ಮ ಮಗಳನ್ನು ಯುವಕನೊಬ್ಬ ಪ್ರೀತಿಸಿ ಮದುವೆಯಾಗಿದ್ದಾನೆಂದು ಅಸಮಾಧಾನಗೊಂಡಿದ್ದ ಯುವತಿ ಕಡೆಯವರು ಇಂದು ಸಂಜೆ ಏಕಾಏಕಿ ಮಾರಕ ಅಸ್ತ್ರ ಗಳಿಂದ ಯುವಕನ ಕಡೆಯವರ ಮನೆಗೆ ತೆರಳಿ ದಾಳಿ ಮಾಡಿ ಕೊಲೆ ಮಾಡಿದ್ದಾರೆ.

ನಾಲ್ವರು ಮೃತಪಟ್ಟಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ‌. ಪ್ರೀತಿಸಿ ಮದುವೆಯಾದ ಇಬ್ಬರು ಸುರಕ್ಷಿತವಾಗಿದ್ದಾರೆ. ಘಟನೆಯಲ್ಲಿ ರೇವತಿ, ತಾಯಮ್ಮ ಹಾಗೂ ಈರಪ್ಪ ಎಂಬುವವರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ‌. ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ‌.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ