ಆ್ಯಪ್ನಗರ

‘ರೈತರಿಗೆ ತಲುಪಿಸಿ ಕೃಷಿ ಯೋಜನೆ’

ಸರಕಾರಗಳು ರೈತರ ಅನುಕೂಲ ಹಾಗೂ ಕೃಷಿ ಉತ್ತೇಜನಕ್ಕಾಗಿ ನಾನಾ ಯೋಜನೆಗಳನ್ನು ಜಾರಿಗೊಳಿಸಿವೆ. ಅವುಗಳನ್ನು ರೈತರಿಗೆ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಶಾಸಕ ಡಿ.ಎಸ್‌.ಹೂಲಗೇರಿ ಹೇಳಿದರು.

Vijaya Karnataka 23 Aug 2019, 5:00 am
ಲಿಂಗಸುಗೂರು : ಸರಕಾರಗಳು ರೈತರ ಅನುಕೂಲ ಹಾಗೂ ಕೃಷಿ ಉತ್ತೇಜನಕ್ಕಾಗಿ ನಾನಾ ಯೋಜನೆಗಳನ್ನು ಜಾರಿಗೊಳಿಸಿವೆ. ಅವುಗಳನ್ನು ರೈತರಿಗೆ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಶಾಸಕ ಡಿ.ಎಸ್‌.ಹೂಲಗೇರಿ ಹೇಳಿದರು.
Vijaya Karnataka Web agricultural project
‘ರೈತರಿಗೆ ತಲುಪಿಸಿ ಕೃಷಿ ಯೋಜನೆ’


ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಗುರುವಾರ ಕೃಷಿ ಇಲಾಖೆ ಹಮ್ಮಿಕೊಂಡಿದ್ದ ಸಮಗ್ರ ಕೃಷಿ ಅಭಿಯಾನದ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪ್ರವಾಹದಿಂದಾದ ನಷ್ಟದ ವರದಿಯನ್ನು ಸರಕಾರಕ್ಕೆ ಕಳಿಸಿ ಹೆಚ್ಚಿನ ಪರಿಹಾರಕ್ಕೆ ಪ್ರಯತ್ನ ಮಾಡುವೆ ಎಂದರು. ಯಾವುದೇ ಇಲಾಖೆಯಲ್ಲಿ ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ತೊಂದರೆ ಕೊಟ್ಟರೆ ನಾನು ಸಹಿಸೋಲ್ಲ.

ರೈತ ಸಂಘದ ಮುಖಂಡ ಅಮರಣ್ಣ ಗುಡಿಹಾಳ ಮಾತನಾಡಿ, ಎಲ್ಲ ಸಮಸ್ಯೆಗಳ ಪರಿಹಾರಕ್ಕಾಗಿ ಕಚೇರಿಗಳ ಮುಂದೆ ಹೋರಾಟ ನಡೆಸುವುದನ್ನು ಬಿಟ್ಟು ಶಾಸಕರ ಮನೆ ಎದುರು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಎಪಿಎಂಸಿ ಅಧ್ಯಕ್ಷ ಜಂಬನಗೌಡ ಕಾಚಾಪುರ, ಪಿಕಾರ್ಡ ಬ್ಯಾಂಕ್‌ ಅಧ್ಯಕ್ಷ ನಾಗನಗೌಡ ತುರಡಗಿ, ತಾ.ಪಂ ಸದಸ್ಯ ವಾಹಿದ್‌ ಖಾದ್ರಿ, ಟಿಎಎಂಎಸ್‌ ಅಧ್ಯಕ್ಷ ಶಶಿಧರ ಪಾಟೀಲ್‌, ಮುಖಂಡರಾದ ಭೂಪನಗೌಡ ಕರಡಕಲ್‌, ಪಾಮಯ್ಯ ಮುರಾರಿ, ಗುಂಡಪ್ಪ ನಾಯಕ, ತಾ.ಪಂ ಇಒ ಪ್ರಕಾಶ, ಕೃಷಿ ಉಪನಿರ್ದೇಶಕಿ ಮಂಜುಳಾ ಬಸವರೆಡ್ಡಿ, ಕೃಷಿ ವಿಸ್ತರಣಾ ಘಟಕ ಮುಖ್ಯಸ್ಥ ಗಿರೀಶ ಮರಡ್ಡಿ, ಕೃಷಿ ಸಹಾಯಕ ನಿರ್ದೇಶಕ ಮಹಾಂತೇಶ ಹವಾಲ್ದಾರ, ಕೃಷಿ ಅಧಿಕಾರಿ ಸಿದ್ದಪ್ಪ ಬಾಚಿಹಾಳ, ಅಮರೇಶ ಆಶಿಹಾಳ ಹಾಗೂ ಇನ್ನಿತರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ