ಆ್ಯಪ್ನಗರ

ಮಾನವ ಕಳ್ಳಸಾಗಣೆದಾರರ ಬಂಧನ

ಅಂತಾರಾಜ್ಯ ಮಾನವ ಕಳ್ಳಸಾಗಣೆ ಪ್ರಕರಣಗಳಲ್ಲಿ ಶಾಮೀಲಾಗಿ ತಲೆಮರೆಸಿಕೊಂಡಿದ್ದ ಪಶ್ಚಿಮ ಬಂಗಾಳ ಮೂಲದ ಮಹಿಳೆಯರಿಬ್ಬರನ್ನು ಇಲ್ಲಿನ ಪೊಲೀಸರು ಸೋಮವಾರ ತಡರಾತ್ರಿ ಬಂಧಿಸಿದ್ದಾರೆ.

Vijaya Karnataka 6 Sep 2017, 8:22 am
ರಾಯಚೂರು: ಅಂತಾರಾಜ್ಯ ಮಾನವ ಕಳ್ಳಸಾಗಣೆ ಪ್ರಕರಣಗಳಲ್ಲಿ ಶಾಮೀಲಾಗಿ ತಲೆಮರೆಸಿಕೊಂಡಿದ್ದ ಪಶ್ಚಿಮ ಬಂಗಾಳ ಮೂಲದ ಮಹಿಳೆಯರಿಬ್ಬರನ್ನು ಇಲ್ಲಿನ ಪೊಲೀಸರು ಸೋಮವಾರ ತಡರಾತ್ರಿ ಬಂಧಿಸಿದ್ದಾರೆ.
Vijaya Karnataka Web arrest of human traffickers
ಮಾನವ ಕಳ್ಳಸಾಗಣೆದಾರರ ಬಂಧನ


ಪರ್ವೀನ್ ಮತ್ತು ರೇಷ್ಮಾ ಬಂಧಿತರು. ಅವರು ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಗಳೂರಿನಿಂದ ಹೊಸದಿಲ್ಲಿಗೆ ತೆರಳುತ್ತಿರುವ ಬಗ್ಗೆ ಮಾಹಿತಿ ಪಡೆದ ನಗರದ ಪಶ್ಚಿಮ ಪೊಲೀಸ್ ಠಾಣೆಯ ಅಧಿಕಾರಿಗಳು, ಇಲ್ಲಿನ ರೈಲು ನಿಲ್ದಾಣದಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರು ಮಕ್ಕಳ ಕಳ್ಳ ಸಾಗಣೆ ಜಾಲದಲ್ಲಿ ತೊಡಗಿದ್ದು, ಇವರ ವಿರುದ್ಧ ಪಶ್ಚಿಮ ಬಂಗಾಳದ ಸುಂದರಬನ್ ಸೇರಿ ನಾನಾ ಕಡೆ ಮಾನವ ಕಳ್ಳ ಸಾಗಣೆ ಪ್ರಕರಣಗಳು ದಾಖಲಾಗಿವೆ. ಹೆಚ್ಚಿನ ವಿಚಾರಣೆಗೆ ಆರೋಪಿಗಳನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ