ಆ್ಯಪ್ನಗರ

ಕೊರೊನಾ ನಿಯಮಗಳ ಪಾಲನೆಯೊಂದಿಗೆ ರಾಯಚೂರಿನ ರುದ್ರಭೂಮಿಯಲ್ಲಿ ಅಶೋಕ್‌ ಗಸ್ತಿ ಅಂತ್ಯ ಸಂಸ್ಕಾರ !

ಗಸ್ತಿ ಅವರು ​​ಕೊರೊನಾದಿಂದಾಗಿ ಮೃತಪಟ್ಟ ಹಿನ್ನೆಲೆ ಕೊರೊನಾ ನಿಯಮದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದಾಗಿ ಜಿಲ್ಲಾಡಳಿತ ತಿಳಿಸಿದೆ. ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಗಸ್ತಿ ಅವರ ಪಾರ್ಥಿವ ಶರೀರ ರಾಯಚೂರಿನ ಅವರ ನಿವಾಸಕ್ಕೆ ಆಗಮಿಸಿದೆ. ನಿವಾಸದಲ್ಲಿ ಅಂತಿಮ ದರ್ಶನದ ಬಳಿಕ ಅಂಬ್ಯುಲೆನ್ಸ್‌ ಮೂಲಕವೇ ಪೋತಗಲ್‌ನ ಸ್ಮಶಾನಕ್ಕೆ ರವಾನೆಯಾಗಲಿದೆ.

Agencies 18 Sep 2020, 12:22 pm
ರಾಯಚೂರು: ಗುರುವಾರ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹಾಗೂ ಬಹು ಅಂಗಾಂಗ ವೈಫಲ್ಯದಿಂದ ಕೊನೆಯುಸಿರೆಳೆದ ರಾಜ್ಯಸಭೆಯ ಬಿಜೆಪಿ ಪಕ್ಷದ ಸದಸ್ಯ ಅಶೋಕ ಗಸ್ತಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಶುಕ್ರವಾರ ನಡೆಯಲಿದೆ.
Vijaya Karnataka Web Ashok Gasti

ರಾಯಚೂರು ನಗರದ ಪೋತಗಲ್ ರಸ್ತೆಯಲ್ಲಿರುವ ಕೊರೊನಾದಿಂದ ಮೃತರಿಗೆ ಮೀಸಲಿರಿಸಿದ ರುದ್ರಭೂಮಿಯಲ್ಲಿ ಗಸ್ತಿ ಅವರ ಅಂತಿಮ ಸಂಸ್ಕಾರ ನಡೆಯಲಿದೆ.

ಇನ್ನು ಗಸ್ತಿ ಅವರು ಕೊರೊನಾದಿಂದಾಗಿ ಮೃತಪಟ್ಟ ಹಿನ್ನೆಲೆ ಕೊರೊನಾ ನಿಯಮದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದಾಗಿ ಜಿಲ್ಲಾಡಳಿತ ತಿಳಿಸಿದೆ. ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಗಸ್ತಿ ಅವರ ಪಾರ್ಥಿವ ಶರೀರ ರಾಯಚೂರಿನ ಅವರ ನಿವಾಸಕ್ಕೆ ಆಗಮಿಸಿದೆ. ನಿವಾಸದಲ್ಲಿ ಅಂತಿಮ ದರ್ಶನದ ಬಳಿಕ ಅಂಬ್ಯುಲೆನ್ಸ್‌ ಮೂಲಕವೇ ಪೋತಗಲ್‌ನ ಸ್ಮಶಾನಕ್ಕೆ ರವಾನೆಯಾಗಲಿದೆ.

ಇನ್ನು ಬೆಂಬಲಿಗರಿಗೆ ದೂರದಿಂದಲೇ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಇನ್ನು ಅಂತ್ಯ ಸಂಸ್ಕಾರದ ವೇಳೆ ಬಿಜೆಪಿ ಮುಖಂಡರು ಭಾಗಿಯಾಗಲಿದ್ದಾರೆ. ಇತ್ತೀಚಿಗಷ್ಟೇ 55 ವರ್ಷದ ಅಶೋಕ್‌ ಗಸ್ತಿ ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಸೆಪ್ಟೆಂಬರ್ 2ರಂದು ಗಸ್ತಿ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿತ್ತು. ಈ ಹಿನ್ನೆಲೆ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ಗುರುವಾರ ಚಿಕಿತ್ಸೆ ಫಲಿಸದೆ ಸಾವನಪ್ಪಿದ್ದಾರೆ.

ಕೊರೊನಾ ಸೋಂಕಿನಿಂದ ಬಿಜೆಪಿ ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ನಿಧನ- ಅಧಿಕೃತ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ