ಆ್ಯಪ್ನಗರ

ವಿವಿ ಸ್ಥಾಪನೆ ವಿಳಂಬಕ್ಕೆ ಖಂಡನೆ: ಕಪ್ಪುಪಟ್ಟಿ ಧರಿಸಿ ಪರೀಕ್ಷೆಗೆ ಹಾಜರು

ರಾಯಚೂರು ವಿವಿ ಸ್ಥಾಪನೆಯಲ್ಲಿ ಸರಕಾರ ತೋರುತ್ತಿರುವ ವಿಳಂಬ ನೀತಿ ಖಂಡಿಸಿ, ಗುಲ್ಬರ್ಗ ವಿವಿ ವ್ಯಾಪ್ತಿಯ ರಾಯಚೂರು ನಗರ ಸೇರಿ ಜಿಲ್ಲಾದ್ಯಂತ ಸೋಮವಾರ ಸ್ನಾತಕೋತ್ತರ ಪದವಿ ಪರೀಕ್ಷೆ ವೇಳೆ ಪರೀಕ್ಷಾರ್ಥಿಗಳು ಕೈಗೆ ಕಪ್ಪು ಪಟ್ಟಿ ಧರಿಸಿ ಪರೀಕ್ಷೆಗೆ ಹಾಜರಾದರು.

Vijaya Karnataka 25 Jun 2019, 12:00 am
ರಾಯಚೂರು: ರಾಯಚೂರು ವಿವಿ ಸ್ಥಾಪನೆಯಲ್ಲಿ ಸರಕಾರ ತೋರುತ್ತಿರುವ ವಿಳಂಬ ನೀತಿ ಖಂಡಿಸಿ, ಗುಲ್ಬರ್ಗ ವಿವಿ ವ್ಯಾಪ್ತಿಯ ರಾಯಚೂರು ನಗರ ಸೇರಿ ಜಿಲ್ಲಾದ್ಯಂತ ಸೋಮವಾರ ಸ್ನಾತಕೋತ್ತರ ಪದವಿ ಪರೀಕ್ಷೆ ವೇಳೆ ಪರೀಕ್ಷಾರ್ಥಿಗಳು ಕೈಗೆ ಕಪ್ಪು ಪಟ್ಟಿ ಧರಿಸಿ ಪರೀಕ್ಷೆಗೆ ಹಾಜರಾದರು.
Vijaya Karnataka Web RAC-RCH24JD02


‘‘ರಾಯಚೂರು ಹೊಸ ವಿವಿ ಸ್ಥಾಪನೆ ವಿಚಾರ ಮುಂದಿರಿಸಿಕೊಂಡು ಕಳೆದ ಎರಡೂವರೆ ವರ್ಷಗಳಿಂದ ಸರಕಾರ, ಈ ಭಾಗದ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ. ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳನ್ನು ಒಳಗೊಂಡಂತೆ ಹೊಸ ವಿವಿ ಸ್ಥಾಪಿಸಲು ಎಲ್ಲ ಸೌಲಭ್ಯಗಳಿದ್ದರೂ ಸರಕಾರ ಅನಗತ್ಯ ವಿಳಂಬ ಮಾಡುತ್ತಿದೆ. ರಾಜ್ಯಪಾಲರೂ ಅಂಕಿತ ಹಾಕಲು ಹಿಂದೇಟು ಹಾಕುತ್ತಿದ್ದಾರೆ’’ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು.

‘‘ಮೇ ವೇಳೆ ನಡೆದ ಸಂಪುಟ ಸಭೆಯಲ್ಲಿ ರಾಯಚೂರು ವಿವಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಕಾರ್ಯಾರಂಭ ಮಾಡಲಿದೆ ಎಂದು ಹೇಳಿದ್ದ ಸರಕಾರ, ಇದಕ್ಕೆ ಸಂಬಂಧಿಸಿದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರಿಗೆ ಕಳಿಸಿಕೊಟ್ಟಿತ್ತು. ರಾಜ್ಯಪಾಲರು ಯಾಕಿಷ್ಟು ಅವಸರ ಎಂದು ಪ್ರಶ್ನಿಸಿ ಕಡತ ಮರಳಿಸಿದ್ದಾರೆ. ರಾಯಚೂರು ವಿವಿ ಸ್ಥಾಪನೆಯ ಅಗತ್ಯತೆಗೆ ಸಂಬಂಧಿಸಿ, ಮುಖ್ಯಮಂತ್ರಿಯವರು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡಬೇಕು. ಪ್ರಸಕ್ತ ವರ್ಷದಿಂದಲೇ ರಾಯಚೂರು ವಿವಿ ಕಾರ್ಯಾರಂಭ ಮಾಡುವಲ್ಲಿ ಸೂಕ್ತ ಕ್ರಮಕ್ಕೆ ಮುಂದಾಗಬೇಕು’’ ಎಂದು ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ