ಆ್ಯಪ್ನಗರ

ಬಸವ ಸಾಗರ ಭರ್ತಿ: ಕ್ರಸ್ಟ್‌ಗೇಟ್ ತೆರೆದು ನದಿಗೆ ನೀರು

ಸಮೀಪದ ಬಸವಸಾಗರ ಜಲಾಶಯ ಭರ್ತಿಯಾಗಿರುವುದರಿಂದ ಬುಧವಾರ 14 ಕ್ರಸ್ಟ್‌ಗೇಟ್ ತೆರೆದು 1 ಲಕ್ಷ 46 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.

Vijaya Karnataka 19 Jul 2018, 12:00 am
ನಾಗರಹಾಳ (ಲಿಂಗಸುಗೂರು ತಾ.); ಸಮೀಪದ ಬಸವಸಾಗರ ಜಲಾಶಯ ಭರ್ತಿಯಾಗಿರುವುದರಿಂದ ಬುಧವಾರ 14 ಕ್ರಸ್ಟ್‌ಗೇಟ್ ತೆರೆದು 1 ಲಕ್ಷ 46 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.
Vijaya Karnataka Web RAC-RCH18NAGARAHAL02


ಕಷ್ಣಾ ಕಣಿವೆಯಲ್ಲಿ ಕಳೆದ ಮೂರ‌್ನಾಲ್ಕು ದಿನಗಳಿಂದ ಭಾರಿ ಪ್ರಮಾಣದಲ್ಲಿ ಮಳೆಯಾಗಿದ್ದರಿಂದ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರ ಅಣೆಕಟ್ಟು ಭರ್ತಿಯಾಗಿದೆ. ಬಸವಸಾಗರ ಜಲಾಶಯಕ್ಕೆ ಸುಮಾರು 1 ಲಕ್ಷ 50 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 492.252 ಮೀಟರ್ ಇದೆ. ಸದ್ಯ 491.20 ಮೀಟರ್‌ನಷ್ಟು ನೀರು ಸಂಗ್ರಹವಾಗಿದೆ. ಕೆಲ ಪ್ರಮಾಣದ ನೀರು ಕಾಯ್ದುಕೊಂಡು ಒಳಹರಿವು ಆಧರಿಸಿ ನೀರನ್ನು ನದಿಗೆ ಹರಿಸಲಾಗುತ್ತಿದೆ ಎಂದು ಅಣೆಕಟ್ಟೆಯ ಮುಖ್ಯ ಕಾರ್ಯನಿರ್ವಾಹಕ ಎಂಜಿನಿಯರ್ ಕೃಷ್ಣೇಗೌಡ ತಿಳಿಸಿದ್ದಾರೆ. ಸಾರ್ವಜನಿಕರು ನದಿಗೆ ಇಳಿಯದಂತೆ ಮುನೆಚ್ಚರಿಕೆ ಸೂಚನೆ ನೀಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ