ಆ್ಯಪ್ನಗರ

ಕುರುಬ ಸಮಾಜದ ಶಾಸಕರ ರಾಜೀನಾಮೆಯಿಂದಲೇ ರಾಜ್ಯದಲ್ಲಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ: ವಿಶ್ವನಾಥ್

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಾತು ತಪ್ಪದ ನಾಯಕ. ಕುರುಬ ಸಮಾಜಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಸಾಕಷ್ಟು ನಿರೀಕ್ಷೆಯಿದೆ ಎಂದು ಹೇಳುವ ಮೂಲಕ ತಮ್ಮನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡುವ ಭರವಸೆ ವ್ಯಕ್ತಪಡಿಸಿದ್ದಾರೆ.

Vijaya Karnataka Web 13 Jan 2020, 2:20 pm
ರಾಯಚೂರು: ಕುರುಬ ಸಮಾಜದ ಶಾಸಕರ ರಾಜೀನಾಮೆಯಿಂದಲೇ ರಾಜ್ಯದಲ್ಲಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದಿದೆ. ಹೀಗಾಗಿ ಕುರುಬ ಸಮಾಜಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಸಾಕಷ್ಟು ನಿರೀಕ್ಷೆಯಿದೆ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಹೇಳಿದ್ದಾರೆ.
Vijaya Karnataka Web h vishwanath


ದೇವದುರ್ಗದ ತಿಂಥಿಣಿಯ ಆದಿವಾಸಿಗಳ ಸಮಾವೇಶದಲ್ಲಿ ಮಾತನಾಡಿದ ಎಚ್. ವಿಶ್ವನಾಥ್ ಈ ಹೇಳಿಕೆ ನೀಡಿದ್ದು, ಸೂಕ್ಷ್ಮಾತಿ ಸೂಕ್ಷ್ಮ ಸ್ಥಿತಿಯಲ್ಲಿರುವ ಸಮಾಜಗಳಿಗೂ ಸರಕಾರ ದಿಂದ ಬಹಳಷ್ಟು ನಿರೀಕ್ಷೆಯಿದ್ದು, ಸಿಎಂ ಸ್ಪಂದಿಸುವ ವಿಶ್ವಾಸವಿದೆ.

ಆದಿವಾಸಿಗಳ ಮತ್ತು ಬುಡ ಕಟ್ಟು ಅಭಿವೃದ್ಧಿ ನಿಗಮ ಸ್ಥಾಪನೆಯಾಗಬೇಕಿದೆ. ಈ ನಿಟ್ಟಿನಲ್ಲಿ ಸಿಎಂ ಬಿಎಸ್‌ವೈ ಗಮನಹರಿಸಲಿ ಎಂದು ಆಗ್ರಹಿಸಿದರು.

ಇನ್ನು ಯಡಿಯೂರಪ್ಪ ನುಡಿದಂತೆ ನಡೆಯುವ ನಾಯಕ ಅವರು ಹೇಳಿದ ಹಾಗೆ ನಡೆದುಕೊಳ್ಳಲಿದ್ದಾರೆ. ಯಾವುದೇ ರೀತಿಯ ಅನುಮಾನವಿಲ್ಲ. ಉಪ ಚುನಾವಣೆಯಲ್ಲಿ ಗೆದ್ದಿರುವ ಎಲ್ಲಾ 17 ಶಾಸಕರನ್ನು ಸಚಿವರನ್ನಾಗಿ ಮಾಡುತ್ತಾರೆ. ಎಂಟಿಬಿ ನಾಗರಾಜ್ ಜೊತೆಗೆ ತಮ್ಮನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡುವ ಭರವಸೆ ಇದೆ ಎಂದು ಹೇಳಿದರು. ಪ್ರಮುಖವೆಂದರೆ ವಿಶ್ವನಾಥ್, ನಾಗರಾಜ್ ಹಾಗೂ ಶಂಕರ್ ಕುರುಬ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ