ಆ್ಯಪ್ನಗರ

ಸ್ವಾತಂತ್ರ್ಯೋತ್ಸದಲ್ಲಿ ಕಪ್ಪು ಬಾವುಟ: ಪ್ರತಿಭಟನಾಕಾರರ ಬಂಧನ

ಸ್ವಾತಂತ್ರ್ಯೋತ್ಸವ ಪಥಸಂಚನಲದ ಸಂದರ್ಭದಲ್ಲಿ ಕಪ್ಪು ಬಾವುಟ ಪ್ರದರ್ಶಿಸಲು ಸಿದ್ದತೆ ನಡೆಸಿದ್ದತುಂಗಭದ್ರಾ ನೀರಾವರಿ ವಲಯದ ಹಂಗಾಮಿ ನೌಕರರನ್ನು ಪೊಲೀಸರು ಬಂಧಿಸಿದರು.

Vijaya Karnataka Web 15 Aug 2018, 10:04 am
ರಾಯಚೂರು: ಸ್ವಾತಂತ್ರ್ಯೋತ್ಸವ ಪಥಸಂಚನಲದ ಸಂದರ್ಭದಲ್ಲಿ ಕಪ್ಪು ಬಾವುಟ ಪ್ರದರ್ಶಿಸಲು ಸಿದ್ದತೆ ನಡೆಸಿದ್ದತುಂಗಭದ್ರಾ ನೀರಾವರಿ ವಲಯದ ಹಂಗಾಮಿ ನೌಕರರನ್ನು ಪೊಲೀಸರು ಬಂಧಿಸಿದರು.
Vijaya Karnataka Web black.


ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಸ್ಥಳದಿಂದ ಕರೆದೊಯ್ದರು.

ಪೊಲೀಸರು ಮೊದಲೇ ಧರಣಿ ನಡೆಸದಂತೆ ದಿಗ್ಬಂಧನ ವಿಧಿಸಿದ್ದರು. ಆದರೂ ಸಚಿವರ ಎದುರು ಕಪ್ಪುಬಾವುಟ ಪ್ರದರ್ಶನಕ್ಕೆ ಮುಂದಾದವರನ್ನು ಪೊಲೀಸರು ಬಂಧಿಸಿ ಕರೆದೊಯ್ದರು. ಪೊಲೀಸರು ಐದಕ್ಕೂ ಹೆಚ್ಚು ಬಸ್‌ಗಳಲ್ಲಿ ಕಾರ್ಮಿಕರನ್ನು ಕರೆದೊಯ್ದರು.

ಟಿಪ್ಪು ಸುಲ್ತಾನ್‌ ಗಾರ್ಡನ್ ಸುತ್ತಲು ಬಿಗಿ ಭದ್ರತೆ ವ್ಯವಸ್ಥೆ ಕಲ್ಪಿಸಿ ಪ್ರತಿಭಟನಾಕಾರರು ಹೊರಬರದಂತೆ ಸುತ್ತಲೂ ಪೊಲೀಸರು ಕಾವಲು ಹಾಕಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ