ಆ್ಯಪ್ನಗರ

ಬಸ್ ಚಾಲಕ ಹೃದಯಾಘಾತದಿಂದ ಸಾವು

ಮಂತ್ರಾಲಯದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಚಾಲಕರೊಬ್ಬರು ಬಸ್‌ನಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Vijaya Karnataka Web 22 Aug 2018, 2:50 pm
ರಾಯಚೂರು: ಮಂತ್ರಾಲಯದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಚಾಲಕರೊಬ್ಬರು ಬಸ್‌ನಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಶಂಕರ್ (52) ಮೃತಪಟ್ಟವರು.
Vijaya Karnataka Web death jpge


ಶಂಕರ್‌ ಅವರು ಬೆಂಗಳೂರಿನಿಂದ ಮಂತ್ರಾಲಯಕ್ಕೆ ಆಗಮಿಸಿದ್ದ ಬೆಂಗಳೂರು ಸೆಂಟ್ರಲ್ ಡಿಪೊಗೆ ಸೇರಿದ ಬಸ್‌ನ ಚಾಲಕರು. ರಾತ್ರಿ ಹೊರಟಿದ್ದ ಬಸ್‌ ಬೆಳಗ್ಗೆ ಮಂತ್ರಾಲಯ ತಲುಪಿದ ಬಳಿಕ ಈ ಘಟನೆ ನಡೆದಿದೆ.

ಹೃದಯಾಘಾತಕ್ಕೊಳಗಾದಾಗ ತುರ್ತಾಗಿ ಚಾಲಕ ಶಂಕರ್ ಅವರನ್ನು ಅಧಿಕಾರಿಗಳು ಚಿಕಿತ್ಸೆಗೆ ಕರೆದೊಯ್ಯದಿರುವುದೇ ಸಾವಿಗೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ