ಮಸ್ಕಿ : ನಾನಾ ಪಕ್ಷದ ಅಭ್ಯರ್ಥಿಗಳು ಸೋಮವಾರ ಚುನಾವಣಾ ಅಧಿಕಾರಿ ಡಾ.ಚೇತನಾ ಪಾಟೀಲ ಅವರಿಗೆ ಲಿಂಗಸುಗೂರಿನ ಮಿನಿ ವಿಧಾನ ಸೌಧದಲ್ಲಿ ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಪಕ್ಷ ದ ಅಭ್ಯರ್ಥಿ, ಶಾಸಕ ಪ್ರತಾಪಗೌಡ ಪಾಟೀಲ್ ಮೂರು ಪ್ರತಿ ನಾಮಪತ್ರ ಸಲ್ಲಿಸಿದರು. ಕೆಪಿಸಿಸಿ ಸದಸ್ಯ ಅಂದಾನಪ್ಪ ಗುಂಡಳ್ಳಿ, ಗ್ರಾಮೀಣ ಬ್ಲಾಕ್ ಅಧ್ಯಕ್ಷ ಬಸವರಾಜಸ್ವಾಮಿ ಹಸ್ಮಕಲ್, ಹನುಮಂತಪ್ಪ ಮುದ್ದಾಪೂರು, ತಾಪಂ ಸದಸ್ಯ ಈಶಪ್ಪ ದೇಸಾಯಿ, ಮಲ್ಲಿಕಾರ್ಜುನ ಬ್ಯಾಳಿ, ನಿರುಪಾದೆಪ್ಪ ವಕೀಲರು, ಡಾ.ಶಿವಶರಣಪ್ಪ ಇತ್ಲಿ ಇತರರಿದ್ದರು.
ಬಿಜೆಪಿ ಅಭ್ಯರ್ಥಿ ಆರ್.ಬಸನಗೌಡ ತುರ್ವಿಹಾಳ ಅವರು ಮೂರು ಪ್ರತಿ ನಾಮಪತ್ರಗಳನ್ನು ಸಲ್ಲಿಸಿದರು. ಕೇಂದ್ರ ಮಾಜಿ ಸಚಿವ ಬಿಜೆಪಿ ಹಿರಿಯ ಮುಖಂಡ ಬಸವರಾಜ ಪಾಟೀಲ್ ಅನ್ವರಿ, ಅಪ್ಪಾಜಿಗೌಡ ಕಾರ್ಲಕುಂಟಿ, ಬಸನಗೌಡ ಮುದಬಾಳ, ಶಿವನಗೌಡ ಇತರರಿದ್ದರು.
ಜೆಡಿಎಸ್ ಪಕ್ಷ ದ ಅಭ್ಯರ್ಥಿ ರಾಜಾ ಸೋಮನಾಥ ನಾಯಕ ನಾಮಪತ್ರ ಸಲ್ಲಿಸಿದರು. ಅಮರೇಶ ಹಂಚಿನಾಳ, ಮೃತ್ಯುಂಜಯಸ್ವಾಮಿ ಗೂಗೆಬಾಳ, ಶಿವಪ್ಪ ಇತರರಿದ್ದರು.
ಪಕ್ಷೇತರ ಅಭ್ಯರ್ಥಿ ರಾಣಿ ತಾರಾ ಮತ್ತು ಅಮರೇಶ ಮಾಟೂರು ನಾಮಪತ್ರ ಸಲ್ಲಿಸಿದರು.
ಮೂರು ಪಕ್ಷ ಗಳಿಂದ ಬೃಹತ್ ಮೆರವಣಿಗೆ ನಡೆಯಿತು.
ಸೇರ್ಪಡೆ: ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷ ದ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿಯ ಹಿರಿಯ ಮುಖಂಡ ಮಹಾದೇವಪ್ಪಗೌಡ ಪೊಲೀಸ್ ಪಾಟೀಲ್, ಸೋಮವಾರ ಕಾಂಗ್ರೆಸ್ ಪಕ್ಷ ದಿಂದ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಪುರಸಭೆ ಅಧ್ಯಕ್ಷ , ಉಪಾಧ್ಯಕ್ಷ , ಸದಸ್ಯರು ಹಾಗೂ ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆಯಾದರು.
ಕಾಂಗ್ರೆಸ್ ಪಕ್ಷ ದ ಅಭ್ಯರ್ಥಿ, ಶಾಸಕ ಪ್ರತಾಪಗೌಡ ಪಾಟೀಲ್ ಮೂರು ಪ್ರತಿ ನಾಮಪತ್ರ ಸಲ್ಲಿಸಿದರು. ಕೆಪಿಸಿಸಿ ಸದಸ್ಯ ಅಂದಾನಪ್ಪ ಗುಂಡಳ್ಳಿ, ಗ್ರಾಮೀಣ ಬ್ಲಾಕ್ ಅಧ್ಯಕ್ಷ ಬಸವರಾಜಸ್ವಾಮಿ ಹಸ್ಮಕಲ್, ಹನುಮಂತಪ್ಪ ಮುದ್ದಾಪೂರು, ತಾಪಂ ಸದಸ್ಯ ಈಶಪ್ಪ ದೇಸಾಯಿ, ಮಲ್ಲಿಕಾರ್ಜುನ ಬ್ಯಾಳಿ, ನಿರುಪಾದೆಪ್ಪ ವಕೀಲರು, ಡಾ.ಶಿವಶರಣಪ್ಪ ಇತ್ಲಿ ಇತರರಿದ್ದರು.
ಬಿಜೆಪಿ ಅಭ್ಯರ್ಥಿ ಆರ್.ಬಸನಗೌಡ ತುರ್ವಿಹಾಳ ಅವರು ಮೂರು ಪ್ರತಿ ನಾಮಪತ್ರಗಳನ್ನು ಸಲ್ಲಿಸಿದರು. ಕೇಂದ್ರ ಮಾಜಿ ಸಚಿವ ಬಿಜೆಪಿ ಹಿರಿಯ ಮುಖಂಡ ಬಸವರಾಜ ಪಾಟೀಲ್ ಅನ್ವರಿ, ಅಪ್ಪಾಜಿಗೌಡ ಕಾರ್ಲಕುಂಟಿ, ಬಸನಗೌಡ ಮುದಬಾಳ, ಶಿವನಗೌಡ ಇತರರಿದ್ದರು.
ಜೆಡಿಎಸ್ ಪಕ್ಷ ದ ಅಭ್ಯರ್ಥಿ ರಾಜಾ ಸೋಮನಾಥ ನಾಯಕ ನಾಮಪತ್ರ ಸಲ್ಲಿಸಿದರು. ಅಮರೇಶ ಹಂಚಿನಾಳ, ಮೃತ್ಯುಂಜಯಸ್ವಾಮಿ ಗೂಗೆಬಾಳ, ಶಿವಪ್ಪ ಇತರರಿದ್ದರು.
ಪಕ್ಷೇತರ ಅಭ್ಯರ್ಥಿ ರಾಣಿ ತಾರಾ ಮತ್ತು ಅಮರೇಶ ಮಾಟೂರು ನಾಮಪತ್ರ ಸಲ್ಲಿಸಿದರು.
ಮೂರು ಪಕ್ಷ ಗಳಿಂದ ಬೃಹತ್ ಮೆರವಣಿಗೆ ನಡೆಯಿತು.
ಸೇರ್ಪಡೆ: ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷ ದ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿಯ ಹಿರಿಯ ಮುಖಂಡ ಮಹಾದೇವಪ್ಪಗೌಡ ಪೊಲೀಸ್ ಪಾಟೀಲ್, ಸೋಮವಾರ ಕಾಂಗ್ರೆಸ್ ಪಕ್ಷ ದಿಂದ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಪುರಸಭೆ ಅಧ್ಯಕ್ಷ , ಉಪಾಧ್ಯಕ್ಷ , ಸದಸ್ಯರು ಹಾಗೂ ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆಯಾದರು.