ಆ್ಯಪ್ನಗರ

ಒಂದೇ ಪಕ್ಷಕ್ಕೆ ಬಹುಮತ ಸಿಗುವುದು ಕಷ್ಟ; ಹೀಗಾಗಿ ಸಮ್ಮಿಶ್ರ ಸರಕಾರ ರಚನೆ ಅನಿವಾರ್ಯ: ಸಿದ್ದರಾಮಯ್ಯ

ದೇಶದಲ್ಲಿ ಪ್ರಧಾನಿ ಆಗೋ ಅರ್ಹತೆ ನರೇಂದ್ರ ಮೋದಿ ಒಬ್ಬರಿಗೇ ಅಲ್ಲ. ಲಕ್ಷಾಂತರ ಜನರಿಗಿದೆ. ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ, ಆಂಧ್ರ ಪ್ರದೇಶ ಸಿಎಂ ಹಾಗೂ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಮಾಜಿ ಪ್ರಧಾನಿ ದೇವೇಗೌಡರಂತಹ ಯೋಗ್ಯ ನಾಯಕರು ಘಟಬಂಧನದಲ್ಲಿ ಇದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

Vijaya Karnataka Web 17 Feb 2019, 8:47 pm
ರಾಯಚೂರು: ಇದು ಸಮ್ಮಿಶ್ರ ಸರಕಾರಗಳ ಕಾಲ. ಒಂದೇ ಪಕ್ಷಕ್ಕೆ ಬಹುಮತ ಸಿಗುವುದು ಕಷ್ಟಕರ. ಹೀಗಾಗಿ ಸಮ್ಮಿಶ್ರ ಸರಕಾರ ರಚನೆ ಅನಿವಾರ್ಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಜಿಲ್ಲೆಯ ದೇವದುರ್ಗ ತಾಲೂಕಿನ ವಿರಗೋಟದಲ್ಲಿ ಮಾಜಿ ಸಿಎಂ ಈ ಹೇಳಿಕೆ ನೀಡಿದ್ದಾರೆ.
Vijaya Karnataka Web Siddaramaiah


ಮಹಾಘಟಬಂದನದಲ್ಲಿ ಪ್ರಧಾನಿಯಾಗುವಂತಹ ಅಭ್ಯರ್ಥಿಗಳು ಯಾರಿಲ್ಲವೆಂಬ ಅಮಿತ್ ಷಾ ಹೇಳಿಕೆಗೆ ಸಿದ್ದರಾಮಯ್ಯ ಎದಿರೇಟು ನೀಡಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವಿರಗೋಟದಲ್ಲಿ ಈ ಸಂಬಂಧ ಮಾತನಾಡಿದ ಸಿದ್ದರಾಮಯ್ಯ, ದೇಶದಲ್ಲಿ ಪ್ರಧಾನಿ ಆಗೋ ಅರ್ಹತೆ ನರೇಂದ್ರ ಮೋದಿ ಒಬ್ಬರಿಗೇ ಅಲ್ಲ. ಲಕ್ಷಾಂತರ ಜನರಿಗಿದೆ ಎಂದು ಪರೋಕ್ಷವಾಗಿ ಮೋದಿ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ, ಆಂಧ್ರ ಪ್ರದೇಶ ಸಿಎಂ ಹಾಗೂ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಮಾಜಿ ಪ್ರಧಾನಿ ದೇವೇಗೌಡರಂತಹ ಯೋಗ್ಯ ನಾಯಕರು ಘಟಬಂಧನದಲ್ಲಿ ಇದ್ದಾರೆ. ಇನ್ನು, ಯುಪಿಎ ಅವಧಿಗಿಂತ ಎನ್‌ಡಿಎ ಅವಧಿಯಲ್ಲಿ ರಾಜ್ಯಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂದು ಬಿಜೆಪಿಯವರು ಹೇಳುತ್ತಾರೆ. ಆದರೆ, ಪ್ರತಿ ವರ್ಷ ತೆರಿಗೆ ವಸೂಲಿಯಲ್ಲಿ ಹೆಚ್ಚಳವಾಗುತ್ತದೆ. ಅದರಂತೆ ಹೆಚ್ಚಿನ ಅನುದಾನ ರಾಜ್ಯಕ್ಕೆ ಬಂದಿದೆ. ಮೋದಿ ತಮ್ಮ ಮನೆಯಿಂದ ಅನುದಾನ ನೀಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಹಾಗೂ ಮೋದಿ ಸರಕಾರದ ವಿರುದ್ಧ ಟೀಕೆ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ