ಆ್ಯಪ್ನಗರ

ಕೊರೊನಾ ಭೀತಿ: ಜುಲೈ 15 ರಿಂದ ರಾಯಚೂರು, ಸಿಂಧನೂರು ಒಂದು ವಾರ ಲಾಕ್‌ಡೌನ್‌

ದಿನದಿಂದ ದಿನಕ್ಕೆ ಕೊರೊನಾ ವೈರಸ್‌ ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಿರುವ ಹಿನ್ನೆಲೆ ರಾಯಚೂರು ಹಾಗೂ ಸಿಂಧನೂರು ನಗರಗಳಲ್ಲಿ ಜುಲೈ 15 ರಿಂದ ಒಂದು ವಾರ ಲಾಕ್‌ಡೌನ್‌ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. ಉಳಿದ ತಾಲೂಕುಗಳಲ್ಲಿ ಮಧ್ಯಾಹ್ನ 2 ರವರೆಗೆ ಮಾತ್ರ ವ್ಯವಹಾರಕ್ಕೆ ಅವಕಾಶ ನೀಡಲಾಗಿದೆ.

Vijaya Karnataka Web 13 Jul 2020, 7:10 pm
ರಾಯಚೂರು: ಕೊರೊನಾ ಪಾಸಿಟಿವ್‌ ಪ್ರಕರಣಗಳು ಏರಿಕೆ ಹಿನ್ನೆಲೆ ಸಿಂಧನೂರು ಹಾಗೂ ರಾಯಚೂರು ನಗರಗಳಲ್ಲಿ ಒಂದು ವಾರಗಳ ಕಾಲ ಲಾಕ್‌ಡೌನ್‌ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. ಜು.15 ರಿಂದ 22 ರವರೆಗೆ ಎರಡು ನಗರಗಳಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿರಲಿದೆ.
Vijaya Karnataka Web coronavirus outbreak one week lockdown imposed in raichur and sindhanur cities from july 15
ಕೊರೊನಾ ಭೀತಿ: ಜುಲೈ 15 ರಿಂದ ರಾಯಚೂರು, ಸಿಂಧನೂರು ಒಂದು ವಾರ ಲಾಕ್‌ಡೌನ್‌


ಸೋಮವಾರ ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟೇಶ್‌ ಕುಮಾರ್, ಎರಡು ನಗರಗಳಲ್ಲಿ ಮಾತ್ರ ಸಂಪೂರ್ಣ ಲಾಕ್‌ಡೌನ್‌ ಮಾಡಲಾಗುತ್ತದೆ. ಇನ್ನುಳಿದ ತಾಲೂಕುಗಳಲ್ಲಿ ಜುಲೈ 15 ರಿಂದ ಬೆಳಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಮಾತ್ರ ವಹಿವಾಟು ನಡೆಸಲು ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಲಾಕ್‌ಡೌನ್ ಪ್ರದೇಶದಲ್ಲಿ ಸಿಟಿ ಬಸ್ ಸಂಚಾರ ಇರುವುದಿಲ್ಲ. ಅಗತ್ಯ ವಸ್ತುಗಳ ವಹಿವಾಟಿಗೆ ಮಾತ್ರ ಅವಕಾಶ ಇರುತ್ತದೆ. ಮದುವೆ ಸೇರಿ ಹೆಚ್ಚು ಜನ ಸೇರುವ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಲಾಗಿದೆ. ಮದುವೆ ಕಾರ್ಯಕ್ರಮದಲ್ಲಿ ಕೇವಲ 20 ಜನರಿಗೆ ಅವಕಾಶ ನೀಡಲಾಗಿದೆ. ಕಲ್ಯಾಣ ಮಂಟಪ, ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಗೂ ನಿರ್ಬಂಧ ವಿಧಿಸಲಾಗಿದೆ ಎಂದು ಹೇಳಿದರು.

ಸಮುದಾಯದತ್ತ ಸೋಂಕು, ಹಳ್ಳಿಗಳಿಗೂ ಕಾಲಿಟ್ಟ ಕೊರೊನಾ, ಮೈಮರೆತ ಜನಜೀವನ

ರಾಯಚೂರು ಹಾಗೂ ಸಿಂಧನೂರು ನಗರ ಪ್ರದೇಶದಲ್ಲಿ ಮಾತ್ರ ಲಾಕ್ ಡೌನ್ ಜಾರಿಯಾಗಿದ್ದರೆ, ಉಳಿದೆಡೆ ಲಾಕ್‌ಡೌನ್‌ನ ಕಠಿಣ ನಿಯಮಗಳು ಜಾರಿಯಲ್ಲಿರುತ್ತವೆ. ಇನ್ನು, ಜಿಲ್ಲೆಯಲ್ಲಿ ಇದುವರೆಗೂ 718 ಪಾಸಿಟಿವ್‌ ಪ್ರಕರಣಗಳು ಕಂಡುಬಂದಿದ್ದು, ಅದರಲ್ಲಿ 465 ಜನ ಗುಣಮುಖರಾಗಿದ್ದರೆ, 8 ಜನ ಕೊರೊನಾ ಕಾರಣದಿಂದ ಸಾವನ್ನಪ್ಪಿದ್ದಾರೆ. ಇನ್ನೂ 245 ಪ್ರಕರಣಗಳು ಸಕ್ರಿಯವಾಗಿವೆ.

ರಾಯಚೂರಿನಲ್ಲಿಂದು 17 ಮಂದಿಗೆ ಕೊರೊನಾ ಪಾಸಿಟಿವ್..!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ