ಆ್ಯಪ್ನಗರ

ರಾಯಚೂರು: ಕೊರೊನಾ ಭೀತಿ, ವಿದೇಶ ಪ್ರವಾಸ ಮುಗಿಸಿ ಬಂದವರ ಮೇಲೆ ತೀವ್ರ ನಿಗಾ

ರಾಯಚೂರಿನಲ್ಲಿ ಐದು ಜನರ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಜಿಲ್ಲೆಯ ಯಾವುದೇ ಶಾಲೆಗಳಲ್ಲಿ ಬೇಸಿಗೆ ರಜೆಯನ್ನು ನಡೆಸಬೇಡಿ ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

Vijaya Karnataka Web 13 Mar 2020, 3:29 pm
ರಾಯಚೂರು: ವಿದೇಶ ಪ್ರವಾಸದಿಂದ ಇತ್ತೇಚೆಗೆ ರಾಯಚೂರಿಗೆ ಬಂದಿರುವ ಐವರ ಮೇಲೆ ತೀವ್ರ ನಿಗಾವಹಿಸಲಾಗಿದೆ. ಈ ಐವರಲ್ಲಿ ಒಬ್ಬರನ್ನು ಈಗಾಗಲೇ ಐಸೋಲೇಷನ್ ವಾರ್ಡನಲ್ಲಿರಿಸಿ ನಿಗಾವಹಿಸಲಾಗುತ್ತಿದೆ. ಅವರಲ್ಲಿ ಯಾವುದೇ ರೋಗ ಲಕ್ಷಣ ಸದ್ಯಕ್ಕೆ ಕಂಡು ಬಂದಿಲ್ಲ. ಇನ್ನುಳಿದಂತೆ ನಾಲ್ಕು ಜನರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದು ರಾಯಚೂರು ಜಿಲ್ಲಾಧಿಕಾರಿ ಆರ್ ವೆಂಕಟೇಶ ಕುಮಾರ ಸ್ಪಷ್ಟನೆ ನೀಡಿದ್ದಾರೆ.
Vijaya Karnataka Web Mask


ಸಿಂಧನೂರಿನ ಮೂವರು ಹಾಗೂ ದೇವದುರ್ಗದ ಒಬ್ಬ ವ್ಯಕ್ತಿ ಕರೆತಂದು ರಿಮ್ಸ್ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಲಾಗಿದೆ. ನಾಲ್ವರಲ್ಲಿ ಯಾವುದೇ ರೋಗದ ಲಕ್ಷಣಗಳಿಲ್ಲದಿದ್ದರೂ ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ನಿನ್ನೆ ಇಟಲಿಗೆ ಹೋಗಿಬಂದಿದ್ದ ರಾಯಚೂರಿನ ವ್ಯಕ್ತಿಯ ಆರೋಗ್ಯ ತಪಾಸಣೆ ನಡೆಸಲಾಗಿತ್ತು. ರಿಮ್ಸ್ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆದಿತ್ತು. ಇದರ ಜತೆಗೆ ವದಂತಿಗಳಿಗೆ ಕಿವಿಗೊಡದಂತೆ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಮನವಿ ಮಾಡಿಕೊಂಡಿದ್ದಾರೆ.

ಕೊರೊನಾ ವೈರಸ್ ರಾಜ್ಯದಲ್ಲಿ ಹಬ್ಬತ್ತಿರುವ ಬಗ್ಗೆ ಭೀತಿ ಉಂಟಾಗಿದ್ದು, ಶಾಲಾ- ಮಕ್ಕಳಿಗೆ ಬೇಸಿಗೆ ಶಿಬಿರ ನಡೆಸದಂತೆ ಡಿಸಿ ಆದೇಶ ಹೊರಡಿಸಿದ್ದಾರೆ. ಯಾವುದೇ ಬೇಸಿಗೆ ಶಿಬಿರ ನಡೆಸಲು ಅನುಮತಿ ನೀಡಬಾರದು ಎಂದು ಡಿಡಿಪಿಐ ಗೆ ಸೂಚನೆ ನೀಡಲಾಗಿದೆ.

ವಿದೇಶದಿಂದ ಬಂದ ವ್ಯಕ್ತಿ ಮನೆಯಲ್ಲಿ ಇದ್ದರೆ ಆ ವ್ಯಕ್ತಿ ಗೆ ವೈದ್ಯರು ನಿತ್ಯ ತಪಾಸಣೆ ಮಾಡಬೇಕು ಎಂದು ಆದೇಶಿಸಿದ್ದಾರೆ. ಇದರ ಜೊತೆಗೆ ರಾಯಚೂರು ಜಿಲ್ಲೆಯಲ್ಲಿ ಇರುವ ಎಲ್ಲಾ ಕ್ಲಬ್ ಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ