ಆ್ಯಪ್ನಗರ

ರಾಯಚೂರಿಗೆ ವಿಮಾನ ನಿಲ್ದಾಣ, ಏಮ್ಸ್‌ ತರಲು ಹೋರಾಟಕ್ಕೂ ಸಿದ್ದ: ಡಿಸಿಎಂ ಲಕ್ಷ್ಮಣ ಸವದಿ

ವಿಮಾನ ನಿಲ್ದಾಣ ನಿರ್ಮಾಣದಿಂದ ಜಿಲ್ಲೆಯ ಸಮಗ್ರ ಪ್ರಗತಿಗೆ ಅವಕಾಶವಿದೆ. ​​ಹೀಗಾಗಿ ನಿಲ್ದಾಣ ನಿರ್ಮಾಣಕ್ಕಾಗಿ ವಿಸ್ತೃತ ಯೋಜನಾ ವರದಿ ತಯಾರಿಸಲು ಸೂಚನೆ ನೀಡಿದ್ದಾನೆ. ಅಲ್ಲದೆ ರಾಯಚೂರು ಜಿಲ್ಲೆಗೆ ಏಮ್ಸ್ ದೊರೆಯಬೇಕೆಂಬುದು ತಮ್ಮ ಬಯಕೆ. ಈ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಇದಕ್ಕಾಗಿ ಹೋರಾಟ ಮಾಡಲು ಸಿದ್ದವಿದ್ದೇನೆ ಎಂದು ತಿಳಿಸಿದ್ದಾರೆ.

Vijaya Karnataka Web 17 Sep 2020, 11:42 am
ರಾಯಚೂರು: ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ವಿಸ್ತೃತ ಯೋಜನಾ ವರದಿ ತಯಾರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಕಲ್ಯಾಣ ಕರ್ನಾಟಕ ದಿನಾಚರಣೆಯ ಧ್ವಜಾರೋಹಣ ನಂತರ ಮಾತನಾಡಿದ ಡಿಸಿಎಂ, ವಿಮಾನ ನಿಲ್ದಾಣ ನಿರ್ಮಾಣದಿಂದ ಜಿಲ್ಲೆಯ ಸಮಗ್ರ ಪ್ರಗತಿಗೆ ಅವಕಾಶವಿದೆ.
Vijaya Karnataka Web savadi


ಹೀಗಾಗಿ ನಿಲ್ದಾಣ ನಿರ್ಮಾಣಕ್ಕಾಗಿ ವಿಸ್ತೃತ ಯೋಜನಾ ವರದಿ ತಯಾರಿಸಲು ಸೂಚನೆ ನೀಡಿದ್ದಾನೆ. ಅಲ್ಲದೆ ರಾಯಚೂರು ಜಿಲ್ಲೆಗೆ ಏಮ್ಸ್ ದೊರೆಯಬೇಕೆಂಬುದು ತಮ್ಮ ಬಯಕೆ. ಈ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಇದಕ್ಕಾಗಿ ಹೋರಾಟ ಮಾಡಲು ಸಿದ್ದವಿದ್ದೇನೆ ಎಂದು ತಿಳಿಸಿದ್ದಾರೆ.

ಇನ್ನು ನಗರದ ಅಭಿವೃದ್ಧಿಗಾಗಿ 100 ಕೋಟಿ ನೀಡಲಾಗಿದೆ. ಆದರೆ ಮಳೆಗಾಲದ ನಂತರ ಕಾಮಗಾರಿ ಆರಂಭವಾಗಲಿದೆ. ಕೊರೊನಾದಿಂದಾಗಿ ಸ್ವಲ್ಪ ಅಭಿವೃದ್ಧಿ ಕುಂಠಿತವಾಗಿದೆ. ರಾಜ್ಯದ ರಾಜಸ್ವ ಆದಾಯ ಕುಸಿತವಾಗಿದೆ ಎಂದಿರುವ ಡಿಸಿಎಂ ಸವದಿ, ಇದುವರೆಗೆ ಶೇ. 35 ಮಾತ್ರ ಆದಾಯ ಸಂಗ್ರಹವಾಗಿದೆ ಎಂದು ತಿಳಿಸಿದ್ದಾರೆ.

ಪ್ರವಾಹದಿಂದ 8,700 ಕೋಟಿ ರೂ. ಹಾನಿ, ಕೇಂದ್ರದಿಂದ 325 ಕೋಟಿ ಪರಿಹಾರ -ಆರ್‌ ಅಶೋಕ್‌

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ