ಆ್ಯಪ್ನಗರ

ರಾಯಚೂರು: ನೀರಿನಲ್ಲಿ ಮುಳುಗಿ ತಾಯಿ ಮತ್ತು ಇಬ್ಬರು ಮಕ್ಕಳು ಸಾವು

ತಾಯಿ ಮತ್ತು ಆಕೆಯ ಇಬ್ಬರು ಮಕ್ಕಳು ಬಟ್ಟೆ ತೊಳೆಯಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

Vijaya Karnataka Web 30 Aug 2020, 11:29 am
ರಾಯಚೂರು: ಹಳ್ಳಕ್ಕೆ ಬಟ್ಟೆ ತೊಳೆಯಲು ತೆರಳಿದ್ದ ವೇಳೆ ನೀರಿನಲ್ಲಿ ಅಮ್ಮ ಮತ್ತು ಮಕ್ಕಳು ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಆ.30ರಂದು ನಡೆದಿದೆ.
Vijaya Karnataka Web ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ


ಲಿಂಗಸ್ಗೂರು ತಾಲೂಕಿನ ಹಟ್ಟಿ ಸಮೀಪದ ಕೋಠಾ ಗ್ರಾಮದ ಹಿರೇಹಳ್ಳಕ್ಕೆ ಬಟ್ಟೆ ತೊಳೆಯಲು ತೆರಳಿದ್ದ ತಾಯಿ‌ ಮತ್ತು ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಪಾರ್ವತಿ (28), ಮಗ ಅರ್ಜುನ್(9), ಸಂಬಂಧಿ ಶಿಲ್ಪಾ(10) ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ದೈವಿಗಳು.

ಗ್ರಾಮದ ಬಳಿಯ ಹಿರೇಹಳ್ಳಕ್ಕೆ ಬಟ್ಟೆ ತೊಳೆಯಲು ಹೋದಾಗ ಶನಿವಾರ ಸಂಜೆ ಈ ಘಟನೆ ನಡೆದಿದ್ದು ಆ.3oರಂದು ಪ್ರಕರಣ ಬೆಳಕಿಗೆ ಬಂದಿದೆ.

ಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ