ಆ್ಯಪ್ನಗರ

ಸಾಲಬಾಧೆ: ರೈತ ಆತ್ಮಹತ್ಯೆ

ಸಾಲಬಾಧೆ ತಾಳದ ರೈತರೊಬ್ಬರು, ತಾಲೂಕಿನ ಚಿರತನಾಳದಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Vijaya Karnataka 8 Sep 2018, 12:00 am
ಸಿಂಧನೂರು (ರಾಯಚೂರು): ಸಾಲಬಾಧೆ ತಾಳದ ರೈತರೊಬ್ಬರು, ತಾಲೂಕಿನ ಚಿರತನಾಳದಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web debt farmers suicide
ಸಾಲಬಾಧೆ: ರೈತ ಆತ್ಮಹತ್ಯೆ


ರೈತ ಅಮರೇಶ ಬಪ್ಪೂರು (42) ಮೃತರು. ಭತ್ತದ ಗದ್ದೆಯನ್ನು ಗುತ್ತಿಗೆ ಆಧಾರದಲ್ಲಿ ಬೇಸಾಯ ಮಾಡುತ್ತಿದ್ದ ಅವರು, ಖಾಸಗಿಯಾಗಿ 15 ಲಕ್ಷ ರೂಪಾಯಿ ಸಾಲ ಮಾಡಿದ್ದರು. ಸತತ ಬೆಳೆ ನಷ್ಟದಿಂದ ಖಾಸಗಿ ಸಾಲ, ಬಡ್ಡಿ ಹೆಚ್ಚಿದೆ. ಸಾಲ ತೀರಿಸಲಾಗದ ಚಿಂತೆಯಲ್ಲಿದ್ದ ಅವರು, ಗುರುವಾರ ಹೊಲದಲ್ಲಿ ವಿಷ ಕುಡಿದಿದ್ದರು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಸ್ಥಳೀಯರು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್ಗೆ ದಾಖಲಿಸಿದರು. ಚಿಕಿತ್ಸೆಗೆ ಸ್ಪಂದಿಸದ ರೈತ ಅಮರೇಶ ಬಪ್ಪೂರು, ಶುಕ್ರವಾರ ಮೃತಪಟ್ಟಿದ್ದಾರೆ. ಈ ರೈತಗೆ ಪತ್ನಿ, ಒಬ್ಬ ಪುತ್ರ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ತುರುವಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ