ಆ್ಯಪ್ನಗರ

ಮಹಾನ್‌ ನಾಯಕರ ಜಯಂತಿ ಸರಳ ಆಚರಣೆಗೆ ನಿರ್ಧಾರ

ಈ ತಿಂಗಳು ನಡೆಯಲಿರುವ ಪುಣ್ಯ ಪುರುಷರ ಜಯಂತಿಗಳನ್ನು ಸರಳವಾಗಿ ಆಚರಿಸಲು ತಾಲೂಕು ಆಡಳಿತ ನಿರ್ಧರಿಸಿತು.

Vijaya Karnataka 9 Jan 2020, 3:05 pm
ಲಿಂಗಸುಗೂರು: ಈ ತಿಂಗಳು ನಡೆಯಲಿರುವ ಪುಣ್ಯ ಪುರುಷರ ಜಯಂತಿಗಳನ್ನು ಸರಳವಾಗಿ ಆಚರಿಸಲು ತಾಲೂಕು ಆಡಳಿತ ನಿರ್ಧರಿಸಿತು.
Vijaya Karnataka Web decision to celebrate the great leaders jayanti
ಮಹಾನ್‌ ನಾಯಕರ ಜಯಂತಿ ಸರಳ ಆಚರಣೆಗೆ ನಿರ್ಧಾರ


ಪಟ್ಟಣದ ಮಿನಿ ವಿಧಾನಸೌಧದಲ್ಲಿತಹಸೀಲ್ದಾರ್‌ ಚಾಮರಾಜ ಪಾಟೀಲ್‌ ಅಧ್ಯಕ್ಷತೆಯಲ್ಲಿಬುಧವಾರ ನಡೆದ ಜಯಂತಿ ಆಚರಣೆ ಪೂರ್ವಭಾವಿ ಸಭೆಯ ನಡೆಯಿತು. ಸಭೆಯಲ್ಲಿಮಾತನಾಡಿದ ತಹಸೀಲ್ದಾರ್‌, ಜ.15ರಂದು ಶಿವಯೋಗಿ ಸಿದ್ಧರಾಮೇಶ್ವರ, ಜ.19ಕ್ಕೆ ಮಹಾಯೋಗಿ ವೇಮನ, ಜ.21ರಂದು ಅಂಬಿಗರ ಚೌಡಯ್ಯ ಜಯಂತಿ ಇದ್ದು, ಜಯಂತಿ ಆಚರಣೆಗೆ ಸರಕಾರದ ಅನುದಾನ ಸಾಲುತ್ತಿಲ್ಲ. ಹೀಗಾಗಿ ಸರಕಾರಿ ಕಚೇರಿಯಲ್ಲಿಸರಳವಾಗಿ ಜಯಂತಿ ಆಚರಿಸಲಾಗುವುದು. ಸಮಾಜದವರು ಜಯಂತಿ ದಿನದಂದು ಪೂಜಾ ಕಾರ್ಯಕ್ರಮದಲ್ಲಿಭಾಗವಹಿಸಬೇಕು ಎಂದು ಹೇಳಿದರು. ಅದೇ ಜ.26ರಂದು ಗಣರಾಜ್ಯೋತ್ಸವ ಸಮಾರಂಭವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿಹಮ್ಮಿಕೊಳ್ಳಲಾಗುವುದು ಎಂದರು.

ಸಭೆಯಲ್ಲಿನಾನಾ ಸಮುದಾಯಗಳ ಮುಖಂಡರು ಹಾಗೂ ಇಲಾಖಾಧಿಕಾರಿಗಳು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ