ಆ್ಯಪ್ನಗರ

ಕುಡಿವ ನೀರಿನ ಸಮಸ್ಯೆ ಪರಿಹರಿಸಲು ಆಗ್ರಹ

ತಾಲೂಕಿನಲ್ಲಿನ ಕುಡಿವ ನೀರಿನ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಸಿಪಿಐ ಮತ್ತು ಎಐಟಿಯುಸಿ ಕಾರ್ಯಕರ್ತರು ಶುಕ್ರವಾರ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.

Vijaya Karnataka 18 May 2019, 5:00 am
ಲಿಂಗಸುಗೂರು : ತಾಲೂಕಿನಲ್ಲಿನ ಕುಡಿವ ನೀರಿನ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಸಿಪಿಐ ಮತ್ತು ಎಐಟಿಯುಸಿ ಕಾರ್ಯಕರ್ತರು ಶುಕ್ರವಾರ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.
Vijaya Karnataka Web RAC-RCH17LNG01


ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಕುಡಿವ ನೀರಿಗಾಗಿ ಹಾಹಾಕಾರ ಎದ್ದಿದ್ದು, ಕೂಡಲೇ ಇದಕ್ಕೆ ಪರ್ಯಾಯ ವ್ಯವಸ್ಥೆ ಮಾಡಬೇಕು. ಜನ-ಜಾನವಾರುಗಳಿಗೆ ಕುಡಿವ ನೀರಿಗೆ ತೊಂದರೆಯಾಗದಂತೆ ಎಚ್ಚರವಹಿಸಬೇಕು. ನರೇಗಾದಡಿ 100 ದಿನಗಳ ಬದಲು 200 ದಿನಗಳ ಕೆಲಸ ನೀಡಬೇಕು. ಬರ ಕಾಮಗಾರಿ ತುರ್ತಾಗಿ ಪ್ರಾರಂಭಿಸಿ ಗುಳೆ ಹೋಗುವುದನ್ನು ತಪ್ಪಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ರೈತರಿಗೆ ತಿಂಗಳು ಮೂರು ಸಾವಿರ ರೂ. ವೇತನ, ಹಟ್ಟಿ ಚಿನ್ನದ ಗಣಿಯಲ್ಲಿ ತುಂಡು ಗುತ್ತಿಗೆ ನಿಲ್ಲಿಸಿ ಹಾಗೂ ಗಣಿಗಾರಿಕೆಗೆ ನಿಕ್ಷೇಪಗಳ ಸರ್ವೆ ಕಂಪನಿಯೇ ಮುಂದುವರಿಸಬೇಕು ಸೇರಿ ಇನ್ನಿತರ ಬೇಡಿಕೆ ಮನವಿ ಸಲ್ಲಿಸಿದರು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ವೆಂಕೋಬ ನಾಯಕ, ಎಐಟಿಯುಸಿ ಹಟ್ಟಿ ಘಟಕ ಅಧ್ಯಕ್ಷ ಶಾಂತಪ್ಪ ಆನ್ವರಿ, ಅಮರಪ್ಪ ಸರ್ಜಾಪುರ ಸೇರಿ ಇನ್ನಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ