ಆ್ಯಪ್ನಗರ

ವೇತನ, ಭತ್ಯೆ ಹೆಚ್ಚಳಕ್ಕೆ ಆಗ್ರಹ

ಆರ್‌ಟಿಪಿಎಸ್‌ ಗುತ್ತಿಗೆ ಕಾರ್ಮಿಕರ ವೇತನ ಹಾಗೂ ಭತ್ಯೆ ಹೆಚ್ಚಳಕ್ಕೆ ಒತ್ತಾಯಿಸಿ ಟಿಯುಸಿಐ ನೇತೃತ್ವದಲ್ಲಿಆರ್‌ಟಿಪಿಎಸ್‌ ಕಾರ್ಮಿಕರು ಆರ್‌ಟಿಪಿಎಸ್‌ ಘಟಕದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಸೋಮವಾರ ಬೃಹತ್‌ ಬೈಕ್‌ರಾರ‍ಯಲಿ ನಡೆಸಿದರು.

Vijaya Karnataka 18 Sep 2019, 2:38 pm
ರಾಯಚೂರು: ಆರ್‌ಟಿಪಿಎಸ್‌ ಗುತ್ತಿಗೆ ಕಾರ್ಮಿಕರ ವೇತನ ಹಾಗೂ ಭತ್ಯೆ ಹೆಚ್ಚಳಕ್ಕೆ ಒತ್ತಾಯಿಸಿ ಟಿಯುಸಿಐ ನೇತೃತ್ವದಲ್ಲಿಆರ್‌ಟಿಪಿಎಸ್‌ ಕಾರ್ಮಿಕರು ಆರ್‌ಟಿಪಿಎಸ್‌ ಘಟಕದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಸೋಮವಾರ ಬೃಹತ್‌ ಬೈಕ್‌ರಾರ‍ಯಲಿ ನಡೆಸಿದರು.
Vijaya Karnataka Web demand for increase in wages and allowances
ವೇತನ, ಭತ್ಯೆ ಹೆಚ್ಚಳಕ್ಕೆ ಆಗ್ರಹ


ಬೈಕ್‌ ರಾರ‍ಯಲಿ ನಂತರ ನಗರದ ಟಿಪ್ಪು ಸುಲ್ತಾನ ಉದ್ಯಾನವನದ ಮುಂಭಾಗದಲ್ಲಿಕಾರ್ಮಿಕರು ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ರವಾನಿಸಿದರು. ಆರ್‌ಟಿಪಿಎಸ್‌ನಲ್ಲಿಸುಮಾರು 1500ಕ್ಕೂ ಅಧಿಕ ಗುತ್ತಿಗೆ ಕಾರ್ಮಿಕರು 25-30 ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಕಲ್ಲಿದ್ದಲು, ಹಾರು ಬೂದಿ, ತಾಂತ್ರಿಕ ನಿರ್ವಹಣೆ, ಅತಿಥಿ ಗೃಹ, ಕ್ಲೀನಿಂಗ್‌, ಚರಂಡಿ, ರಸ್ತೆ ಸೇರಿ ಅನೇಕ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದರು.

ಅನ್ಯಾಯ: ಅತ್ಯಂತ ಅಪಾಯಕಾರಿ ಕೆಲಸದಲ್ಲಿನಿಯುಕ್ತಿಗೊಳಿಸಿ ಕೆಲಸ ಮಾಡಿಸುತ್ತಿದ್ದಾರೆ. ಹಾರು ಬೂದಿ ಅತ್ಯಂತ ಅಪಾಯಕಾರಿಯಾಗಿದೆ. ಅಲ್ಲಿಯೂ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಆದರೆ ಕಾರ್ಮಿಕರಿಗೆ ಕನಿಷ್ಠ ಸೌಲಭ್ಯಗಳನ್ನು ನೀಡದೇ ಅನ್ಯಾಯ ಮಾಡಲಾಗುತ್ತಿದೆ. ಸುಮಾರು 8ರಿಂದ 10 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದು, ಗುಲಾಮರಂತೆ ದುಡಿಸಿಕೊಳ್ಳಲಾಗುತ್ತಿದೆ. ಕಾರ್ಮಿಕರಿಗೆ ಆರೋಗ್ಯ ತಪಾಸಣೆ, ಅಗತ್ಯ ಸಲಕರಣೆಗಳು ಸೇರಿ ಯಾವುದೇ ಸವಲತ್ತುಗಳಿಲ್ಲಎಂದರು.

ಆಗ್ರಹ:ಅಧಿಕಾರಿಗಳ ಗಮನಕ್ಕೂ ತಂದರೂ ಪ್ರಯೋಜನವಾಗಿಲ್ಲ. ಕಾರ್ಮಿಕರಿಗೆ ಶೇ.33ರಷ್ಟು ವೇತನ ಹೆಚ್ಚಳ ಮಾಡಬೇಕು. ಬೋನಸ್‌ ಪಾವತಿ ಮಾಡಬೇಕು, ಪ್ರತಿಯೊಬ್ಬರಿಗೆ ಶೇ.20ರಷ್ಟು ಬೋನಸ್‌ ನೀಡಬೇಕು. ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ನೀಡಬೇಕು, ಮುಂಗಡವಾಗಿ ವೇತನ ಪಾವತಿ ಮಾಡಬೇಕು, ಕಾರ್ಮಿಕ ಕಾಯಿದೆಗಳಂತೆ ಸೂಕ್ತ ಸೌಲಭ್ಯಗಳನ್ನು ಒದಗಿಸಬೇಕು, ಸಾಮಾಜಿಕ ಭದ್ರತೆ ನೀಡಬೇಕು, ಶಾಸನಬದ್ಧ ಸೌಕರ್ಯ, ಸೂಕ್ತ ಶೌಚಾಲಯ, ಕ್ಯಾಂಟಿ0ನ್‌ ವ್ಯವಸ್ಥೆ, ಉದ್ಯೋಗ ಚೀಟಿ, ವೇತನ ಪುಸ್ತಕ, ಸಾರಿಗೆ ಭತ್ಯೆ, ಹಬ್ಬಕ್ಕೆ ಮುಂಗಡ ವೇತನ ನೀಡಬೇಕು ಎಂದು ಆಗ್ರಹಿಸಿದರು.

ಟಿಯುಸಿಐ ರಾಜ್ಯಾಧ್ಯಕ್ಷ ಆರ್‌.ಮಾನಸಯ್ಯ, ಜಿಲ್ಲಾಧ್ಯಕ್ಷ ಜಿ.ಅಮರೇಶ ಪದಾಧಿಕಾರಿಗಳಾದ ಶ್ರೀನಿವಾಸರೆಡ್ಡಿ, ಮಹಾಂತಗೌಡ, ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿಗಳು ಸೇರಿ ಅನೇಕ ಕಾರ್ಮಿಕರು ಭಾಗವಹಿಸಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ